Panaji: ಫೆ.6 ರಂದು ಪ್ರಧಾನಿ ಮೋದಿ ಗೋವಾಗೆ ಭೇಟಿ; ಸಾರ್ವಜನಿಕ ಸಭೆ ಆಯೋಜಿಸಲು ಬಿಜೆಪಿ ಯೋಜನೆ


Team Udayavani, Jan 24, 2024, 2:29 PM IST

6-panaji

ಪಣಜಿ: ಫೆಬ್ರವರಿ 6 ರಿಂದ 9 ರವರೆಗೆ ಮಡಗಾಂವನಲ್ಲಿ ನಡೆಯಲಿರುವ ಭಾರತ ಸೌರ ವಿದ್ಯುತ್ ಸಪ್ತಾಹದ ಉದ್ಘಾಟನೆಗಾಗಿ ಫೆ. 6 ರಂದು ಗೋವಾದ ಮಡಗಾಂವಗೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಮಡಗಾಂವ್‍ನಲ್ಲಿ ಸಾರ್ವಜನಿಕ ಸಭೆ ಆಯೋಜಿಸಲು ಬಿಜೆಪಿ ಯೋಜಿಸಿದೆ. ಪಣಜಿಯಲ್ಲಿ ನಡೆದ ಬಿಜೆಪಿ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಪ್ರಾಥಮಿಕ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ, ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತಾನಾವಡೆ ಉಪಸ್ಥಿತಿಯಲ್ಲಿ ನಡೆದ ಈ ಸಭೆಗೆ ಮಡಗಾಂವ್ ಶಾಸಕ ದಿಗಂಬರ ಕಾಮತ್ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿತ್ತು. ಲಭ್ಯವಾಗಿರುವ ಮಾಹಿತಿ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಗೋವಾ ಲೋಕಸಭಾ ಕ್ಷೇತ್ರದ ಮೇಲೆ ಬಿಜೆಪಿ ವಿಶೇಷವಾಗಿ ಗಮನ ಹರಿಸಿದೆ ಎನ್ನಲಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಗೋವಾ ಲೋಕಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸುವಂತಾಗಿತ್ತು. ಹಾಗಾಗಿ ಪ್ರಧಾನಿ ಮಡಗಾಂವ್ ನಲ್ಲಿ ಸಾರ್ವಜನಿಕ ಸಭೆ ನಡೆಸಿದರೆ ಸಕಾರಾತ್ಮಕ ವಾತಾವರಣ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂಬ ವಿಶ್ವಾಸದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುಂಕಳ್ಳಿಯಲ್ಲಿ ಎನ್‍ಐಟಿ ಸಂಕೀರ್ಣ, ವೆರೆಯಲ್ಲಿ ನೌಕಾ ತರಬೇತಿ ಕಾಲೇಜು ಮತ್ತು ಇತರ ಎರಡು ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸುವ ಸಾಧ್ಯತೆಯಿದೆ.

ಈ ಕುರಿತು ಮುಖ್ಯಮಂತ್ರಿ ಪ್ರಮೋದ ಸಾವಂತ್ ಪ್ರತಿಕ್ರಿಯಿಸಿ, ಪ್ರಧಾನಿ ಭೇಟಿಯು ಸರ್ಕಾರಿ ಕಾರ್ಯಕ್ರಮಗಳನ್ನು ಒಳಗೊಂಡಿದೆ. ಕೆಲವು ಯೋಜನೆಗಳನ್ನು ಉದ್ಘಾಟಿಸಲು ಯೋಜಿಸಲಾಗಿದೆ. ವಿವರಗಳನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಅದು ಮುಗಿದ ನಂತರ ನಾನು ನಿಮಗೆ ತಿಳಿಸುತ್ತೇನೆ ಎಂಬ ಮಾಹಿತಿ ನೀಡಿದರು.

ಸಭೆ ನಡೆಯುವ ಸ್ಥಳ, ವಿವರಗಳನ್ನು ಈ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಲಾಗಿದೆ. ಪ್ರಧಾನ ಮಂತ್ರಿಗಳ ಕಚೇರಿಯಿಂದ ಅನುಮೋದನೆ ಪಡೆದ ನಂತರ ಕಾರ್ಯಕ್ರಮವನ್ನು ಪ್ರಕಟಿಸಲಾಗುವುದು. ಈ ಸಭೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿಯನ್ನು ಮುಖ್ಯಮಂತ್ರಿ ನೀಡಿದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.