Mallikarjun Kharge ಕಿಡಿ: ಮಣಿಪುರ ವಿಚಾರದಲ್ಲಿ ಮೋದಿಯ ಹೀನಾಯ ವೈಫಲ್ಯ ಅಕ್ಷಮ್ಯ

ಅಸಮರ್ಥತೆಯನ್ನು ನಾಚಿಕೆಯಿಲ್ಲದೆ ಹೊರಹಾಕುವಲ್ಲಿ ದಾಖಲೆ ನಿರ್ಮಿಸಿದ್ದಾರೆ....

Team Udayavani, Sep 9, 2024, 7:56 PM IST

Kharge (2)

ಹೊಸದಿಲ್ಲಿ: ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡಿದ್ದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಕೂಡಲೇ ವಜಾಗೊಳಿಸಬೇಕು ಮತ್ತು ಸೂಕ್ಷ್ಮ ಭದ್ರತಾ ಪರಿಸ್ಥಿತಿಯ ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರ ಸರಕಾರ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಸೋಮವಾರ ಒತ್ತಾಯಿಸಿದೆ.ಸುಪ್ರೀಂ ಕೋರ್ಟ್ ಆದೇಶದ ಮಣಿಪುರ ತನಿಖಾ ಆಯೋಗವು ತನ್ನ ತನಿಖೆಯನ್ನು ತ್ವರಿತಗೊಳಿಸಬೇಕು ಎಂದು ಹೇಳಿದೆ.

ಮಣಿಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೀನಾಯ ವೈಫಲ್ಯವನ್ನು ಕ್ಷಮಿಸಲು ಸಾಧ್ಯವಾಗದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ (ಸೆ9) ಎಕ್ಸ್ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಶನಿವಾರ ಜಿರಿಬಾಮ್ ಜಿಲ್ಲೆಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ ತಾಜಾ ಹಿಂಸಾಚಾರ ವರದಿಯ ಬಳಿಕ ವಿಪಕ್ಷದ ಪ್ರತಿಕ್ರಿಯೆ ಇದದಾಗಿದೆ. ಪೊಲೀಸರ ಪ್ರಕಾರ, ಉಗ್ರರು ವ್ಯಕ್ತಿಯ ಮನೆಗೆ ನುಗ್ಗಿ ನಿದ್ದೆಯಲ್ಲಿದ್ದಾಗಲೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ನಂತರ ಸಮುದಾಯಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದು ನಾಲ್ಕು ಶಸ್ತ್ರಸಜ್ಜಿತ ವ್ಯಕ್ತಿಗಳ ಸಾವಿಗೆ ಕಾರಣವಾಗಿದೆ.

”ಮಣಿಪುರದ ಮಾಜಿ ರಾಜ್ಯಪಾಲರಾದ ಅನುಸೂಯಾ ಉಯಿಕೇ ಮಣಿಪುರದ ಜನರ ಧ್ವನಿಯನ್ನು ಪ್ರತಿಧ್ವನಿಸಿದ್ದಾರೆ. ಕಲಹ ಪೀಡಿತ ರಾಜ್ಯದ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ದುಃಖಿತರಾಗಿದ್ದಾರೆ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಬೇಕೆಂದು ಅವರು ಬಯಸಿದ್ದರು. ಕಳೆದ 16 ತಿಂಗಳುಗಳಲ್ಲಿ, ಪ್ರಧಾನಿ ಮೋದಿ ಮಣಿಪುರದಲ್ಲಿ ಒಂದೇ ಒಂದು ಸೆಕೆಂಡ್ ಸಮಯ ಕಳೆದಿಲ್ಲ, ರಾಜ್ಯದಲ್ಲಿ ಹಿಂಸಾಚಾರ ಅಡೆತಡೆಯಿಲ್ಲದೆ ಮುಂದುವರೆದಿದ್ದು ಜನರು ಮೋದಿ ಮತ್ತು ಶಾ ಅವರ ಸಹಭಾಗಿತ್ವದ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ” ಕಿಡಿ ಕಾರಿದ್ದಾರೆ.

“ಮಣಿಪುರದ ಬಿಜೆಪಿ ಸಿಎಂ ತಮ್ಮ ದರ್ಜೆಯ ಅಸಮರ್ಥತೆಯನ್ನು ನಾಚಿಕೆಯಿಲ್ಲದೆ ಹೊರಹಾಕುವಲ್ಲಿ ದಾಖಲೆ ನಿರ್ಮಿಸಿದ್ದಾರೆ, ಅವರು ಏಕೀಕೃತ ಕಮಾಂಡ್ ಅನ್ನು ರಾಜ್ಯ ಸರಕಾರಕ್ಕೆ ವರ್ಗಾಯಿಸಿದ್ದಾರೆ” ಎಂದು ಖರ್ಗೆ ಆಕ್ರೋಶ ಹೊರ ಹಾಕಿದ್ದಾರೆ.

“ಪ್ರಧಾನಿ ಅವರಂತೆಯೇ, ಕೇಂದ್ರ ಗೃಹ ಸಚಿವರೂ ಸಹ ಮಣಿಪುರದಲ್ಲಿ ಭದ್ರತೆಯನ್ನು ಖಾತ್ರಿಪಡಿಸುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ಬಿಟ್ಟುಕೊಟ್ಟಿದ್ದಾರೆ ಮತ್ತು ರಾಜ್ಯಗಳ ಚುನಾವಣೆಗಳಲ್ಲಿ ರ್‍ಯಾಲಿಗಳನ್ನು ಉದ್ದೇಶಿಸಿ ರಾಜಕೀಯ ಮತ್ತು ಭಾಷಣದಲ್ಲಿ ನಿರತರಾಗಿದ್ದಾರೆ” ಎಂದು ಖರ್ಗೆ ಕಿಡಿ ಕಾರಿದ್ದಾರೆ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

modi (4)

MODI ಇಂದು 75ನೇ ವಸಂತಕ್ಕೆ ಕಾಲಿಟ್ಟ ಮೋದಿ: ಎಲ್ಲೆಡೆ ಹುಟ್ಟುಹಬ್ಬ ಆಚರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.