ಮಂಗಳೂರಲ್ಲಿ ಕ್ಷಿಪ್ರ ಕಾರ್ಯಪಡೆ ನೆಲೆ


Team Udayavani, Oct 8, 2018, 6:00 AM IST

z-8.jpg

ಹೊಸದಿಲ್ಲಿ: ಕರ್ನಾಟಕದ ಮಂಗಳೂರು ಸಹಿತ ದೇಶದ ಐದು ನಗರಗಳಲ್ಲಿ ಹೊಸದಾಗಿ ಕ್ಷಿಪ್ರ ಕಾರ್ಯಪಡೆ (ಆರ್‌ಎಎಫ್) ನೆಲೆಗಳು ಸ್ಥಾಪನೆಯಾಗಲಿವೆ. ವಿಶೇಷವೆಂದರೆ ರಾಜ್ಯದಲ್ಲಿ ಇದು ಮೊದಲನೇ ಆರ್‌ಎಎಫ್ ನೆಲೆ. ಈಗ ಕೇಂದ್ರದಿಂದ ಅನುಮೋದನೆ ಪಡೆದ ನಗರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕ್ಷೇತ್ರ ವಾರಾಣಸಿ, ರಾಜಸ್ಥಾನದ ಜೈಪುರ, ಬಿಹಾರದ ಹಾಜೀಪುರ ಮತ್ತು ಹರಿಯಾಣದ ನುಹ್‌ ಕೂಡ ಸೇರಿವೆ. ಕಳೆದ ಜನವರಿಯಲ್ಲೇ ಆರ್‌ಎಎಫ್ನ ಐದು ಹೊಸ ಬೆಟಾಲಿಯನ್‌ಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿತ್ತು. ಈಗ ಅಧಿಕೃತವಾಗಿ ಎಲ್ಲೆಲ್ಲಿ ಈ ನೆಲೆಗಳನ್ನು ಸ್ಥಾಪಿಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿದೆ. ಅಲ್ಲದೆ ಈ ಐದನ್ನೂ ಸೇರಿಸಿದರೆ ದೇಶದಲ್ಲಿ ಒಟ್ಟು 15 ನೆಲೆಗಳು ಸ್ಥಾಪನೆಯಾದಂತಾಗುತ್ತವೆ.

ವಾರಾಣಸಿ ನಾಲ್ಕನೇ ನೆಲೆ
ಈಗಾಗಲೇ ಮೀರತ್‌, ಅಲಹಾಬಾದ್‌ ಮತ್ತು ಅಲೀಗಢ ಬಳಿಕ ಈಗ ಮೋದಿ ಕ್ಷೇತ್ರದಲ್ಲಿ ಈ ನೆಲೆ ಸ್ಥಾಪನೆಯಾಗುತ್ತಿದೆ.

ಏನಿದು ಆರ್‌ಎಎಫ್?
ರ್ಯಾಪಿಡ್‌ ಆ್ಯಕ್ಷನ್‌ ಫೋರ್ಸ್‌ ಅಥವಾ ಕ್ಷಿಪ್ರ ಕಾರ್ಯ ಪಡೆ ಎಂದು ಕರೆಸಿಕೊಳ್ಳುವ ಇದು ಕೇಂದ್ರ ಮೀಸಲು ಪೊಲೀಸ್‌ ಪಡೆಯ ಭಾಗ.

ಸದ್ಯ ದೇಶದಲ್ಲಿ ಎಲ್ಲೆಲ್ಲಿ ಆರ್‌ಎಎಫ್ ನೆಲೆಗಳಿವೆ?
ಹೈದರಾಬಾದ್‌, ಅಹ್ಮದಾ ಬಾದ್‌, ಅಲಹಾಬಾದ್‌, ಮುಂಬಯಿ, ದಿಲ್ಲಿ, ಅಲೀಗಢ, ಕೊಯಮತ್ತೂ ರು, ಜೆಮ್ಶೆಡ್‌ಪುರ, ಭೋಪಾಲ್‌, ಮೀರತ್‌.

ಆರ್‌ಎಎಫ್ ಏಕೆ ಬೇಕು?
ಕ್ಷಿಪ್ರ ಕಾರ್ಯ ಪಡೆಯ ಪ್ರಮುಖ ಕೆಲಸವೇ ಹಿಂಸಾಚಾರ ಮತ್ತು ಗುಂಪು ಘರ್ಷಣೆಗಳ ನಿಯಂತ್ರಣ ಮಾಡುವುದು. ನೀಲಿ ಬಣ್ಣದ ಡುಂಗ್ರಿ ರೀತಿಯ ಸಮವಸ್ತ್ರ ಧರಿಸುವ ಈ ಪಡೆ ಹಿಂಸಾಚಾರ ನಿಯಂತ್ರಿಸುವಲ್ಲಿ ವಿಶೇಷ ರೀತಿಯ ತರಬೇತಿ ಪಡೆದಿರುತ್ತದೆ. ಇದರ ಜತೆಗೆ ಭೂಕಂಪ, ಪ್ರವಾಹ, ಚಂಡಮಾರುತ ಸಂದರ್ಭದಲ್ಲೂ ಮಾನವೀಯ ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಪಡೆ ಜತೆ ಕೆಲಸ ಮಾಡುತ್ತದೆ.

ಸಾವಿರ ಯೋಧರು!
ಆರ್‌ಎಎಫ್ನ ಪ್ರತಿ ನೆಲೆಯಲ್ಲೂ ಒಂದು ಸಾವಿರ ಯೋಧರು ಇರುತ್ತಾರೆ. ಇವರ ಬಳಿ ಪಂಪ್‌ ಆRಕ್ಷನ್‌ ಗನ್‌, ಹೊಗೆ ಚಿಮ್ಮಿಸುವ ಗ್ರೆನೇಡ್‌ ಸೇರಿ ಹಿಂಸಾಚಾರ ನಿಯಂತ್ರಣಕ್ಕೆ ಬೇಕಾದ ಉಪಕರಣಗಳುರುತ್ತವೆ.

ಬಜಪೆ/ಮರವೂರಿನಲ್ಲಿ ನೆಲೆ
ರ್ಯಾಪಿಡ್‌ ಆ್ಯಕ್ಷನ್‌ ಫೋರ್ಸ್‌ ಕಚೇರಿ ಸ್ಥಾಪನೆಗಾಗಿ ಮಂಗಳೂರಿನ ಬಜಪೆ ಮತ್ತು ಮರವೂರಿನಲ್ಲಿ ಜಾಗವನ್ನು ಗುರುತಿಸಿ ಎರಡು ವರ್ಷಗಳ ಹಿಂದೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಪ್ರಸ್ತಾವನೆ ಸಲ್ಲಿಕೆಯ ಬಳಿಕ ಪೊಲೀಸ್‌ ಕಮಿಷನರೆಟ್‌ಗೆ ಯಾವುದೇ ಮಾಹಿತಿ ಬಂದಿಲ್ಲ. ಈ ಬಗ್ಗೆ ಸರಕಾರಿ ಮಟ್ಟದಲ್ಲಿ ಮಾತುಕತೆ ನಡೆದಿರುತ್ತದೆ.
-ಟಿ.ಆರ್‌. ಸುರೇಶ್‌, ಮಂಗಳೂರು ನಗರ ಪೊಲೀಸ್‌ ಆಯುಕ್ತ

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.