Kerala PM Modi ಮಿಂಚು: ಕೊಚ್ಚಿಯಲ್ಲಿ ಭರ್ಜರಿ ರೋಡ್‌ಶೋ ,ಎರಡು ದಿನಗಳ ಪ್ರವಾಸ


Team Udayavani, Apr 25, 2023, 7:05 AM IST

Kerala PM Modi ಮಿಂಚು: ಕೊಚ್ಚಿಯಲ್ಲಿ ಭರ್ಜರಿ ರೋಡ್‌ಶೋ ,ಎರಡು ದಿನಗಳ ಪ್ರವಾಸ

ಕೊಚ್ಚಿ: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ವೇಳೆಗೆ ಕೇರಳದಲ್ಲಿ ಬಿಜೆಪಿಯ ಪ್ರಾಬಲ್ಯವನ್ನು ಹೆಚ್ಚಿಸಬೇಕೆಂಬ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು “ದೇವರೊಲಿದ ನಾಡಿಗೆ’ ಎಂಟ್ರಿ ಕೊಟ್ಟಿದ್ದಾರೆ.

ಸೋಮವಾರದಿಂದ 2 ದಿನ ಕೇರಳದಾದ್ಯಂತ ಮೋದಿ ಸಂಚಲನ ಮೂಡಿಸಲಿದ್ದಾರೆ. ಸೋಮವಾರ ಸಂಜೆ 5 ಗಂಟೆಗೆ ಕೊಚ್ಚಿಗೆ ಆಗಮಿಸಿದ ಮೋದಿ ಅವರು, ಸುಮಾರು 2 ಕಿ.ಮೀ. ದೂರದವರೆಗೆ ರೋಡ್‌ ಶೋ ನಡೆಸಿದರು. ಈ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಮಂದಿ ಪುಷ್ಪವೃಷ್ಟಿ ಸುರಿಸಿ, “ಮೋದಿ ಮೋದಿ’ ಎಂದು ಘೋಷಣೆ ಕೂಗುತ್ತಾ ಸ್ವಾಗತಿಸಿದರು.

ತದಅನಂತರ “ಯುವಮ್‌ 2023 ಸಮಾವೇಶ’ದ ಸ್ಥಳಕ್ಕೆ ಬಂದ ಮೋದಿಯವರು ಅಲ್ಲಿ ಸೇರಿದ್ದ ಯುವ  ಜನರನ್ನು ಉದ್ದೇಶಿಸಿ ಮಾತನಾಡಿದರು. “ಒಂದು ಕಾಲದಲ್ಲಿ ಭಾರತವು “ಐದು ದುರ್ಬಲ’ ರಾಷ್ಟ್ರಗಳ ಪೈಕಿ ಒಂದಾಗಿತ್ತು. ಆದರೆ, ಇಂದು ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಇದಕ್ಕೆ ಕಾರಣ ನಮ್ಮ ಯುವಜನಾಂಗ. ಇದೇ ಕಾರಣಕ್ಕಾಗಿ ನಾನು ನಮ್ಮ ದೇಶದ ಯುವಜನರ ಮೇಲೆ ಬಲವಾದ ನಂಬಿಕೆ ಇಟ್ಟಿದ್ದೇನೆ’ ಎಂದರು. ಇಂದು ಎಲ್ಲರೂ 21ನೇ ಶತಮಾನವು “ಭಾರತದ ಶತಮಾನ’ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಮ್ಮ ದೇಶದಲ್ಲಿ ಯುವ ಶಕ್ತಿಯ ಖಜಾನೆಯೇ ಇದೆ. ಬಿಜೆಪಿ ಮತ್ತು ಯುವಜನತೆಯು ಸಮಾನ ಮನೋ ಧರ್ಮವನ್ನು ಹೊಂದಿದೆ. ಬಿಜೆಪಿಯು ಸುಧಾರಣೆಯನ್ನು ತರುತ್ತದೆ, ಯುವಜನಾಂಗವು ಫ‌ಲಿತಾಂಶವನ್ನು ತರುತ್ತದೆ. ಹಿಂದೆಲ್ಲ ಜನರು, ಭಾರತವನ್ನು ಬದಲಿಸಲು ಯಾವುದರಿಂದಲೂ ಸಾಧ್ಯವಿಲ್ಲ ಎನ್ನುತ್ತಿದ್ದರು. ಆದರೆ, ಈಗ ನಮ್ಮ ದೇಶವು ಇಡೀ ಜಗತ್ತನ್ನೇ ಬದಲಿಸುವ ಶಕ್ತಿ ಹೊಂದಿದೆ ಎಂದೂ ಮೋದಿ ಹೇಳಿದರು.

ಹಿಂದಿನ ಸರಕಾರ ಗಳು ಭ್ರಷ್ಟಾಚಾರಕ್ಕೆ ಹೆಸರಾಗಿ ದ್ದವು. ಆದರೆ ಬಿಜೆಪಿ ಸರಕಾರ ಯುವಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ. ಸಿಆರ್‌ಪಿಎಫ್ ಪರೀಕ್ಷೆ ಯನ್ನು ಮಲಯಾಳ ಸಹಿತ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿದ್ದನ್ನು ಇದಕ್ಕೆ ಉದಾ ಹರಣೆಯಾಗಿ ನೀಡಿದರು.

ಹಲವು ಯೋಜನೆಗಳ ಉದ್ಘಾಟನೆ: 2 ದಿನಗಳ ಭೇಟಿ ಯಲ್ಲಿ ಪ್ರಧಾನಿ ಮೋದಿ ಅವರು ದೇಶದ ಮೊದಲ ಡಿಜಿಟಲ್‌ ಸೈನ್ಸ್‌ ಪಾರ್ಕ್‌, ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು, ವಾಟರ್‌ ಮೆಟ್ರೋ ಉದ್ಘಾಟನೆ ಸೇರಿದಂತೆ ರಾಜ್ಯಾದ್ಯಂತ ಹಲವು ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಲಿದ್ದಾರೆ.

8 ಬಿಷಪ್‌ಗಳ ಭೇಟಿ: ಕೇರಳದ ಕ್ರಿಶ್ಚಿಯನ್‌ ಪಾರ್ಟಿ ಎಂದೇ ಕರೆಯಲ್ಪಡುತ್ತಿದ್ದ “ಕೇರಳ ಕಾಂಗ್ರೆಸ್‌ ಪಕ್ಷ’ವು ಇತ್ತೀಚಿನ ವರ್ಷಗಳಲ್ಲಿ ದುರ್ಬಲವಾಗಿದ್ದು, ಅದರ ಲಾಭವನ್ನು ಪಡೆಯಲು ಬಿಜೆಪಿ ಮುಂದಾಗಿದೆ. ಇದೇ ಸಂದರ್ಭವನ್ನು ಬಳಸಿಕೊಂಡು ರಾಜ್ಯದ ಕ್ರಿಶ್ಚಿಯನ್‌ ಮತದಾರರನ್ನು ತನ್ನತ್ತ ಸೆಳೆಯುವುದು ಬಿಜೆಪಿಯ ಲೆಕ್ಕಾಚಾರ. ಈ ಕಾರ್ಯತಂತ್ರದ ಭಾಗವಾಗಿ ಇತ್ತೀಚೆಗಷ್ಟೇ “ಸ್ನೇಹಯಾತ್ರೆ’ಯ ಹೆಸರಲ್ಲಿ ಈಸ್ಟರ್‌ ಹಬ್ಬ   ದಂದು ರಾಜ್ಯದ ಬಿಜೆಪಿ ನಾಯಕರು ಬಿಷಪ್‌ಗ್ಳ, ಕ್ರಿಶ್ಚಿಯನ್ನರ ಮನೆಗಳಿಗೆ ಭೇಟಿ ನೀಡಿದ್ದರು. ಈಗ ಮೋದಿಯವರೂ 8 ವಿವಿಧ ಚರ್ಚ್‌ಗಳ ಬಿಷಪ್‌ ಗಳನ್ನು ಭೇಟಿಯಾಗಲಿದ್ದಾರೆ. ಕಳೆದ ಕೇರಳ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಯು ಶೇ.12.4ರಷ್ಟು ಮತ ಗಳನ್ನು ಪಡೆದಿತ್ತಾದರೂ 1 ಕ್ಷೇತ್ರವನ್ನೂ ಗೆದ್ದಿರಲಿಲ್ಲ.

ಮುಂಡು ಧರಿಸಿ ಬಂದರು ಮೋದಿ!
ಕೇರಳ ಭೇಟಿ ವೇಳೆ ಮೋದಿ ಅವರು ರಾಜ್ಯದ ಸಾಂಪ್ರದಾಯಿಕ ಕಸವು ಮುಂಡು ಹಾಗೂ ಕುರ್ತಾ ಧರಿಸಿ, ಹೆಗಲಿಗೆ ಶಾಲು ಹಾಕಿಕೊಂಡಿದ್ದರು. ಕೇಂದ್ರದ ಮಾಜಿ ರಕ್ಷಣಾ ಸಚಿವ ಎ.ಕೆ.ಆ್ಯಂಟನಿ ಪುತ್ರ ಅನಿಲ್‌, ರಾಜ್ಯಸಭೆಯ ಮಾಜಿ ಸದಸ್ಯ, ನಟ ಸುರೇಶ್‌ ಗೋಪಿ, ನಟರಾದ ಉನ್ನಿ ಮುಕುಂದನ್‌, ಅಪರ್ಣಾ ಬಾಲಮುರಳಿ ಸೇರಿ ಕೆಲವು ಸೆಲೆಬ್ರಿಟಿಗಳೂ ಮೋದಿಯನ್ನು ಸ್ವಾಗತಿಸಿದ್ದು ಕಂಡುಬಂತು.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.