ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ‘ಉದ್ಯೋಗಕ್ಕೆ ಮಾರಕ’ : ರಾಹುಲ್ ಗಾಂಧಿ ಗರಂ
Team Udayavani, Sep 3, 2021, 2:24 PM IST
ನವ ದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ನಾಯಕ ಹಾಗೂ ಕೇರಳದ ವಯನಾಡಿನ ಸಂಸದ ರಾಹುಲ್ ಗಾಂಧಿ ಮತ್ತೆ ಧ್ವನಿ ಎತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಮತ್ತೆ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ನೇಹಿತ ವರ್ಗದವರಿಗೆ ಲಾಭ ಮಾಡಿಕೊಡುವುದನ್ನು ಹೊರತಾಗಿ ಬೇರೇನೂ ಮಾಡಿಲ್ಲ ಎಂದು ಅವರು ಗರಂ ಆಗಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರದ ವಿರುದ್ಧ ಹರಿಯಾಯ್ದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಯನ್ನೇ ನಾಶ ಮಾಡಿದೆ. ಮೋದಿ ಸರ್ಕಾರ ಉದ್ಯೋಗಕ್ಕೆ ಮಾರಕ ಎಂದು ಅವರು ಕಿಡಿ ಕಾರಿದ್ದಾರೆ.
ಇದನ್ನೂ ಓದಿ : ತೇಜಸ್ ಎಕ್ಸ್ ಪ್ರೆಸ್ ರೈಲಿನೊಳಗೆ ಅಂಡರ್ ವೇರ್ ಧರಿಸಿ ಓಡಾಡಿದ ಶಾಸಕ; ಪ್ರಯಾಣಿಕರ ಆಕ್ರೋಶ
ಮಾತ್ರವಲ್ಲದೇ, ತಮ್ಮ ಟ್ವೀಟರ್ ಖಾತೆಯ ಮೂಲಕ ಉದ್ಯಮಪತಿಗಳಾದ ಅಂಬಾನಿ ಹಾಗೂ ಅದಾನಿ ಅವರನ್ನು ಪರೋಕ್ಷವಾಗಿ ಕುಟುಕಿದ ಗಾಂಧಿ, ‘ಸ್ನೇಹಿತರಿಗೆ ಸಂಬಂಧವಲ್ಲದ’ ವ್ಯಾಪಾರ ಅಥವಾ ಉದ್ಯೋಗವನ್ನು ಕೇಂದ್ರ ಸರ್ಕಾರ ಉತ್ತೇಜಿಸುವುದಿಲ್ಲ ಅಥವಾ ಬೆಂಬಲಿಸುವುದಿಲ್ಲ. ಆತ್ಮ ನಿರ್ಭರದ ನೆಪದಲ್ಲಿ ದೇಶವಾಸಿಗಳನ್ನು ಸಂಕಷ್ಟಕ್ಕೆ ದೂಡಿದೆ ಎಂದಿದ್ದಲ್ಲದೇ, ಆಗಸ್ಟ್ ನಲ್ಲಿ 15 ಲಕ್ಷ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ (ಸಿಎಂಐಇ) ದತ್ತಾಂಶ ಆಧರಿಸಿ ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ಪ್ರಕಟಿಸಿರುವ ವರದಿಯ ತುಣುಕೊಂದನ್ನು ಉಲ್ಲೇಖಿಸಿ ಪೋಸ್ಟ್ ಮಾಡಿದ್ದಾರೆ.
ಇನ್ನು, ‘ತೋರಿಕೆಗಾಗಿ ಸರ್ಕಾರ ದೇಶದ ಜನರಿಂದ ಸ್ವಾಭಿಮಾನವನ್ನು ನಿರೀಕ್ಷಿಸುತ್ತಿದೆ‘ ಎಂದು ಅವರು ಹೇಳಿದ್ದಾರೆ.
मोदी सरकार रोज़गार के लिए हानिकारक है। वे किसी भी प्रकार के ‘मित्रहीन’ व्यवसाय या रोज़गार को बढ़ावा या सहारा नहीं देते बल्कि जिनके पास नौकरी है उसे भी छीनने में लगे हैं। देशवासियों से आत्मनिर्भरता का ढोंग अपेक्षित है।
जनहित में जारी।#Unemployment pic.twitter.com/rjvn0TyGaA
— Rahul Gandhi (@RahulGandhi) September 3, 2021
ಇದನ್ನೂ ಓದಿ : ತೇಜಸ್ ಎಕ್ಸ್ ಪ್ರೆಸ್ ರೈಲಿನೊಳಗೆ ಅಂಡರ್ ವೇರ್ ಧರಿಸಿ ಓಡಾಡಿದ ಶಾಸಕ; ಪ್ರಯಾಣಿಕರ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ
Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್ಲೈನ್ ನೋಂದಣಿ ಕಡ್ಡಾಯ
Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ
Bhopal;1,800 ಕೋ.ರೂ. ಡ್ರಗ್ಸ್ ವಶ!; ದಿಲ್ಲಿಯಲ್ಲಿ ಕೊಕೇನ್ ಪತ್ತೆ ಬೆನ್ನಲ್ಲೇ ಘಟನೆ
Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ
Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
Bigg Boss Marathi 5: ಬಿಗ್ ಬಾಸ್ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.