![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 11, 2020, 6:30 AM IST
ಹೊಸದಿಲ್ಲಿ: ಮೀನುಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆ ಎಂದೇ ಬಣ್ಣಿಸಲಾಗಿರುವ ಮತ್ಸ್ಯ ಸಂಪದ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಮೀನುಗಾರಿಕೆ ಕ್ಷೇತ್ರವನ್ನೂ “ಆತ್ಮನಿರ್ಭರ’ಗೊಳಿಸ ಬೇಕು ಎಂಬ ಉದ್ದೇಶದಿಂದ ಸರಕಾರ ಈ ಯೋಜನೆಗೆ ಚಾಲನೆ ನೀಡಿದೆ. ಪಶುಗಳ ಆರೋಗ್ಯದ ಮೇಲೆ ನಿಗಾ ಇರಿಸುವ “ಇ-ಗೋಪಾಲ್’ ಆ್ಯಪ್ ಗೂ ಚಾಲನೆ ಸಿಕ್ಕಿದೆ.
ಮುಂದಿನ ನಾಲ್ಕೈದು ವರ್ಷ ಗಳಲ್ಲಿ ಮತ್ಸ್ಯ ಸಂಪದ ಯೋಜನೆಗೆ 20 ಸಾವಿರ ಕೋ. ರೂ. ವೆಚ್ಚ ಮಾಡಲಾಗುವುದು. ಈ ಯೋಜನೆಯಿಂದ ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಮೂಲಸೌಕರ್ಯ, ಆಧುನಿಕ ಸಲಕರಣೆ ಮತ್ತು ಹೊಸ ಮಾರುಕಟ್ಟೆಗಳು ಸಿಗಲಿವೆ.
ಈ ಯೋಜನೆ 21 ರಾಜ್ಯಗಳಲ್ಲಿ ವಿಸ್ತರಣೆಯಾಗಲಿದ್ದು, ಬಿಹಾರದಲ್ಲಿ ಗುರುವಾರ ಚಾಲನೆ ನೀಡಲಾಗಿದೆ ಎಂದು ಮೋದಿ ಹೇಳಿದರು.
ಇ-ಗೋಪಾಲ್ ಎಂದರೇನು?
ಮತ್ಸ್ಯ ಸಂಪದ ಯೋಜನೆ ಜತೆಯಲ್ಲೇ ಮೋದಿ ಅವರು ಇ-ಗೋಪಾಲ್ ಮೊಬೈಲ್ ಆ್ಯಪ್ಲಿಕೇಶನ್ಗೂ ಗುರುವಾರ ಚಾಲನೆ ನೀಡಿದರು. ಈ ಆ್ಯಪ್ ಮೂಲಕ ರೈತರು ಉತ್ತಮ ಗುಣಮಟ್ಟದ ಜಾನುವಾರುಗಳನ್ನು ಆಯ್ಕೆ ಮಾಡಬಹುದು. ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಿದಂತಾಗುತ್ತದೆ. ಜಾನುವಾರುಗಳ ಆರೈಕೆ, ಉತ್ಪಾದಕತೆ, ಆರೋಗ್ಯ, ಆಹಾರ ಕ್ರಮದ ಬಗ್ಗೆ ಈ ಆ್ಯಪ್ನಲ್ಲಿ ಮಾಹಿತಿ ಪಡೆಯಬಹುದು ಎಂದು ಮೋದಿ ಹೇಳಿದರು.
ದುಪ್ಪಟ್ಟು ರಫ್ತಿನ ಗುರಿ
ಮುಂದಿನ 3ರಿಂದ 4 ವರ್ಷಗಳಲ್ಲಿ ಮೀನುಗಾರಿಕೆ ಕ್ಷೇತ್ರದಲ್ಲಿ ಭಾರತ ಈಗ ರಫ್ತು ಮಾಡುತ್ತಿರುವುದನ್ನು ದ್ವಿಗುಣಗೊಳಿಸುವಂತಾಗಬೇಕು. ಇದೇ ಈ ಯೋಜನೆಯ ಗುರಿ ಎಂದು ಮೋದಿ ಹೇಳಿದ್ದಾರೆ. ಈ ಯೋಜನೆಯಿಂದಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗಗಳು ಹುಟ್ಟಿಕೊಳ್ಳಲಿವೆ. ಸ್ವಾತಂತ್ರ್ಯಾ ನಂತರದಲ್ಲಿ ಇದೇ ಮೊದಲ ಬಾರಿಗೆ ಮೀನುಗಾರಿಕೆ ಕ್ಷೇತ್ರದಲ್ಲಿ ಇಂಥ ಒಂದು ಯೋಜನೆ ಆರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.