![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 29, 2021, 5:43 PM IST
ನವದೆಹಲಿ: ಜಮ್ಮುವಿನಲ್ಲಿ ಭಾರತೀಯ ವಾಯುಪಡೆ ನೆಲೆ ಮೇಲೆ ಡ್ರೋನ್ ದಾಳಿ ನಡೆದ ಘಟನೆ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮತ್ತು ಎನ್ ಎಸ್ ಎ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಮಹತ್ವದ ಸಭೆಯನ್ನು ನಡೆಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಹಿಳಾ ವಿಶ್ವವಿದ್ಯಾಲಯ ಪರೀಕ್ಷೆ ಘೋಷಣೆ; ಎಐಡಿಎಸ್ಒ ಪ್ರತಿಭಟನೆ
ಈ ಮಹತ್ವದ ಸಭೆಯಲ್ಲಿ ವಾಯುಪಡೆಯ ಮುಖ್ಯಸ್ಥರು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಘಟನೆ ಬಗ್ಗೆ ವಿವರ ನೀಡಿರುವುದಾಗಿ ಮೂಲಗಳು ಹೇಳಿವೆ. ಮುಖ್ಯವಾಗಿ ರಾಜನಾಥ್ ಸಿಂಗ್ ಅವರು ಎರಡು ದಿನಗಳ ಲಡಾಖ್ ಭೇಟಿಯನ್ನು ಪೂರ್ಣಗೊಳಿಸಿ ಹಿಂದಿರುಗಿದ ಒಂದು ದಿನದ ನಂತರ ಈ ಸಭೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಅಜೆಂಡಾದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಸಭೆಯಲ್ಲಿ ಜಮ್ಮು-ಕಾಶ್ಮೀರ ಮತ್ತು ವಾಸ್ತವ ನಿಯಂತ್ರಣ ರೇಖೆಯಲ್ಲಿನ ವಿಷಯಗಳೇ ಪ್ರಮುಖ ಅಜೆಂಡವಾಗಿರಬಹುದು ಎಂದು ವರದಿ ವಿವರಿಸಿದೆ.
ಭದ್ರತೆಯ ದೃಷ್ಟಿಯಲ್ಲಿ ಭಾನುವಾರ ನಸುಕಿನ ವೇಳೆ ಜಮ್ಮುವಿನಲ್ಲಿರುವ ಭಾರತೀಯ ವಾಯುನೆಲೆ ಮೇಲೆ ಡ್ರೋನ್ ಮೂಲಕ ಸ್ಫೋಟಕವನ್ನು ಬೀಳಿಸಿ ದಾಳಿ ನಡೆಸಿರುವುದು ಗಂಭೀರವಾದ ವಿಚಾರವಾಗಿದೆ. ಪ್ರಕರಣದ ತನಿಖೆಯನ್ನು ಈಗಾಗಲೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.