![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Mar 3, 2022, 8:15 AM IST
ಹೊಸದಿಲ್ಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಜತೆಗೆ ಪ್ರಧಾನಿ ನರೇಂದ್ರ ಮೋದಿ, ಬುಧವಾರ ರಾತ್ರಿ ದೂರವಾಣಿಯಲ್ಲಿ ಮಾತನಾಡಿ, ಖಾರ್ಕಿವ್ ನಗರದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷೆಯ ಬಗ್ಗೆ ಮನವಿ ಮಾಡಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ದಾಳಿ ಆರಂಭಿಸಿದ ಅನಂತರ ಇದು ಅವರಿಬ್ಬರ ಎರಡನೇ ದೂರವಾಣಿ ಸಂಭಾಷಣೆ. ಯುದ್ಧ ಆರಂಭವಾದ ಹೊಸತರಲ್ಲಿ ಪುತಿನ್ ಜತೆಗೆ ಮಾತನಾಡಿದ್ದ ಮೋದಿ, ಯುದ್ಧ ನಿಲ್ಲಿಸುವಂತೆ ಮನವಿ ಮಾಡಿದ್ದರು.
ಬುಧವಾರ ರಾತ್ರಿ ನಡೆದ ಮಾತುಕತೆಯಲ್ಲಿ, ಉಕ್ರೇನ್ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳಲ್ಲಿ ಹೆಚ್ಚು ಜನ ಖಾರ್ಕಿವ್ ನಗರದಲ್ಲಿದ್ದು, ಅವರ ಸುರಕ್ಷೆಗೆ ಒತ್ತು ನೀಡಬೇಕು ಹಾಗೂ ಅವರನ್ನು ಅಲ್ಲಿಂದ ತೆರವುಗೊಳಿಸಲು ಭಾರತ ನಡೆಸುತ್ತಿರುವ ಪ್ರಯತ್ನಗಳಿಗೆ ರಷ್ಯಾ ಸಹಾಯ ಮಾಡಬೇಕು ಎಂದು ಮೋದಿ ಮನವಿ ಮಾಡಿದ್ದಾರೆ.
ಇದೇ ವೇಳೆ ಶಾಂತಿ ಮಾತುಕತೆಗೆ ನಡೆಸಲಾಗುತ್ತಿರುವ ಎಲ್ಲ ರಾಜತಾಂತ್ರಿಕ ಪ್ರಯತ್ನಗಳಿಗೆ ಓಗೊಡಬೇಕು ಎಂದು ಮೋದಿ ಕೇಳಿಕೊಂಡಿದ್ದಾರೆ.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.