ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ಇಂದು ರಾಷ್ಟ್ರವನ್ನುದ್ದೇಶಿಸಿ ಭಾಷಣ
Team Udayavani, May 31, 2020, 8:02 AM IST
ನವದೆಹಲಿ: ಕೋವಿಡ್ 19 ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ರಾಷ್ಟ್ರವ್ಯಾಪಿ ಜಾರಿಗೊಳಿಸಿರುವ ಲಾಕ್ಡೌನ್ನ ನಾಲ್ಕನೇ ಚರಣದ ಅಂತಿಮ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಮನ್ ಕಿ ಬಾತ್ ಕಾರ್ಯಕ್ರಮ ಪ್ರಸಾರವಾಗಲಿದ್ದು ಲಾಕ್ ಡೌನ್ 5 ನೇ ಹಂತ ಮತ್ತು ಅನ್ ಲಾಕ್ 1.0 ಇದರ ಕುರಿತಾಗಿ ಹೆಚ್ಚಿನ ಮಾಹಿತಿ ನೀಡುವ ಸಾಧ್ಯತೆಯಿದೆ.
ದೇಶಾದ್ಯಂತ ಕೋವಿಡ್ 19 ವೈರಸ್ ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಧಾನಿ ಮೋದಿ ಮಾರ್ಚ್ 24 ರಂದು 21 ದಿನಗಳ ರಾಷ್ಟ್ರವ್ಯಾಪಿ ಲಾಕ್ಡೌನ್ ಘೋಷಿಸಿದ್ದರು. ನಂತರ ಲಾಕ್ಡೌನ್ ಮೂರು ಬಾರಿ ವಿಸ್ತರಿಸಲಾಯಿತು.
ಮೋದಿ ಸರ್ಕಾರದ ಎರಡನೇ ಅವಧಿಯ ಒಂದು ವರ್ಷದ ವಾರ್ಷಿಕೋತ್ಸವದ ಒಂದು ದಿನದ ನಂತರ ‘ಮನ್ ಕಿ ಬಾತ್’ ನ 65 ನೇ ಆವೃತ್ತಿ ಬರುತ್ತದೆ.ಈಗಾಗಲೇ ಕೇಂದ್ರ ಗೃಹ ಸಚಿವಾಲಯ (ಎಂಎಚ್ ಎ) ಜೂನ್ 1ರಿಂದ ಮುಂದಿನ ಒಂದು ತಿಂಗಳವರೆಗೆ ಎಲ್ಲಾ ಚಟುವಟಿಕೆಗಳನ್ನು ಹಂತಹಂತವಾಗಿ ಪುನಃ ತೆರೆಯಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ವರದಿಯ ಪ್ರಕಾರ, ಭಾರತಲ್ಲಿ ಶನಿವಾರ 7,964 ಕೋವಿಡ್ -19 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇಷ್ಟೊಂದು ಪ್ರಮಾಣದಲ್ಲಿ ಏರಿಕೆಯಾಗಿದ್ದು ಇದೇ ಮೊದಲು. ಆ ಮೂಲಕ ಒಟ್ಟಾರೆ ಸೋಂಕಿತರ ಪ್ರಮಾಣ 173,763 ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 265 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ವೈರಸ್ನಿಂದ ಮೃತರಾದವರ ಸಂಖ್ಯೆ ಈಗ 4,971ಕ್ಕೆ ಏರಿಕೆಯಾಗಿದೆ. ಒಟ್ಟು ಕೋವಿಡ್ -19 ಸೋಂಕಿತರ ಪೈಕಿ 86,422 ಸಕ್ರಿಯ ಪ್ರಕರಣಗಳಿದ್ದು, 82,370 ಜನರು ಗುಣಮುಖರಾಗಿ ಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.