ಪ್ರಯಾಣಿಕರ ಸೋಗು: 53 ಮೊಬೈಲ್‌ ಕದ್ದ ಇಬ್ಬರು GoAir ಅಧಿಕಾರಿ arrest


Team Udayavani, Oct 2, 2018, 4:58 PM IST

delhi-airport-terminal-700.jpg

ಹೊಸದಿಲ್ಲಿ : ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ  53 ಮೊಬೈಲ್‌ ಫೋನ್‌ಗಳನ್ನು ಕದ್ದ ಇಬ್ಬರು ಗೋ ಏರ್‌ ಎಕ್ಸಿಕ್ಯುಟಿವ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಬಂಧಿತ  ಗೋ ಏರ್‌ ಅಧಿಕಾರಿಗಳನ್ನು ಸಚಿನ್‌ ಮಾನವ್‌ (30) ಮತ್ತು ಸತೀಶ್‌ ಪಾಲ್‌ (40) ಎಂದು ಗುರುತಿಸಲಾಗಿದೆ. ಸಚಿನ್‌ ಮಾನವ್‌ 2011ರಿಂದ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಗೋ ಏರ್‌  ಸಂಸ್ಥೆಯ ಹಿರಿಯ ramp ಅಧಿಕಾರಿಯಾಗಿ ದುಡಿಯುತ್ತಿದ್ದರೆ ಸತೀಶ್‌ ಪಾಲ್‌ 2015ರಿಂದ ಗೋ ಏರ್‌ ಅಧಿಕಾರಿಯಾಗಿ ದುಡಿಯುತ್ತಿರುವುದಾಗಿ ತಿಳಿದು ಬಂದಿದೆ. 

ಸರಕು ಇಳಿಸುವ ಹೊಣೆಗಾರಿಕೆ ಹೊಂದಿದ್ದ ಈ ಇಬ್ಬರು ಅಧಿಕಾರಿಗಳು ತಾವು ಕದ್ದಿದ್ದ 53 ಮೊಬೈಲ್‌ ಫೋನ್‌ಗಳನ್ನು ಚೀಲವೊಂದರಲ್ಲಿ ಹಾಕಿ, ಕನ್ವೆಯರ್‌ ಬೆಲ್ಟ್ ನಲ್ಲಿ  ಅದನ್ನು ತಳ್ಳಿ, ಇತರ ಪ್ರಯಾಣಿಕರ ಹಾಗೆ ಆಗಮನ ದ್ವಾರದ ಮೂಲಕ ಬಂದು ಮೊಬೈಲ್‌ ಫೋನ್‌ ಚೀಲದೊಂದಿಗೆ ಹೊರ ನಡೆದು ಹೋದರೆಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. 

ಕಳೆದ ಸೆ.19ರಂದು ಕಾರ್ಗೋ ಕಂಪೆನಿಯೊಂದರ ಮ್ಯಾನೇಜರ್‌ ಓರ್ವರು ತಮ್ಮ ಕಂಪೆನಿಗೆ ಸೇರಿದ 53 ಮೊಬೈಲ್‌ ಫೋನ್‌ಗಳನ್ನು ಒಳಗೊಂಡಿದ್ದ ಸರಕು ಚೀಲ ಕಳವಾಗಿದೆ ಎಂದು ದೂರಿದ್ದರು ಎಂದು ಐಜಿಐ ಏರ್‌ ಪೋರ್ಟ್‌ ನ ಡಿಸಿಪಿ ಸಂಜಯ್‌ ಭಾಟಿಯಾ ಹೇಳಿದರು. 

ತಮಗೆ ಕಳುಹಿಸಲಾಗಿದ್ದ ಈ ಸರಕು ಗೋ ಏರ್‌ ವಿಮಾನ ಜಿ8-229ರ ಮೂಲಕ ಪಟ್ನಾದಿಂದ ದಿಲ್ಲಿ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ಗೆ ಬಂದಿತ್ತು. ಸ್ಥಳಾವಕಾಶದ ಕೊರತೆಯಿಂದಾಗಿ ಈ ಸರಕಿನ ಒಂದು ಭಾಗವನ್ನು ಗೋದಾಮಿಗೆ ಸ್ಥಳಾಂತರಿಸಲಾಗಿತ್ತು. ಗೋದಾಮಿನಲ್ಲಿ ಅನ್‌ಲೋಡ್‌ ಆದಾಗ ಕೇವಲ 30 ಬ್ಯಾಗುಗಳು ಕಂಡು ಬಂದು 53 ಫೋನ್‌ಗಳಿದ್ದ ಚೀಲ ನಾಪತ್ತೆಯಾಗಿತ್ತು ಎಂದು ಮ್ಯಾನೇಜರ್‌ ತಮ್ಮ ದೂರಿನಲ್ಲಿ ಹೇಳಿದ್ದರು ಎಂಬುದಾಗಿ ಡಿಸಿಪಿ ತಿಳಿಸಿದರು. 

ಸಿಸಿಟಿವಿ ಚಿತ್ರಿಕೆಯಲ್ಲಿ ಕೂಡ 53 ಮೊಬೈಲ್‌ ಫೋನ್‌ಗಳ ಚೀಲ ಎಲ್ಲಿ ನಾಪತ್ತೆಯಾಯಿತೆಂಬುದು ಗೊತ್ತಾಗಲಿಲ್ಲ. ಅದಾಗಿ ಕೆಲವು ದಿನಗಳ ಬಳಿಕ ನಡೆಸಲಾದ ತಾಂತ್ರಿಕ ಕಣ್ಗಾವಲಿನಲ್ಲಿ ಕಳವಾದ ಮೊಬೈಲ್‌ ಫೋನ್‌ಗಳ ಸಂಭವನೀಯ ಇರುವಿಕೆ ತಾಣ ಪತ್ತೆಯಾಗಿ ಅಂತಿಮವಾಗಿ ಅವುಗಳನ್ನು ಏರೋಸಿಟಿಯಿಂದ ವಶಪಡಿಸಿಕೊಳ್ಳಲಾಯಿತು.

ಅಂತೆಯೇ ಈ ಸಂಬಂಧ ಬಂಧಿತರಾದ ಇಬ್ಬರು ವ್ಯಕ್ತಿಗಳು ತಾವು ಗೋ ಏರ್‌ ಸಿಬಂದಿಗಳೆಂಬುದನ್ನು ಒಪ್ಪಿಕೊಂಡರು ಎಂದು ಡಿಸಿಪಿ ಹೇಳಿದರು. 

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.