ಪ್ರಯಾಣಿಕರ ಸೋಗು: 53 ಮೊಬೈಲ್‌ ಕದ್ದ ಇಬ್ಬರು GoAir ಅಧಿಕಾರಿ arrest


Team Udayavani, Oct 2, 2018, 4:58 PM IST

delhi-airport-terminal-700.jpg

ಹೊಸದಿಲ್ಲಿ : ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ  53 ಮೊಬೈಲ್‌ ಫೋನ್‌ಗಳನ್ನು ಕದ್ದ ಇಬ್ಬರು ಗೋ ಏರ್‌ ಎಕ್ಸಿಕ್ಯುಟಿವ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಬಂಧಿತ  ಗೋ ಏರ್‌ ಅಧಿಕಾರಿಗಳನ್ನು ಸಚಿನ್‌ ಮಾನವ್‌ (30) ಮತ್ತು ಸತೀಶ್‌ ಪಾಲ್‌ (40) ಎಂದು ಗುರುತಿಸಲಾಗಿದೆ. ಸಚಿನ್‌ ಮಾನವ್‌ 2011ರಿಂದ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಗೋ ಏರ್‌  ಸಂಸ್ಥೆಯ ಹಿರಿಯ ramp ಅಧಿಕಾರಿಯಾಗಿ ದುಡಿಯುತ್ತಿದ್ದರೆ ಸತೀಶ್‌ ಪಾಲ್‌ 2015ರಿಂದ ಗೋ ಏರ್‌ ಅಧಿಕಾರಿಯಾಗಿ ದುಡಿಯುತ್ತಿರುವುದಾಗಿ ತಿಳಿದು ಬಂದಿದೆ. 

ಸರಕು ಇಳಿಸುವ ಹೊಣೆಗಾರಿಕೆ ಹೊಂದಿದ್ದ ಈ ಇಬ್ಬರು ಅಧಿಕಾರಿಗಳು ತಾವು ಕದ್ದಿದ್ದ 53 ಮೊಬೈಲ್‌ ಫೋನ್‌ಗಳನ್ನು ಚೀಲವೊಂದರಲ್ಲಿ ಹಾಕಿ, ಕನ್ವೆಯರ್‌ ಬೆಲ್ಟ್ ನಲ್ಲಿ  ಅದನ್ನು ತಳ್ಳಿ, ಇತರ ಪ್ರಯಾಣಿಕರ ಹಾಗೆ ಆಗಮನ ದ್ವಾರದ ಮೂಲಕ ಬಂದು ಮೊಬೈಲ್‌ ಫೋನ್‌ ಚೀಲದೊಂದಿಗೆ ಹೊರ ನಡೆದು ಹೋದರೆಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. 

ಕಳೆದ ಸೆ.19ರಂದು ಕಾರ್ಗೋ ಕಂಪೆನಿಯೊಂದರ ಮ್ಯಾನೇಜರ್‌ ಓರ್ವರು ತಮ್ಮ ಕಂಪೆನಿಗೆ ಸೇರಿದ 53 ಮೊಬೈಲ್‌ ಫೋನ್‌ಗಳನ್ನು ಒಳಗೊಂಡಿದ್ದ ಸರಕು ಚೀಲ ಕಳವಾಗಿದೆ ಎಂದು ದೂರಿದ್ದರು ಎಂದು ಐಜಿಐ ಏರ್‌ ಪೋರ್ಟ್‌ ನ ಡಿಸಿಪಿ ಸಂಜಯ್‌ ಭಾಟಿಯಾ ಹೇಳಿದರು. 

ತಮಗೆ ಕಳುಹಿಸಲಾಗಿದ್ದ ಈ ಸರಕು ಗೋ ಏರ್‌ ವಿಮಾನ ಜಿ8-229ರ ಮೂಲಕ ಪಟ್ನಾದಿಂದ ದಿಲ್ಲಿ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ಗೆ ಬಂದಿತ್ತು. ಸ್ಥಳಾವಕಾಶದ ಕೊರತೆಯಿಂದಾಗಿ ಈ ಸರಕಿನ ಒಂದು ಭಾಗವನ್ನು ಗೋದಾಮಿಗೆ ಸ್ಥಳಾಂತರಿಸಲಾಗಿತ್ತು. ಗೋದಾಮಿನಲ್ಲಿ ಅನ್‌ಲೋಡ್‌ ಆದಾಗ ಕೇವಲ 30 ಬ್ಯಾಗುಗಳು ಕಂಡು ಬಂದು 53 ಫೋನ್‌ಗಳಿದ್ದ ಚೀಲ ನಾಪತ್ತೆಯಾಗಿತ್ತು ಎಂದು ಮ್ಯಾನೇಜರ್‌ ತಮ್ಮ ದೂರಿನಲ್ಲಿ ಹೇಳಿದ್ದರು ಎಂಬುದಾಗಿ ಡಿಸಿಪಿ ತಿಳಿಸಿದರು. 

ಸಿಸಿಟಿವಿ ಚಿತ್ರಿಕೆಯಲ್ಲಿ ಕೂಡ 53 ಮೊಬೈಲ್‌ ಫೋನ್‌ಗಳ ಚೀಲ ಎಲ್ಲಿ ನಾಪತ್ತೆಯಾಯಿತೆಂಬುದು ಗೊತ್ತಾಗಲಿಲ್ಲ. ಅದಾಗಿ ಕೆಲವು ದಿನಗಳ ಬಳಿಕ ನಡೆಸಲಾದ ತಾಂತ್ರಿಕ ಕಣ್ಗಾವಲಿನಲ್ಲಿ ಕಳವಾದ ಮೊಬೈಲ್‌ ಫೋನ್‌ಗಳ ಸಂಭವನೀಯ ಇರುವಿಕೆ ತಾಣ ಪತ್ತೆಯಾಗಿ ಅಂತಿಮವಾಗಿ ಅವುಗಳನ್ನು ಏರೋಸಿಟಿಯಿಂದ ವಶಪಡಿಸಿಕೊಳ್ಳಲಾಯಿತು.

ಅಂತೆಯೇ ಈ ಸಂಬಂಧ ಬಂಧಿತರಾದ ಇಬ್ಬರು ವ್ಯಕ್ತಿಗಳು ತಾವು ಗೋ ಏರ್‌ ಸಿಬಂದಿಗಳೆಂಬುದನ್ನು ಒಪ್ಪಿಕೊಂಡರು ಎಂದು ಡಿಸಿಪಿ ಹೇಳಿದರು. 

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.