ನಾಮಪತ್ರ ಹಿಂತೆಗತಕ್ಕೆ ಪ್ರಗ್ಯಾಠಾಕೂರ್‌ ಮನ ಒಲಿಸಿದ ಪ್ರಗ್ಯಾ ಠಾಕೂರ್‌!

ಇದು ಒಂದೇ ಹೆಸರಿನ ಇಬ್ಬರು ಅಭ್ಯರ್ಥಿಗಳ ನಾಮಪತ್ರಕ್ಕೆ ಸಂಬಂಧಿಸಿದ ವಿಷಯ!

Team Udayavani, Apr 28, 2019, 4:20 PM IST

Pargya—Pragya-28-4

ಭೋಪಾಲ್‌ : ಚುನಾವಣಾ ಸಮಯಗಳಲ್ಲಿ ರಾಜಕೀಯ ನಾಯಕರ ಹೆಸರನ್ನೇ ಹೊಂದಿರುವ ಕೆಲವೊಂದು ಜನರಿಗೆ ಸಖತ್‌ ಬೇಡಿಕೆ ಬರುತ್ತದೆ. ಅದರಲ್ಲೂ ಒಂದು ಕ್ಷೇತ್ರ ಹೈ ಪ್ರೊಫೈಲ್‌ ಆಗಿ ಬದಲಾದರಂತೂ ಇಂತವರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು.

ಮೊನ್ನೆ ತಾನೆ ಮುಕ್ತಾಯಗೊಂಡ ನಮ್ಮ ರಾಜ್ಯದ ಚುನಾವಣೆಯಲ್ಲಿ ಹೈ ಪ್ರೊಫೈಲ್‌ ಕ್ಷೇತ್ರಗಳಲ್ಲಿ ಒಂದಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಹೆಸರಿನ ಹಲವರು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದ ವಿಚಾರ ನಮಗೆಲ್ಲಾ ತಿಳಿದೇ ಇದೆ. ಇದರಲ್ಲಿ ಎದುರಾಳಿ ಪಕ್ಷದ ಅಭ್ಯರ್ಥಿಯ ಕೈವಾಡವೂ ಇರುತ್ತದೆ ಎನ್ನುವುದು ನಗ್ನಸತ್ಯ.

ತನ್ನ ಎದುರಾಳಿ ಬಲಿಷ್ಠನಾಗಿದ್ದಾಗ ಮತ್ತು ಆತ/ಆಕೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಎದುರಾಳಿ ಅಭ್ಯರ್ಥಿಗೆ ಅನ್ನಿಸಿದಾಗ ಒಂದೇ ಹೆಸರಿನ ಹೆಚ್ಚೆಚ್ಚು ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಮತದಾರರಲ್ಲಿ ಗೊಂದಲ ಮೂಡಿಸುವ ಯತ್ನಗಳು ಭಾರತೀಯ ಚುನಾವಣಾ ಇತಿಹಾಸದಲ್ಲಿ ಹಾಸುಹೊಕ್ಕಾಗಿದೆ.
ಇದಕ್ಕೆ ವ್ಯತಿರಿಕ್ತವಾಗಿರುವ ಕಥೆಯೊಂದು ಇಲ್ಲಿದೆ ನೋಡಿ.

ಮಧ್ಯಪ್ರದೇಶದ ಬೋಪಾಲ್‌ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸಾಧ್ವಿ ಪ್ರಗ್ಯಾ ಠಾಕೂರ್‌ ಅವರು ಕಾಂಗ್ರೆಸ್‌ ನ ದಿಗ್ವಿಜಯ ಸಿಂಗ್‌ ವಿರುದ್ಧ ಕಣಕ್ಕಿಳಿದಿದ್ದಾರೆ. ಇಲ್ಲಿ ಈ ಎರಡು ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ಇದೆ. ಹಾಗಾಗಿ ಪ್ರತೀ ಮತವೂ ಇಲ್ಲಿ ಅಭ್ಯರ್ಥಿಯ ಗೆಲುವನ್ನು ನಿರ್ಧರಿಸುತ್ತದೆ. ಹೀಗಿರುವಾಗ ಪ್ರಗ್ಯಾ ಠಾಕೂರ್‌ ಎಂಬ ಹೆಸರಿನ ಇಬ್ಬರು ಸ್ಪರ್ಧಿಸಿದರೆ ಸಹಜವಾಗಿಯೇ ಗೆಲ್ಲುವ ವಿಶ್ವಾಸದಲ್ಲಿರುವ ಅಭ್ಯರ್ಥಿಗೆ ಚಿಂತೆಯಾಗದೆ ಇರದು.

ಹಾಗಾಗಿ ಸಾಧ್ವಿ ಪ್ರಗ್ಯಾ ಠಾಕೂರ್‌ ಅವರು ಈ ಸಮಸ್ಯೆಯನ್ನು ‘ಸಾಮ’ದಿಂದಲೇ ಬಗೆಹರಿಸಲು ನಿರ್ಧರಿಸಿದರು. ಮತ್ತು ಅವರ ಈ ಪ್ರಯತ್ನ ಇದೀಗ ಯಶಸ್ವಿಯೂ ಆಗಿದೆ. ಸಾಧ್ವಿ ಪ್ರಗ್ಯಾ ಠಾಕೂರ್‌ ಅವರನ್ನು ಬಿಜೆಪಿಯು ಭೋಪಾಲ್‌ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪ್ರಕಟಿಸುವುದಕ್ಕೂ ಮುಂಚೆಯೇ ಪ್ರಗ್ಯಾ ಠಾಕೂರ್‌ ಎಂಬ ಮಹಿಳೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಆದರೆ ಇದೀಗ ಕೇಸರಿ ಪಕ್ಷದಿಂದಲೂ ಪ್ರಗ್ಯಾ ಠಾಕೂರ್‌ ಎಂಬ ಅಭ್ಯರ್ಥಿಯೇ ಕಣದಲ್ಲಿರುವುದರಿಂದ ಮತದಾರರಲ್ಲಿ ಹೆಸರಿನ ಗೊಂದಲ ಉಂಟಾಗಬಾರದು ಎನ್ನುವ ಕಾರಣಕ್ಕಾಗಿ ಸಾಧ್ವಿ ಪ್ರಗ್ಯಾ ಠಾಕೂರ್‌ ಅವರು ತನ್ನದೇ ಹೆಸರಿನ ಸ್ವತಂತ್ರ ಅಭ್ಯರ್ಥಿಯನ್ನು ಮನೆಗೆ ಕರೆಯಿಸಿಕೊಂಡು ಮಾತುಕತೆ ನಡೆಸಿ ಅವರ ನಾಮಪತ್ರವನ್ನು ಹಿಂಪಡೆಯುವಂತೆ ಮನ ಒಲಿಸುವಲ್ಲಿ ಸಾಧ್ವಿ ಯಶಸ್ವಿಯಾಗಿದ್ದಾರೆ.

ಮಾತುಕತೆಯ ಬಳಿಕ ಸ್ವತಂತ್ರ ಅಭ್ಯರ್ಥಿ ಪ್ರಗ್ಯಾ ಠಾಕೂರ್‌ ಅವರ ಜೊತೆಯಲ್ಲೇ ಮಾಧ್ಯಮದವರ ಮುಂದೆ ಕಾಣಿಸಿಕೊಂಡ ಸಾಧ್ವಿ ಪ್ರಗ್ಯಾ ಠಾಕೂರ್‌ ಭೋಪಾಲ್‌ ಕ್ಷೇತ್ರದಲ್ಲಿ ಇಬ್ಬಿಬ್ಬರು ಪ್ರಗ್ಯಾ ಠಾಕೂರ್‌ ಗಳು ಸ್ಪರ್ಧಿಸುತ್ತಿಲ್ಲ ಎಂಬ ವಿಚಾರವನ್ನು ಬಹಿರಂಗಪಡಿಸಿದರು. ಮಾತ್ರವಲ್ಲದೇ ಸ್ವತಂತ್ರ ಅಭ್ಯರ್ಥಿಯಾಗಿದ್ದ ಪ್ರಗ್ಯಾ ಠಾಕೂರ್‌ ಅವರು ಬಿಜೆಪಿ ಅಭ್ಯರ್ಥಿ ಪ್ರಗ್ಯಾಠಾಕೂರ್‌ ಅವರಿಗೆ ಈ ಚುನಾವಣೆಯಲ್ಲಿ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಎಂದೂ ಸಹ ಸಾಧ್ವಿ ತಿಳಿಸಿದರು.

2014ರ ಲೋಕಸಭಾ ಚುನಾವಣೆಯಲ್ಲಿ ಛತ್ತೀಸ್‌ ಗಢದ ಮಹಾಸಮುಂದ್‌ ಲೋಕಸಭಾ ಕ್ಷೇತ್ರದಲ್ಲಿ ಚಂದೂ ಲಾಲ್‌ ಸಾಹೂ ಹೆಸರಿನ 10 ಜನ ಅಭ್ಯರ್ಥಿಗಳು ಕಣದಲ್ಲಿದ್ದರು. ಇಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಚಂದೂ ಲಾಲ್‌ ಸಾಹೂ ಮತ್ತು ರಾಜ್ಯದ ಮಜೀ ಮುಖ್ಯಮಂತ್ರಿ ಅಜಿತ್‌ ಜೋಗಿ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಹಾಗಾಗಿ ಅಜಿತ್‌ ಜೋಗಿ ಚಿತಾವಣೆಯಿಂದಲೇ ಬಿಜೆಪಿ ಅಭ್ಯರ್ಥಿಯ ಹೆಸರನ್ನೇ ಹೋಲುವ 10 ಜನ ಚಂದೂ ಲಾಲ್‌ ಸಾಹುಗಳು ಸ್ವತಂತ್ರವಾಗಿ ಸ್ಪರ್ಧಿಸಿದ್ದರಬಹುದು ಎಂಬ ಮಾತುಗಳು ಆಗ ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು!

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.