Ayodhya ರಾಮಮಂದಿರದಲ್ಲಿ ಹೊರಗಿನಿಂದ ತಂದ ಪ್ರಸಾದ ನಿಷಿದ್ಧ
ಲಡ್ಡು ವಿವಾದದ ಬೆನ್ನಲ್ಲೇ ನಿರ್ಧಾರ, ತುಪ್ಪ ಪರೀಕ್ಷೆ ನಡೆಸಿ: ಮಂದಿರ ಅರ್ಚಕ
Team Udayavani, Sep 28, 2024, 6:45 AM IST
ಅಯೋಧ್ಯೆ: ತಿರುಪತಿ ಲಡ್ಡುವಿನ ಕಲಬೆರಕೆ ವಿವಾದದ ಬೆನ್ನಲ್ಲೇ ಅಯೋಧ್ಯೆಯ ರಾಮಮಂದಿರದಲ್ಲಿ ಹೊರಗಿ ನಿಂದ ಬರುವ ಪ್ರಸಾದಗಳನ್ನು ದೇವರಿಗೆ ಅರ್ಪಿಸುವುದನ್ನು ನಿಷೇಧಿಸಲಾಗಿದೆ. ಇದೇ ವೇಳೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ದೇಶದೆಲ್ಲೆಡೆ ಬಿಕರಿಯಾಗುತ್ತಿರುವ ತುಪ್ಪಗಳ ಶುದ್ಧತೆಯನ್ನು ಪ್ರಶ್ನಿಸಿದ್ದಾರೆ.
ಜತೆಗೆ ದೇವಾಲಯಗಳಲ್ಲಿ ಅಲ್ಲಿನ ಅರ್ಚಕರ ಮೇಲ್ವಿಚಾರಣೆಯಲ್ಲೇ ಪ್ರಸಾದವನ್ನು ತಯಾರಿಸ ಬೇಕು ಎಂದು ಕೋರಿದ್ದಾರೆ. ಅಲ್ಲದೇ ಎಲ್ಲ ಪ್ರಮುಖ ಧಾರ್ಮಿಕ ಕೇಂದ್ರಗಳು ಹಾಗೂ ದೇವಾಲಯಗಳಲ್ಲಿ ಹೊರಗಿನಿಂದ ತಂದ ಪ್ರಸಾದಗಳನ್ನು ದೇವರಿಗೆ ಅರ್ಪಿಸಲು ಸಂಪೂರ್ಣ ನಿಷೇಧ ಹೇರಬೇಕು ಎಂದು ಅವರು ಆಗ್ರಹಿಸಿದ್ದಾರೆ. “ತಿರುಪತಿ ಪ್ರಸಾದದಲ್ಲಿ ಕೊಬ್ಬು ಬಳಕೆಯಾದ ಬಗ್ಗೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಭಕ್ತರು ಹಾಗೂ ಧಾರ್ಮಿಕ ಮುಖಂಡರು ಇದನ್ನು ಖಂಡಿಸಿದ್ದು, ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ ಎಂದು ಸತ್ಯೇಂದ್ರ ದಾಸ್ ಹೇಳಿದ್ದಾರೆ.
ಅಲ್ಲದೆ ದೇಶದಲ್ಲಿ ಮಾರಾಟವಾಗುತ್ತಿರುವ ತುಪ್ಪ ಹಾಗೂ ಎಣ್ಣೆಯ ಶುದ್ಧತೆ ಬಗ್ಗೆಯೂ ಸರಕಾರ ಪರೀಕ್ಷೆ ನಡೆಸಬೇಕು ಎಂದ ಅವರು, ದೇಶದ ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಿತೂರಿ ನಡೆದಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ
Tirupati ಭೇಟಿ; ಜಗನ್ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ
India;ಏಷ್ಯಾ-ಪೆಸಿಫಿಕ್ ವಲಯದಲ್ಲಿ 3ನೇ ಶಕ್ತಿಶಾಲಿ ದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
Congress Government: ಪೊಲೀಸ್ ಅಧಿಕಾರಿಗಳ ವಿರುದ್ಧ ಇಂದು ಎಚ್ಡಿಕೆ ದಾಖಲೆ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.