ರಾಷ್ಟ್ರಪತಿ ಚುನಾವಣೆ: ಶಾಸಕರ ಅಡ್ಡ ಮತದಾನ: ಹಕ್ಕು ಚಲಾವಣೆಗೆ 8 ಸಂಸದರ ಗೈರು

ಎನ್‌ಡಿಎ ಅಭ್ಯರ್ಥಿಗೆ ಮತ ಹಾಕಿದ ಕಾಂಗ್ರೆಸ್‌, ಎನ್‌ಸಿಪಿ ಶಾಸಕರು

Team Udayavani, Jul 19, 2022, 5:40 AM IST

ರಾಷ್ಟ್ರಪತಿ ಚುನಾವಣೆ: ಶಾಸಕರ ಅಡ್ಡ ಮತದಾನ: ಹಕ್ಕು ಚಲಾವಣೆಗೆ 8 ಸಂಸದರ ಗೈರು

ನವದೆಹಲಿ: ಹದಿನೈದನೇ ರಾಷ್ಟ್ರಪತಿ ಆಯ್ಕೆಗೆ ಸೋಮವಾರ ನಡೆದ ಚುನಾವಣೆ ಹೆಚ್ಚಾ ಕಡಿಮೆ ಸುಸೂತ್ರವಾಗಿ ಮುಕ್ತಾಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೇ ಮೊದಲನೆಯವರಾಗಿ ಮತ ಹಾಕಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ವ್ಹೀಲ್‌ ಚೇರ್‌ನಲ್ಲಿ ಬಂದು ಮತ ಚಲಾಯಿಸಿದ್ದಾರೆ. ಅನಾರೋಗ್ಯ ನಿಮಿತ್ತ ಶ್ರೀನಿವಾಸ ಪ್ರಸಾದ್‌ ಅವರೂ ಬೆಂಗಳೂರಲ್ಲೇ ಮತ ಹಾಕಿದ್ದಾರೆ.

ನವದೆಹಲಿಯ ಸಂಸತ್‌ ಭವನದಲ್ಲಿ ನಡೆದ ಚುನಾವಣೆಯಲ್ಲಿ ಶೇ.98.90 ಮತದಾನವಾಗಿದೆ. ಇದರ ಹೊರತಾಗಿ ಕೆಲವು ರಾಜ್ಯಗಳಲ್ಲಿ ಅಡ್ಡಮತದಾನವಾಗಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮತಹಾಕಿದ್ದಾರೆ. ಜು.21ರಂದು ಫ‌ಲಿತಾಂಶ ಹೊರಬೀಳಲಿದೆ.

ಜಾರ್ಖಂಡ್‌, ಗುಜರಾತ್‌, ಹರ್ಯಾಣ, ಒಡಿಶಾಗಳಲ್ಲಿನ ಕೆಲವು ಶಾಸಕರು “ಆತ್ಮಸಾಕ್ಷಿಗೆ’ ಅನುಗುಣವಾಗಿ ಮತ ಹಾಕಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಅಸ್ಸಾಂನಲ್ಲಿ ಕಾಂಗ್ರೆಸ್‌ನ 20 ಶಾಸಕರು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಜು ಅವರಿಗೆ ಮತ ಹಾಕಿದ್ದಾರೆ ಎಂದು ಐಯುಡಿಎಫ್ ಶಾಸಕ ಕರಿಮುದ್ದೀನ್‌ ಬಾಭುìಯಾನ್‌ ಹೇಳಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿ ಯಶವಂತ ಸಿನ್ಹಾ ಪರವಾಗಿ ಮತ ಹಾಕುವುದಿಲ್ಲ ಎಂದು ಮಾಜಿ ಸಚಿವ ಶಿವಪಾಲ್‌ ಸಿಂಗ್‌ ಯಾದವ್‌ ಪ್ರಕಟಿಸಿದ್ದರು. ಸಿನ್ಹಾ ಅವರು ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ಅವರನ್ನು ಐಎಸ್‌ಐ ಏಜೆಂಟ್‌ ಎಂದು ಟೀಕಿಸಿದ್ದರು. ಹೀಗಾಗಿ, ಅವರಿಗೆ ಮತ ಹಾಕುವುದಿಲ್ಲ ಎಂದು ಪ್ರಕಟಿಸಿದ್ದರು.

ಗುಜರಾತ್‌ನಲ್ಲಿ ಎನ್‌ಸಿಪಿ ಶಾಸಕ ಕಂಧಲ್‌ ಜಡೇಜಾ ಅವರು ದ್ರೌಪದಿ ಮುರ್ಮು ಅವರಿಗೆ ಮತ ಹಾಕಿದ್ದಾಗಿ ಹೇಳಿಕೊಂಡಿದ್ದಾರೆ.

ಜಾರ್ಖಂಡ್‌ನ‌ಲ್ಲಿ ಎನ್‌ಸಿಸಿ ಶಾಸಕ ಕಮೇಶ್‌ ಸಿಂಗ್‌ ಎನ್‌ಡಿಎ ಅಭ್ಯರ್ಥಿಗೆ ಮತ ಹಾಕಿದ್ದಾರೆ ಮತ್ತು 65 ಶಾಸಕರು ಮುರ್ಮು ಪರವಾಗಿಯೇ ಮತ ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಬಿರಾಂಚಿ ನಾರಾಯಣ ಹೇಳಿಕೊಂಡಿದ್ದಾರೆ. ಪಂಜಾಬ್‌ನ ಎಸ್‌ಎಡಿ ಶಾಸಕರೊಬ್ಬರು ಮತದಾನಕ್ಕೆ ಬಹಿಷ್ಕಾರ ಹಾಕಿದ್ದಾರೆ.

ಸಂಸದರ ಗೈರು:
ನವದೆಹಲಿಯಲ್ಲಿ ಬಿಜೆಪಿ ಸಂಸದರಾದ ಸನ್ನಿ ಡಿಯೋಲ್‌ ಮತ್ತು ಸಂಜಯ ಧೋತ್ರೆ ಆರೋಗ್ಯ ಕಾರಣಗಳಿಂದ ಮತ ಚಲಾಯಿಸಿಲ್ಲ. ಸಂಜಯ ಧೋತ್ರೆ ಅನಾರೋಗ್ಯ ಕಾರಣದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಸನ್ನಿ ಡಿಯೋಲ್‌ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಸೇನೆಯಿಂದ ಇಬ್ಬರು, ಬಿಎಸ್‌ಪಿ, ಕಾಂಗ್ರೆಸ್‌, ಎಸ್‌ಪಿ ಮತ್ತು ಎಐಎಂಐಎಂ ಪಕ್ಷಗಳ ತಲಾ ಒಬ್ಬ ಸಂಸದರು ವಿವಿಧ ಕಾರಣಗಳಿಗಾಗಿ ಮತ ಹಾಕಿಲ್ಲ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.