BJPಸೇರಲು ವಿಪಕ್ಷ ನಾಯಕರಿಗೆ ಒತ್ತಡ: ಕೈ
Team Udayavani, Apr 7, 2024, 1:24 AM IST
ಜೈಪುರ: ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿರುವ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಮೋದಿ ಅವರಿಂದ ದೇಶ ನಾಶವಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಪ್ರಜಾಪ್ರ ಭುತ್ವವನ್ನು ಬಿಜೆಪಿ ಹಾಳು ಮಾಡುತ್ತಿದ್ದು, ವಿಪಕ್ಷ ನಾಯಕರು ಬಿಜೆಪಿ ಸೇರುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಿದ್ದಾರೆ.
ಜೈಪುರ ರ್ಯಾಲಿಯಲ್ಲಿ ಕಾಂಗ್ರೆಸ್ ಚುನಾವಣ ಪ್ರಣಾಳಿಕೆಯನ್ನೂ ಸಾರ್ವ ಜನಿಕವಾಗಿ ಇದೇ ಮೊದಲ ಬಾರಿಗೆ ಅನಾವರಣಗೊಳಿಸಲಾಯಿತು. ಬಳಿಕ ಮಾತ ನಾಡಿದ ಸೋನಿಯಾ ಗಾಂಧಿ ಅವರು, “10 ವರ್ಷಗಳ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದರೂ ನಿರುದ್ಯೋಗ, ಹಣದುಬ್ಬರ, ಆರ್ಥಿಕ ಕುಸಿತ ಮತ್ತು ಅಸಮಾನತೆಯಲ್ಲಿ ಯಾವುದೇ ಬದಲಾವಣೆ ಯಾಗಿಲ್ಲ. ಪ್ರಸ್ತುತ ನಮ್ಮ ದೇಶದ ಪ್ರಜಾ ಪ್ರಭುತ್ವ ಅಪಾಯದಲ್ಲಿದೆ. ಸಾಂವಿ ಧಾನಿಕ ಸಂಸ್ಥೆಗಳನ್ನು ಬಲವಂತವಾಗಿ ನಾಶ ಮಾಡ ಲಾಗುತ್ತಿದೆ. ಇದು ನಿರಂಕುಶ ಪ್ರಭು ತ್ವವಾ ಗಿದೆ. ನಾವೆಲ್ಲರೂ ಇದಕ್ಕೆ ಉತ್ತರ ನೀಡ ಬೇಕಾಗಿದೆ. ದೇಶದ ಪ್ರಜಾಪ್ರ ಭುತ್ವ ವನ್ನು ರಕ್ಷಣೆ ಮಾಡಬೇಕಿದೆ ಎಂದರು.
ಟೈಲರ್ ಕರೆಸಿ ಪ್ರಧಾನಿ ಮೋದಿ ಎದೆ ಅಳತೆ ಮಾಡೋಣ: ಮಲ್ಲಿಕಾರ್ಜುನ ಖರ್ಗೆ
ಮೋದಿ ಅವರು ತಮ್ಮದು 56 ಇಂಚಿನ ಎದೆ ಎಂದು ಕರೆದುಕೊಳ್ಳುತ್ತಾರೆ. ನಾವು ಟೈಲರನ್ನು ಕರೆಸಿ ಇದನ್ನು ಅಳತೆ ಮಾಡಿಸೋಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದ್ದಾರೆ. ಬಹುಮತ ಸಿಕ್ಕರೆ ಸಂವಿಧಾನ ಬದಲಿಸುವುದಾಗಿ ಬಿಜೆಪಿ ಹಾಗೂ ಆರೆಸ್ಸೆಸ್ನವರು ಸೇರಿ ಹೇಳುತ್ತಿದ್ದಾರೆ. ಇದು ಸರಿಯಲ್ಲ ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಸರದಾರ ಎಂದು ಖರ್ಗೆ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.