ಪ್ರಧಾನಿ ಮೋದಿ ಪಂಜಾಬ್ ಭೇಟಿ: ಭದ್ರತಾ ಲೋಪದ ಬಗ್ಗೆ ವರದಿ ಕೇಳಿದ ಗೃಹ ಇಲಾಖೆ
ಹೊಣೆಗಾರಿಗೆ ನಿಗದಿ ಮಾಡಿ ಎಂದು ಚನ್ನಿಗೆ ತಾಕೀತು
Team Udayavani, Jan 6, 2022, 2:26 PM IST
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಭೇಟಿ ವೇಳೆಯಲ್ಲಿ ಆದ ಭದ್ರತಾ ಲೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಗೃಹ ಇಲಾಖೆ ಗುರುವಾರ ವರದಿ ಪ್ರಕಟಿಸಿದ್ದು, ಘಟನಾ ಸಂಬಂಧ ಹೊಣೆ ನಿಗದಿ ಪಡಿಸುವಂತೆ ಪಂಜಾಬ್ ಸರಕಾರಕ್ಕೆ ತಾಕೀತು ಮಾಡಿದೆ.
ಈ ಸಂಬಂಧ ಪಂಜಾಬ್ ಸರಕಾರಕ್ಕೆ ಸುತ್ತೋಲೆ ಹೊರಡಿಸಿರುವ ಕೇಂದ್ರ ಗೃಹ ಇಲಾಖೆ ಪ್ರಧಾನಿ ಸಂಚರಿಸುವ ಮಾರ್ಗದ ಬಗ್ಗೆ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಿದ್ದರೂ ಭದ್ರತಾ ಲೋಪವಾಗಿರುವುದಕ್ಕೆ ಕಾರಣ ಏನು ? ಈ ಬಗ್ಗೆ ಅತಿ ಶೀಘ್ರದಲ್ಲೇ ವಿಸ್ತ್ರತ ವರದಿ ನೀಡುವುದರ ಜತೆಗೆ ಭದ್ರತಾ ಲೋಪಕ್ಕೆ ಕಾರಣರಾದವರ ವಿರುದ್ಧ ಹೊಣೆಗಾರಿಕೆ ನಿಗದಿ ಮಾಡಿ ಕ್ರಮ ತೆಗೆದುಕೊಳ್ಳಬೇಕು. ಇದೊಂದು ಗಂಭೀರ ಭದ್ರತಾ ಲೋಪದ ಪ್ರಕರಣವಾಗಿದೆ ಎಂದು ಎಚ್ಚರಿಕೆ ನೀಡಿದೆ.
ಪ್ರಧಾನಿ ಪ್ರಯಾಣಿಸುವ ಮಾರ್ಗದ ಬಗ್ಗೆ ಸಾಕಷ್ಟು ಮುಂಚಿತವಾಗಿ ಪಂಜಾಬ್ ಸರಕಾರಕ್ಕೆ ಮಾಹಿತಿ ನೀಡಲಾಗಿತ್ತು. ನಿಯಮ ಪ್ರಕಾರ ಪ್ರಧಾನಿ ಬೆಂಗಾವಲು ಪಡೆ ಸಾಗುವ ಮಾರ್ಗದಲ್ಲಿ ಸಾಕಷ್ಟು ಮುನ್ನೆಚ್ಚರಿಕೆ, ಹೆಚ್ಚುವರಿ ಪಡೆ, ಅನಿವಾರ್ಯ ಬಂದರೆ ಪರ್ಯಾಯ ಮಾರ್ಗದ ಬಗ್ಗೆ ಸರಕಾರ ವ್ಯವಸ್ಥೆ ಮಾಡಬೇಕಿತ್ತು. ಆದರೆ ಪಂಜಾಬ್ ಸರಕಾರ ಹೆಚ್ಚುವರಿ ಭದ್ರತಾ ಪಡೆ ನಿಯೋಜನೆ ಮಾಡದೇ ಇರುವುದು ಮೇಲ್ನೋಟಕ್ಕೆ ಸ್ಪಷ್ಟ ವಾಗಿದೆ ಎಂದು ಗೃಹ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ.
ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ರಸ್ತೆ ಮಾರ್ಗದ ಮೂಲಕ ಪ್ರಯಾಣಿಸುತ್ತೇವೆ ಎಂದು ಪಂಜಾಬ್ ಡಿಜಿಪಿಗೆ ಮಾಹಿತಿ ರವಾನಿಸಲಾಗಿತ್ತು. ಅವರು ಪ್ರಯಾಣಕ್ಕೆ ಒಪ್ಪಿಗೆ ಹಾಗೂ ಮಾರ್ಗದ ಬಗ್ಗೆ ಒಪ್ಪಿಗೆ ನೀಡಿದ ಬಳಿಕ ಪ್ರಯಾಣ ಸಾಗಿತ್ತು.ಆದರೂ ರೈತರು ಇದೇ ಮಾರ್ಗದಲ್ಲಿ ಪ್ರತಿಭಟನೆ ಹೇಗೆ ನಡೆಸಿದರು ? 20 ನಿಮಿಷ ಪ್ರಧಾನಿ ಮೇಲುಸೇತುವೆಯಲ್ಲಿ ಕಾಯುವಂತಾಗಿದ್ದು ಭಾರಿ ಲೋಪ ಎಂದು ಗೃಹ ಇಲಾಖೆ ಪತ್ರದಲ್ಲಿ ಆಕ್ಷೇಪಿಸಿದೆ.
ಅದೇ ರೀತಿ ಪ್ರಧಾನಿ ಕಾರ್ಯಕ್ರಮ ಮೊಟಕುಗೊಳಿಸಿದ್ದು ಭದ್ರತಾ ಲೋಪದಿಂದ ಅಲ್ಲ. ಕಾರ್ಯಕ್ರಮದಲ್ಲಿ ಜನರಿಲ್ಲದೇ ವಾಪಾಸ್ ಆದರು ಎಂದು ಪಂಜಾಬ್ ಸಿಎಂ ಚನ್ನಿ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರ್ಯಾಲಿಯಲ್ಲಿ ಸೇರಿದ್ದ ಜನಸ್ತೋಮದ ವಿಡಿಯೋ ಹಂಚಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.