PM Modi ಕಿಡಿ ; ರೊಹಿಂಗ್ಯಾ ಜತೆ ಜೆಎಂಎಂ ಶಾಮೀಲಾಗಿದೆ


Team Udayavani, Sep 16, 2024, 1:26 AM IST

1-mmmm

ಜಮ್‌ಶೆಡ್‌ಪುರ: ಝಾರ್ಖಂಡ್‌ನ‌ಲ್ಲಿ ಆಡಳಿತ ನಡೆಸುತ್ತಿರುವ ಝಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷ ಬಾಂಗ್ಲಾದೇಶಿಗಳು ಮತ್ತು ರೊಹಿಂಗ್ಯಾಗಳ ಜತೆ ಶಾಮೀಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ವೋಟ್‌ಬ್ಯಾಂಕ್‌ ಹೆಚ್ಚಳ ಮಾಡಿಕೊಳ್ಳುವುದಕ್ಕಾಗಿ ಇವರು ಒಳನುಸುಳಲು ಸಹಾಯ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇಲ್ಲಿನ ಗೋಪಾಲ್‌ ಮೈದಾನದಲ್ಲಿ ರಾಜ್ಯ ಬಿಜೆಪಿ ಆಯೋಜಿಸಿದ್ದ “ಪರಿವರ್ತನಾ ಮಹಾರ್ಯಾಲಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯ ದಲ್ಲಿರುವ ಆಡಳಿತ ಪಕ್ಷದ ಮೈತ್ರಿಕೂಟದ ವಿರುದ್ಧ ವಾಗ್ಧಾಳಿ ನಡೆಸಿದರು.

“ಸಂತಾಲ ಪರಗಣದಲ್ಲಿ ಆದಿವಾಸಿಗಳ ಜನಸಂಖ್ಯೆ ನಿರಂತರವಾಗಿ ಕುಸಿಯುತ್ತಿದೆ. ಇವರ ಭೂಮಿಯನ್ನು ಬಾಂಗ್ಲಾದೇಶದಿದ ಆಗಮಿಸುತ್ತಿರುವ ನುಸುಳು ಕೋರರು ಆಕ್ರಮಿಸಿಕೊಳ್ಳುತ್ತಿದ್ದಾರೆ. ಪಂಚಾಯತ್‌ ವ್ಯವಸ್ಥೆಯ ಮೇಲೆ ಪ್ರಾಬಲ್ಯ ಸಾಧಿಸಲು ಯತ್ನಿಸು ತ್ತಿದ್ದಾರೆ. ಇದರಿಂದಾಗಿ ಝಾರ್ಖಂಡ್‌ನ‌ ಪುತ್ರಿಯರ ಮೇಲೆ ಅಪರಾಧಗಳು ಹೆಚ್ಚುತ್ತಿವೆ. ರಾಜ್ಯದಲ್ಲಿ ಹೆಚ್ಚಾಗುತ್ತಿರುವ ನುಸುಳುಕೋರರಿಂದ ಪ್ರತಿಯೊಬ್ಬ ಝಾರ್ಖಂಡ್‌ ನಿವಾಸಿ ಅಭದ್ರತೆ ಎದುರಿಸುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.

“ಜೆಎಂಎಂ ಈ ನುಸುಳುಕೋರರ ಜತೆ ಶಾಮೀಲಾಗಿದೆ. ಇವರು ಜೆಎಂಎಂನಲ್ಲೂ ತಮ್ಮ ಪ್ರಾಬಲ್ಯ ಸಾಧಿಸಲು ಮುಂದಾಗುತ್ತಿದ್ದಾರೆ. ಕಾಂಗ್ರೆಸ್‌ ಮತ್ತು ಜೆಎಂಎಂ ನಡುವೆ ಮೈತ್ರಿಕೂಟ ರಚನೆ ಯಾದಾಗಿನಿಂದ ಇವೆಲ್ಲವೂ ಆರಂಭವಾಗಿದೆ. ಈ ಮೈತ್ರಿಕೂಟಕ್ಕೆ ರಾಜ್ಯದ ಹಿತಕ್ಕಿಂತ ಓಟ್‌ ಬ್ಯಾಂಕ್‌ ಬೇಕಿದೆ. ರಾಜ್ಯದಲ್ಲಿ ನಡೆಯುತ್ತಿರುವ ನುಸುಳು ಕೋರರ ಬಗ್ಗೆ ಮಾಹಿತಿ ಕಲೆ ಹಾಕಲು ಹೈಕೋರ್ಟ್‌ ಸಮಿತಿಯನ್ನು ರಚನೆ ಮಾಡುವಂತಾಗಿದ್ದು ಸರಕಾರದ ನಿಲುವನ್ನು ತೋರಿಸುತ್ತದೆ. ಬಾಂಗ್ಲಾದೇಶ ಮತ್ತು ರೊಹಿಂಗ್ಯಾ ನುಸುಳುಕೋರರು ರಾಜ್ಯದ ಭದ್ರತೆಗೆ ಧಕ್ಕೆ ಒಡ್ಡಲಿದ್ದಾರೆ ಎಂದು ಅವರು ಹೇಳಿದರು.

6 ವಂದೇ ಭಾರತ್‌ ರೈಲಿಗೆ ಮೋದಿ ಚಾಲನೆ
ಬಿಹಾರ, ಝಾರ್ಖಂಡ್‌, ಒಡಿಶಾ ಮತ್ತು ಉತ್ತರಪ್ರದೇಶಗಳಲ್ಲಿ ಚಲಿಸುವ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ರವಿವಾರ ವರ್ಚುವಲ್‌ ಆಗಿ ಚಾಲನೆ ನೀಡಿದರು. ಅಲ್ಲದೇ ಝಾರ್ಖಂಡ್‌ನ‌ಲ್ಲಿ 660 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

32,000 ಮಂದಿಗೆ ಪಿಎಂ ಆವಾಸ್‌ ಅನುಮತಿ ಪತ್ರ
ಪ್ರಧಾನಮಂತ್ರಿ ಗ್ರಾಮೀಣ ಆವಾಸ್‌ ಯೋಜನೆಯ 32,000 ಮಂದಿ ಫ‌ಲಾನುಭವಿಗಳಿಗೆ ಪ್ರಧಾನಿ ಮೋದಿ ಅವರು ರವಿವಾರ ಅನುಮತಿ ಪತ್ರಗಳನ್ನು ವಿತರಣೆ ಮಾಡಿದರು. ಅಲ್ಲದೇ ಮನೆ ನಿರ್ಮಾಣಕ್ಕೆ 32 ಕೋಟಿ ರೂ.ಗಳ ಮೊದಲ ಕಂತನ್ನು ಬಿಡುಗಡೆ ಮಾಡಿದರು. ಜತೆಗೆ ದೇಶಾದ್ಯಂತ 46,000 ಮಂದಿ ಫ‌ಲಾನುಭವಿಗಳಿಗೆ ವರ್ಚುವಲ್‌ ಆಗಿ ಕೀ ಗಳನ್ನು ವಿತರಣೆ ಮಾಡಿದರು.

ಜೆಎಂಎಂ, ಕಾಂಗ್ರೆಸ್‌, ಆರ್‌ಜೆಡಿ ರಾಜ್ಯದ ನಿಜವಾದ ಶತ್ರುಗಳು
ಝಾರ್ಖಂಡ್‌ನ‌ಲ್ಲಿ ಆಡಳಿತ ನಡೆಸುತ್ತಿರುವ ಜೆಎಂಎಂ, ಕಾಂಗ್ರೆಸ್‌ ಮತ್ತು ಆರ್‌ಜೆಡಿ ಪಕ್ಷಗಳು ರಾಜ್ಯದ ಶತ್ರುಗಳಾಗಿದ್ದಾರೆ. ಝಾರ್ಖಂಡ್‌ ರಚನೆಯ ದ್ವೇಷವನ್ನು ತೀರಿಸಿಕೊಳ್ಳಲು ಆರ್‌ಜೆಡಿ ಕಾಯುತ್ತಿದ್ದರೆ, ಕಾಂಗ್ರೆಸ್‌ ಝಾರ್ಖಂಡನ್ನು ಮೊದಲಿನಿಂ ದಲೂ ದ್ವೇಷಿಸುತ್ತದೆ. ದಿಲ್ಲಿಯಲ್ಲಿ ಆಡಳಿತ ನಡೆಸಿದರೂ ಹಿಂದುಳಿದ ವರ್ಗವನ್ನು ಮೇಲೆತ್ತಲು ಕಾಂಗ್ರೆಸ್‌ ಯತ್ನಿಸಲಿಲ್ಲ. ಈಗ ಜೆಎಂಎಂ ಗಣಿಗಾರಿಕೆ ಮೂಲಕ ರಾಜ್ಯವನ್ನು ಲೂಟಿ ಮಾಡುತ್ತಿದೆ. ಭ್ರಷ್ಟಾಚಾರದ ಪಾಠವನ್ನು ಕಾಂಗ್ರೆಸ್‌ ಈಗ ಜೆಎಂಎಂಗೂ ಕಲಿಸಿದೆ ಎಂದು ಅವರು ಹೇಳಿದ್ದಾರೆ.

ಬುಡಕಟ್ಟು, ಬಡವರು, ಸ್ತ್ರೀಯರ ಅಭಿವೃದ್ಧಿ ಕೇಂದ್ರದ ಆದ್ಯತೆ
ರಾಂಚಿ: ಝಾರ್ಖಂಡ್‌ನ‌ಲ್ಲಿರುವ ಬಡವರು, ಬುಡಕಟ್ಟು ಜನಾಂಗ, ಮಹಿಳೆಯರು ಮತ್ತು ಯುವಕರ ಅಭಿವೃದ್ಧಿ ಕೇಂದ್ರ ಸರಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಭಿವೃದ್ಧಿಗಾಗಿ ಕೇಂದ್ರ ಸರಕಾರ‌ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಈ ವರ್ಷ ಝಾರ್ಖಂಡ್‌ಗೆ 7,000 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಈ ಹಿಂದಿನ 10 ವರ್ಷಗಳ ಬಜೆಟ್‌ಗೆ ಹೋಲಿಸಿದರೆ ಇದರ ಪ್ರಮಾಣ ಶೇ.16ರಷ್ಟು ಹೆಚ್ಚಿದೆ. ರೈಲ್ವೇ ವಿದ್ಯುದೀಕರಣ ಯೋಜನೆಯಲ್ಲಿ ಝಾರ್ಖಂ ಡನ್ನು ಸಹ ಸೇರ್ಪಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.