Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ
ನಮ್ಮ ಸರಕಾರ ಹೊಸ ನಾಯಕತ್ವವನ್ನು ಸಿದ್ಧಮಾಡಿದೆ...
Team Udayavani, Sep 14, 2024, 7:30 PM IST
ದೋಡಾ : ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರವಾದ ಕೊನೆಯುಸಿರೆಳೆಯುತ್ತಿದೆ. ಈ ಸುಂದರ ಪ್ರದೇಶವನ್ನು ನಾಶಪಡಿಸಿದ ರಾಜವಂಶದ ರಾಜಕೀಯವನ್ನು ಎದುರಿಸಲು ನಮ್ಮ ಸರಕಾರ ಹೊಸ ನಾಯಕತ್ವವನ್ನು ಸಿದ್ಧಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಪರ ದೋಡಾ ಜಿಲ್ಲೆಯಲ್ಲಿ ಚುನಾವಣ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾವು ಮತ್ತು ನೀವು ಒಟ್ಟಾಗಿ ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಸುರಕ್ಷಿತ ಮತ್ತು ಸಮೃದ್ಧ ಭಾಗವಾಗಿ ಮಾಡುತ್ತೇವೆ” ಎಂದರು.
ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನಡೆಸಿದ ಮೊದಲ ಚುನಾವಣ ರ್ಯಾಲಿ ಇದಾಗಿದೆ.
“ಸ್ವಾತಂತ್ರ್ಯದ ನಂತರ, ಜಮ್ಮು ಮತ್ತು ಕಾಶ್ಮೀರವು ವಿದೇಶಿ ಶಕ್ತಿಗಳ ಗುರಿಯಾಯಿತು, ರಾಜವಂಶದ ರಾಜಕೀಯವು ಈ ಸುಂದರ ಪ್ರದೇಶವನ್ನು ಒಳಗಿನಿಂದ ಟೊಳ್ಳಾಗಿಸಿತು. ರಾಜಕೀಯ ರಾಜವಂಶಗಳು ತಮ್ಮ ಮಕ್ಕಳನ್ನು ಮುಂದಿಟ್ಟುಕೊಂಡು ಹೊಸ ನಾಯಕತ್ವ ಬೆಳೆಯಲು ಬಿಡಲಿಲ್ಲ. ನಾವು 2014 ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ, ಯುವ ನಾಯಕತ್ವವನ್ನು ಕೆತ್ತಲು ನಮ್ಮ ಸರಕಾರವು ಗಮನಹರಿಸಿದೆ” ಎಂದರು.
”ರೈಲ್ವೆ ಜಾಲದ ಮೂಲಕ ಜಮ್ಮು ಮತ್ತು ಕಾಶ್ಮೀರದ ಲಿಂಕ್ ಮಾಡದ ಪ್ರದೇಶಗಳನ್ನು ಸಂಪರ್ಕಿಸಿ, ಶೀಘ್ರದಲ್ಲೇ ರೈಲುಗಳು ಕಾಶ್ಮೀರ ಕಣಿವೆಯನ್ನು ತಲುಪುತ್ತವೆ ಎಂದು ಘೋಷಿಸಿದರು. ಶ್ರೀನಗರ ಮತ್ತು ರಾಂಬನ್ ನಡುವಿನ ರೈಲು ಮಾರ್ಗದ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಾಯೋಗಿಕ ಓಡಾಟ ಆರಂಭವಾಗಿದೆ.ಶೀಘ್ರದಲ್ಲೇ, ರಾಂಬನ್, ದೋಡಾ, ಕಿಶ್ತ್ವಾರ್ ಮತ್ತು ಕಾಶ್ಮೀರದ ಜನರು ರೈಲಿನಲ್ಲಿ ನೇರವಾಗಿ ದೆಹಲಿಗೆ ಪ್ರಯಾಣಿಸಲು ಸಾಧ್ಯವಾಗುತ್ತದೆ. ನಿಮ್ಮ ಕನಸನ್ನು ನನಸು ಮಾಡುತ್ತೇನೆ” ಎಂದು ಪ್ರಧಾನಿ ಹೇಳಿದರು.
Thank you Doda for the warmth and support! pic.twitter.com/lfv0Bmr2Lp
— Narendra Modi (@narendramodi) September 14, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.