‘ವೆಲ್ ಸೆಡ್ ಡಾಕ್ಟರ್’; ದೆಹಲಿ ವೈದ್ಯರ ಕಾಳಜಿಗೆ ಪ್ರಧಾನಿ ಮೋದಿ ಪ್ರಶಂಸೆ


Team Udayavani, Mar 19, 2020, 7:00 PM IST

Covid-Doctor

ನವದೆಹಲಿ: ಮಹಾಮಾರಿ ಕೋವಿಡ್ 19 ವೈರಸ್ ವಿಶ್ವದೆಲ್ಲೆಡೆ ಮರಣ ಮೃದಂಗ ಬಾರಿಸಿರುವಂತೆ ಭಾರತದಲ್ಲಿಯೂ ಈ ವೈರಸ್ ನ ಹಾವಳಿ ಸರ್ವವ್ಯಾಪಿಯಾಗುವ ಲಕ್ಷಣ ಕಂಡುಬರುತ್ತಿದೆ.

ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವೈರಸ್ ವ್ಯಾಪಿಸದಂತೆ ತಡೆಯುವಲ್ಲಿ ಜನಸಾಮಾನ್ಯರ ಪಾತ್ರ ಪ್ರಮುಖವಾದುದಾಗಿದೆ. ಈ ನಿಟ್ಟಿನಲ್ಲಿ ಸರಕಾರವೂ ಸೇರಿದಂತೆ ಹಲವಾರು ಸಂಘಟನೆಗಳು ಮತ್ತು ಸೆಲೆಬ್ರಿಟಿಗಳು ದೇಶದ ಜನರಿಗೆ ಆದಷ್ಟು ಮನೆಬಿಟ್ಟು ಹೊರಬರದಂತೆ ಸಂದೇಶಗಳನ್ನು ರವಾನಿಸುತ್ತಿದ್ದಾರೆ.

ದೆಹಲಿಯ ವೈದ್ಯರೊಬ್ಬರು ಕೋವಿಡ್ 19 ವೈರಸ್ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಪ್ರದರ್ಶಿಸಿದ್ದ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿತ್ತು.

ಕೋವಿಡ್ 19 ಪೀಡಿತರ ಆರೈಕೆಗಾಗಿ ನಿಯೋಜನೆಗೊಂಡಿರುವ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಅಮರಿಂದರ್ ಸಿಂಗ್ ಮಾಲ್ಹಿ ಎಂಬವರು ದೇಶದ ಜನರಿಗೆ ಮನವಿ ಮಾಡುತ್ತಾ, ‘ನಾನು ನಿಮಗಾಗಿ ಕರ್ತವ್ಯದಲ್ಲಿದ್ದೇನೆ, ನೀವು ನಮಗಾಗಿ ಮನೆಯಲ್ಲೇ ಇರಿ’ (I Stayed at work for you’ ‘You stay at home for us’) ಎಂಬ ಬರಹವಿದ್ದ ಪೋಸ್ಟರ್ ಹಿಡಿದಿದ್ದ ಫೊಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು.


ವೈದ್ಯರ ಈ ಕಾಳಜಿ ಪೋಸ್ಟರ್ ಗೆ ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಟ್ವೀಟ್ ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು ‘ವೆಲ್ ಸೆಡ್ ಡಾಕ್ಟರ್’ ಎಂದು ಪ್ರತಿಕ್ರಿಯಿಸಿದ್ದು, ಇದೇ ಸಂದರ್ಭದಲ್ಲಿ ಈ ಮಾರಕ ವೈರಸ್ ವಿರುದ್ಧ ಹೋರಾಡಲು ಜಗತ್ತಿನಾದ್ಯಂತ ಶ್ರಮಿಸುತ್ತಿರುವ ವೈದ್ಯ ಸಮೂಹ ಸೇರಿದಂತೆ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಇವರೆಲ್ಲರ ಶ್ರಮವನ್ನು ಬಣ್ಣಸಲು ಪದಗಳೇ ಇಲ್ಲ ಎಂದು ಅವರು ವಿಶ್ವ ಸಮುದಾಯ ಆರೋಗ್ಯ ಸಿಬ್ಬಂದಿಗಳ ಶ್ರಮವನ್ನು ಕೊಂಡಾಡಿದ್ದಾರೆ.

ಡಾ. ಅಮರಿಂದರ್ ಸಿಂಗ್ ಅವರ ಈ ಟ್ವಿಟ್ಟರ್ ಪೋಸ್ಟ್ ಗೆ ಇದುವರೆಗೆ 71 ಸಾವಿರ ಲೈಕ್ ಗಳು ಸಿಕ್ಕಿದ್ದು 16,5400 ಸಲ ಇದು ರಿಟ್ವೀಟ್ ಆಗಲ್ಪಟ್ಟಿದೆ. ಬ್ರಿಟಿಷ್ ವೈಲ್ಡ್ ಲೈಫ್ ಸಾಹಸಿ ಬೇರ್ ಗ್ರಿಲ್ ಸಹಿತ ವಿಶ್ವದ ಹಲವರು ಈ ಪೋಸ್ಟ್ ಗೆ ತಮ್ಮ ಕಮೆಂಟ್ ಗಳನ್ನು ಹಾಕಿರುವುದು ವಿಶೇಷವಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.