![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 23, 2018, 3:47 PM IST
ಹೊಸದಿಲ್ಲಿ: ಆಯುಷ್ಮಾನ್ ಭಾರತ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಚಾಲನೆ ನೀಡಿದ್ದಾರೆ.
ಝಾರ್ಖಂಡ್ನ ರಾಂಚಿಯಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ ಅವರು ‘ಇದು ಕಡುಬಡವರಿಗೂ ಉಪಯೋಗವಾಗುವ ಯೋಜನೆ’ ಎಂದಿದ್ದಾರೆ.
‘ಇಷ್ಟು ದೊಡ್ಡ ಮಟ್ಟದ ಆರೋಗ್ಯ ಯೋಜನೆ ವಿಶ್ವದ ಬೇರೆ ಯಾವುದೇ ದೇಶದಲ್ಲಿ ಕಾಣಲು ಅಸಾಧ್ಯ’ ಎಂದರು.
ಇದೇ ವೇಳೆ ಕಾಂಗ್ರೆಸ್ಗೆ ಟಾಂಗ್ ನೀಡಿದ ಪ್ರಧಾನಿ ಮೋದಿ ಗರೀಬಿ ಹಠಾವೋ ಘೋಷಣೆ ಕೂಗಿದವರು ದೇಶದ ಬಡವರಿಗಾಗಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
13,000 ಆಸ್ಪತ್ರೆಗಳಲ್ಲಿ ಈ ಯೋಜನೆಯ ಫಲಾನುಭವವನ್ನು ಪಡೆಯಬಹುದಾಗಿದೆ.
ಈ ಯೋಜನೆ ಮೂಲಕ ದೇಶದ 50 ಕೋಟಿ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಗುರಿ ಇದೆ. ಅಲ್ಲದೆ ಪ್ರತೀ ಕುಟುಂಬಕ್ಕೂ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಸಿಗಲಿದೆ. ಯೋಜನೆಗಾಗಿ ಪ್ರತಿ ಕುಟುಂಬಕ್ಕೆ ವಾರ್ಷಿಕ 2 ಸಾವಿರ ರೂ. ಕಂತು ಇರಲಿದ್ದು, ಇದರಲ್ಲಿ ಕೇಂದ್ರ ಸರಕಾರ ಶೇ. 60 ಮತ್ತು ರಾಜ್ಯ ಸರಕಾರ ಶೇ. 40 ಭರಿಸಲಿವೆ.
ಕರ್ನಾಟಕ ಸಹಿತ ಸದ್ಯ 26 ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಿದ್ದು, ಉಳಿದವು ತಮ್ಮದೇ ಆರೋಗ್ಯ ಯೋಜನೆಗಳನ್ನು ಜಾರಿ ಮಾಡಿಕೊಂಡಿವೆ. ಯೋಜನೆಗೆ ಸೇರುವಂತೆ ಒಡಿಶಾ ಸರಕಾರಕ್ಕೂ ಕೇಂದ್ರ ಮನವಿ ಮಾಡಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.