![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 25, 2023, 10:47 AM IST
ನವದೆಹಲಿ: ರಾಹುಲ್ ಗಾಂಧಿ ಅವರು ಲೋಕಸಭಾ ಸಂಸದರಾಗಿ ಅನರ್ಹಗೊಂಡಿದ್ದು ಕಾಂಗ್ರೆಸ್ ಗೆ ಭಾರಿ ಹಿನ್ನಡೆಯಾಗಿದೆ. ಇದರ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಹೋರಾಟ ನಡೆಸುತ್ತಿದೆ. ದೆಹಲಿಯಲ್ಲಿ ಶುಕ್ರವಾರ ಸಂಜೆ ಈ ವಿಷಯದ ಕುರಿತು ಕಾಂಗ್ರೆಸ್ ನಾಯಕರು ತುರ್ತು ಸಭೆ ನಡೆದಿದೆ. ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ.
ಸಭೆಯಲ್ಲಿ ಉಪಸ್ಥಿತರಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿಗೆ ತಕ್ಕ ಪ್ರತ್ಯುತ್ತರವಾಗಿ ಈ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವತ್ತ ಕಾಂಗ್ರೆಸ್ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ:ಕರಾವಳಿ ಪಡೆಯಲು ಕೈ ಕಸರತ್ತು; ಹಲವು ಹೊಸಮುಖಗಳಿಗೆ ಮಣೆ ಹಾಕಿದ ಕಾಂಗ್ರೆಸ್
ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ವಿರೋಧಿಸಿ ಕಾಂಗ್ರೆಸ್ ನ ಎಲ್ಲಾ ಸಂಸದರು ಸಾಮೂಹಿಕ ರಾಜೀನಾಮೆ ನೀಡಬಹುದು ಎಂದು ಸಂಸದರೊಬ್ಬರು ಸಲಹೆ ನೀಡಿದ್ದಾರೆ. ಎಎನ್ ಐ ಉಲ್ಲೇಖಿಸಿರುವ ಮೂಲಗಳ ಪ್ರಕಾರ, ಈ ವಿಷಯದಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಸಮಿತಿಯನ್ನು ರಚಿಸುವ ಸಾಧ್ಯತೆಯಿದೆ.
ಎಐಸಿಸಿ ಕಚೇರಿಯ ತುರ್ತು ಸಭೆಯಲ್ಲಿ ಸ್ಟೀರಿಂಗ್ ಕಮಿಟಿ, ಪಿಸಿಸಿ ಮುಖ್ಯಸ್ಥರು, ಸಿಎಲ್ ಪಿ ನಾಯಕರು ಮತ್ತು ಮುಂಭಾಗದ ಸಂಘಟನೆಗಳು, ಇಲಾಖೆಗಳು ಮತ್ತು ಕೋಶಗಳ ಮುಖ್ಯಸ್ಥರು ಹಾಜರಾಗಿದ್ದರು.
ಎಪ್ರಿಲ್- ಮೇ ನಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 224 ಕ್ಷೇತ್ರಳ ಪೈಕಿ 124 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.