
ಪ್ರಾಧ್ಯಾಪಕರ ಸ್ಟಾರ್ಟಪ್! ಇದೇ ಮೊದಲ ಬಾರಿಗೆ ಕೇರಳದಿಂದ ಕ್ರಮ
Team Udayavani, Oct 22, 2017, 7:25 AM IST

ತಿರುವನಂತಪುರಂ: ಸ್ಟಾರ್ಟಪ್ ಆರಂಭಿಸುವ ಕಾಲೇಜು ಪ್ರಾಧ್ಯಾಪಕರಿಗೆ ಕೇರಳದಲ್ಲಿ ಇನ್ನು ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ನಿರಾತಂಕವಾಗಿ ರಜಾ ಪಡೆದು ಕೊಳ್ಳಲಡ್ಡಿಯಿಲ್ಲ!
ಈ ಸುದ್ದಿ ಕೇಳಿ ನೀವು ಕಾಲೇಜು ಪ್ರಾಧ್ಯಾಪ ಕರಿಂದ ಸ್ಟಾರ್ಟಪ್ ಎಂದು ಹುಬ್ಬೇರಿಸಬಹುದು. ಹೌದು, ಕೇರಳ ಸರಕಾರವೇ ಈಗ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಇಂಥದ್ದೊಂದು ಪ್ರಯೋಗಕ್ಕೆ ಮುಂದಾಗಿ, ರಜಾ ನೀಡುವಂತೆ ಮನವಿ ಮಾಡಿಕೊಂಡಿ ರುವ ಹತ್ತುಮಂದಿ ಪ್ರಾಧ್ಯಾಪಕರಿಗೆ ಇಲ್ಲಿನ ಸರಕಾರ ಅವಕಾಶ ಮಾಡಿಕೊಟ್ಟಿದೆ.
ಉದ್ಯಮ ಶೀಲತೆ ಹಾಗೂ ಪಠ್ಯಕ್ರಮಕ್ಕೆ ಹೊಂದಿಕೊಳ್ಳು ವಂಥ ಜ್ಞಾನಾರ್ಜನೆ ಮಾಡಿಕೊಂಡು ಬೆಳೆಯಲೊಂದು ಅವಕಾಶ ಕಲ್ಪಿಸಿರುವ ಕೇರಳ ಸರಕಾರ, ಇದರಿಂದ ಪ್ರಾಧ್ಯಾಪಕರು ಹೊಸ ಅನ್ವೇಷಣೆ ಮೂಲಕ ಉದ್ಯಮ ಕ್ಷೇತ್ರದಲ್ಲಿಯೂ ಬೆಳೆಯಬಹುದಾಗಿದೆ. ಈ ಕಾರಣಕ್ಕಾಗಿಯೇ ಈ ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಹೇಳಿಕೊಂಡಿದೆ.
ಶೈಕ್ಷಣಿಕ ಕ್ಷೇತ್ರಕ್ಕೂ ಇದರಿಂದ ಸಾಕಷ್ಟು ನೆರವಾಗಲಿದೆ ಎಂದು ಹೇಳಿರುವ ಕೇರಳ ಸರಕಾರ, ಸ್ಟಾರ್ಟಪ್ ಮಿಷನ್ (ಕೆಎಸ್ಯುಎಂ) ಯೋಜನೆಯ ಅಡಿಯಲ್ಲಿ ಇದಕ್ಕೆ ಅವಕಾಶ ಕಲ್ಪಿಸಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಾಜಿ ಗೋಪಿನಾಥ್ ತಿಳಿಸಿದ್ದಾರೆ. ಭಾರತದಲ್ಲಿಯೇ ಮೊದಲ ಬಾರಿಗೆ ಕೇರಳ ಸರಕಾರ ಇಂಥದ್ದೊಂದು ಯೋಜನೆಯಡಿ ಪ್ರಾಧ್ಯಾಪಕರಿಗೂ ಅವಕಾಶ ನೀಡಿದೆ ಎಂದು ಹೇಳಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.