Burqa: ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿಷೇಧ; ಭುಗಿಲೆದ್ದ ಆಕ್ರೋಶ


Team Udayavani, Aug 3, 2023, 10:08 AM IST

Burqa: ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿಷೇಧ; ಭುಗಿಲೆದ್ದ ಆಕ್ರೋಶ

ಮುಂಬಯಿ: ಕಾಲೇಜಿನ ನೂತನ ಸಮವಸ್ತ್ರ ನಿಯಮದಿಂದಾಗಿ ಬುರ್ಖಾ ಧರಿಸಿಕೊಂಡು ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿಗೆ ಪ್ರವೇಶ ನಿಷೇಧಿಸಿದ ಘಟನೆ ಮುಂಬಯಿಯ ಚೆಂಬೂರಿನ ಕಾಲೇಜಿನಲ್ಲಿ ನಡೆದಿರುವುದು ವರದಿಯಾಗಿದೆ.

ಚೆಂಬೂರಿನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಹೊಸ ಸಮವಸ್ತ್ರ ನಿಯಮದ ಪ್ರಕಾರ ಬುರ್ಖಾ, ಹಿಜಾಬ್, ಶಿರೋವಸ್ತ್ರಗಳು ಮತ್ತು ಸ್ಟಿಕ್ಕರ್‌ಗಳನ್ನು ಹಾಕಿಕೊಂಡು ಬರುವಂತಿಲ್ಲ. ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಿಕೊಂಡು ಬಂದಿರುವುದಕ್ಕೆ ಅವರನ್ನು ಕಾಲೇಜಿನ ಗೇಟ್‌ ನಲ್ಲೇ ತಡೆದು ನಿಲ್ಲಿಸಲಾಗಿದೆ.

ಈ ಮಾಹಿತಿ ವಿದ್ಯಾರ್ಥಿನಿಯರ ಪೋಷಕರಿಗೂ ತಲುಪಿದ್ದು, ಕಾಲೇಜಿನ ಮುಂದೆ ಪ್ರತಿಭಟನೆಯನ್ನು ಆರಂಭಿಸಿದ್ದಾರೆ. ವಿದ್ಯಾರ್ಥಿನಿಯರು ಹಾಗೂ ಪೋಷಕರ ಪ್ರತಿಭಟನೆ ಜೋರಾಗುತ್ತಿದ್ದಂತೆ, ಕಾಲೇಜಿನ ಪ್ರಾಂಶುಪಾಲರು ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

“ಈ ವರ್ಷ ನೂತನವಾಗಿ ಕಾಲೇಜಿನಲ್ಲಿ ಸಮವಸ್ತ್ರ ನಿಯಮವನ್ನು ಜಾರಿಗೆ ತಂದಿದ್ದೇವೆ. ಈ ಬಗ್ಗೆ ಮೇ.1 ರಂದು ಪೋಷಕರ ಜೊತೆ ಸಭೆ ನಡೆಸಿ ಅವರ ಬಳಿ ಬುರ್ಖಾ, ಹಿಜಾಬ್, ಶಿರೋವಸ್ತ್ರಗಳು ಮತ್ತು ಸ್ಟಿಕ್ಕರ್‌ಗಳನ್ನು ಕಾಲೇಜಿನ ಒಳಗೆ ನಿಷೇಧಿಸುವ ಕುರಿತು ಚರ್ಚೆ ನಡೆಸಿಯೇ ಇದನ್ನು ಜಾರಿಗೆ ತಂದಿದ್ದೇವೆ. ಆಗ ಎಲ್ಲದಕ್ಕೂ ಒಪ್ಪಿಗೆ ಕೊಟ್ಟಿದ್ದಾರೆ. ಈಗ ಅದೇ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಡ್ರೆಸ್ ಕೋಡ್ ನ್ನು ವಿರೋಧಿಸುವ ಯಾವುದೇ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟು ಹೋಗಲು ಅವಕಾಶವಿದೆ” ಎಂದು ಕಾಲೇಜಿನ ಪ್ರಾಂಶುಪಾಲೆ ವಿದ್ಯಾ ಗೌರಿ ಲೇಲೆ ಹೇಳಿದ್ದಾರೆ.

ಪ್ರತಿಭಟನೆ ಜೋರಾಗುತ್ತಿದ್ದಂತೆ ಕಾಲೇಜಿಗೆ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇದಾದ ಬಳಿಕ ಕೆಲ ವಿದ್ಯಾರ್ಥಿನಿಯರು ತಮಗೆ ಸ್ಕಾರ್ಫ್‌ಗಳನ್ನು ಧರಿಸಲು ಅನುಮತಿಯನ್ನು ನೀಡಿಯೆಂದು ಮನವಿ ಮಾಡಿದ್ದಾರೆ.

ಸಂಜೆಯ ವೇಳೆಗೆ ಕಾಲೇಜು ಹೇಳಿಕೆ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿನಿಯರು ಬುರ್ಖಾ, ಹಿಜಾಬ್ ಅಥವಾ ಸ್ಕಾರ್ಫ್ ಧರಿಸಿಕೊಂಡು ಕಾಲೇಜಿನ ಒಳಗೆ ಬರಬಹುದು,ಆದರೆ ಅದನ್ನು ತೆಗೆದು ಕ್ಲಾಸ್‌ ರೂಮ್‌ ನೊಳಗೆ ಹೋಗಬೇಕು. ಸಂಜೆ ಮತ್ತೆ ಧರಿಸಿಕೊಂಡು ಹೋಗಬಹುದೆಂದು ಹೇಳಿಕೆ ಬಿಡುಗಡೆ ಮಾಡಿದೆ.

ಸದ್ಯ ಕಾಲೇಜಿನ ನಿಯಮವನ್ನು ವಿರೋಧಿಸಿ ಮಾಡಿರುವ ಪ್ರತಿಭಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

 

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.