ಸಂಸತ್‌ ಆವರಣದಲ್ಲಿ ಧರಣಿ, ನಿರಶನ ಬಂದ್‌! ಸಂಸದರಿಗೆ ರಾಜ್ಯಸಭೆ ಕಾರ್ಯಾಲಯದಿಂದ ಸುತ್ತೋಲೆ


Team Udayavani, Jul 16, 2022, 7:20 AM IST

thumb-2

ನವದೆಹಲಿ:“ಇನ್ನು ಮುಂದೆ ಸಂಸತ್‌ ಭವನದ ಆವರಣದಲ್ಲಿ ಯಾವುದೇ ಪ್ರತಿಭಟನೆ, ಧರಣಿ, ನಿರಶನ ಅಥವಾ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.’ಇಂಥದ್ದೊಂದು ಹೊಸ ಸುತ್ತೋಲೆಯನ್ನು ರಾಜ್ಯಸಭಾ ಕಾರ್ಯಾಲಯವು ಶುಕ್ರವಾರ ಹೊರಡಿಸಿದೆ.

“ಅಸಂಸದೀಯ’ ಪದಗಳ ಪಟ್ಟಿಯು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿರುವಂತೆಯೇ ಈ ಆದೇಶ ಹೊರಬಿದ್ದಿದ್ದು, ಇದು ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಇದೇ 18ರಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅದಕ್ಕೆ 3 ದಿನಗಳ ಬಾಕಿಯಿರುವಂತೆಯೇ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋದಿ ಅವರು ಈ ಸುತ್ತೋಲೆ ಹೊರಡಿಸಿದ್ದಾರೆ. “ಸಂಸತ್‌ನ ಸದಸ್ಯರು ಯಾವುದೇ ಧರಣಿ, ಪ್ರತಿಭಟನೆ, ನಿರಶನ ಅಥವಾ ಧಾರ್ಮಿಕ ಕಾರ್ಯಕ್ರಮಗಳಿಗೆ ಸಂಸತ್‌ ಭವನದ ಆವರಣವನ್ನು ಬಳಸುವಂತಿಲ್ಲ’ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ. ಈವರೆಗೆ ಸಂಸತ್‌ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಕಾಂಗ್ರೆಸ್‌, ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಬೇರೆ ಬೇರೆ ವಿಚಾರಗಳಿಗೆ ಸಂಬಂಧಿಸಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದವು.

ಕಾಂಗ್ರೆಸ್‌ ಕಿಡಿ:
ಸುತ್ತೋಲೆ ಹೊರಬೀಳುತ್ತಿದ್ದಂತೆ ಟೀಕಾಪ್ರಹಾರ ಆರಂಭವಾಗಿದೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕರಾಗಿರುವ ಜೈರಾಂ ರಮೇಶ್‌ ಅವರು ಟ್ವೀಟ್‌ ಮಾಡಿ, “ಧರಣಿ ಮಾಡುವಂತಿಲ್ಲ- ಇದು ವಿಶ್ವಗುರುವಿನ ಹೊಸ ಆದೇಶ’ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.