![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 16, 2021, 9:19 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ರಾಜ್ಪುರ ಪ್ರದೇಶದಲ್ಲಿ ಬುಧವಾರ ನಡೆದ ಎನ್ಕೌಂಟರ್ ನಲ್ಲಿ ಹತರಾದ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ಗೆ ಸೇರಿದವರು ಎಂದು ಮೂಲಗಳು ತಿಳಿಸಿವೆ.
ಉಗ್ರನನ್ನು ಶೋಪಿಯಾನ್ ಜಿಲ್ಲೆಯ ಹೆಫ್-ಶ್ರೀಮಲ್ ನಿವಾಸಿ ಫಿರೋಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಆತ 2017 ರಲ್ಲಿ ಭಯೋತ್ಪಾದಕ ಸಂಸ್ಥೆಗೆ ಸೇರಿದ್ದನು ಮತ್ತು ಈ ಪ್ರದೇಶದಲ್ಲಿ ಅನೇಕ ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾನೆ.
ಮಂಗಳವಾರ ಮತ್ತು ಬುಧವಾರದ ನಡುವಿನ ಮಧ್ಯರಾತ್ರಿ ಸುಮಾರು 12 ಗಂಟೆಗೆ ಪುಲ್ವಾಮಾ ಜಿಲ್ಲೆಯ ಉಸ್ಗಾಮ್ ಪತ್ರಿಯಲ್ಲಿ ಎನ್ಕೌಂಟರ್ ಪ್ರಾರಂಭವಾಗಿತ್ತು.
ಇದನ್ನೂ ಓದಿ:ಪಾಕ್ ಸೈನಿಕರ ಹೆಣಗಳ ರಾಶಿ ಮೇಲೆ ನಡೆದಿದ್ದೆವು!
ಡಿಸೆಂಬರ್ 12 ರಂದು, ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕನನ್ನು ಕೊಲ್ಲಲಾಗಿತ್ತು. ಹತ್ಯೆಗೀಡಾದ ಭಯೋತ್ಪಾದಕನನ್ನು ಬರಗಾಂ ನಿವಾಸಿ ಸಮೀರ್ ಅಹ್ಮದ್ ತಂತ್ರಾಯ್ ಎಂದು ಗುರುತಿಸಲಾಗಿದೆ.
ತಂತ್ರಾಯ್ ಈ ಹಿಂದೆ ಭಯೋತ್ಪಾದಕರ ಸಹಚರರಾಗಿದ್ದು, ಈ ಪ್ರದೇಶದಲ್ಲಿ ಸಕ್ರಿಯ ಭಯೋತ್ಪಾದಕರಿಗೆ ವ್ಯವಸ್ಥಾಪನಾ ಬೆಂಬಲವನ್ನು ಒದಗಿಸುವಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.