ಸ್ಪೀಕರ್‌ ಸ್ಥಾನಕ್ಕೆ ಪುರಂದೇಶ್ವರಿ? ಟಿಡಿಪಿ, ಜೆಡಿಯುನಿಂದಲೂ ಈ ಹುದ್ದೆ ಮೇಲೆ ಕಣ್ಣು


Team Udayavani, Jun 11, 2024, 7:10 AM IST

ಸ್ಪೀಕರ್‌ ಸ್ಥಾನಕ್ಕೆ ಪುರಂದೇಶ್ವರಿ? ಟಿಡಿಪಿ, ಜೆಡಿಯುನಿಂದಲೂ ಈ ಹುದ್ದೆ ಮೇಲೆ ಕಣ್ಣು

ಹೊಸದಿಲ್ಲಿ: ಕೇಂದ್ರ ಸಂಪುಟ ಸಚಿವರ ಪ್ರಮಾಣವಚನ ಸ್ವೀಕಾರದ ಬೆನ್ನಲ್ಲೇ 18ನೇ ಲೋಕಸಭೆಯ ಸ್ಪೀಕರ್‌ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ.

ಎನ್‌ಡಿಎಯ ಪ್ರಮುಖ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಕೂಡ ಈ ಹುದ್ದೆಯ ಮೇಲೆ ಕಣ್ಣಿರಿಸಿವೆ. ಆದರೆ ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷೆ ಡಿ. ಪುರಂದೇಶ್ವರಿ ಈ ಸ್ಥಾನವನ್ನು ಅಲಂಕರಿಸುವ ಸಾಧ್ಯತೆಗಳು ದಟ್ಟವಾಗಿವೆ.

ಆಂಧ್ರದ ಮಾಜಿ ಸಿಎಂ ಎನ್‌ಟಿಆರ್‌ ಅವರ ಪುತ್ರಿಯೂ ಆಗಿರುವ ಪುರಂದೇಶ್ವರಿ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ಸಂಬಂಧಿಯೂ ಹೌದು. ಆಂಧ್ರದಲ್ಲಿ ಟಿಡಿಪಿ-ಜನಸೇನಾ-ಬಿಜೆಪಿ ಮೈತ್ರಿ ಸಾಧಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ರಾಜಮಂಡ್ರಿ ಕ್ಷೇತ್ರದಿಂದ ಆಯ್ಕೆಯಾಗಿರುವ ಅವರು ಈ ಹಿಂದೆ 2004ರಿಂದ 2014ರ ವರೆಗೆ ಕಾಂಗ್ರೆಸ್‌ನಲ್ಲಿದ್ದರು. ಬಳಿಕ ಬಿಜೆಪಿ ಸೇರಿದ್ದರು.

ಪುರಂದೇಶ್ವರಿ ಆಯ್ಕೆಯ ಮೂಲಕ ಟಿಡಿಪಿಯನ್ನು ಸುಮ್ಮನಾಗಿಸುವ ತಂತ್ರವನ್ನು ಬಿಜೆಪಿ ಹೆಣೆದಿದೆ ಎಂದು ವಿಶ್ಲೇಷಿಸ ಲಾಗುತ್ತಿದೆ. ಪುರಂದೇಶ್ವರಿ ಲೋಕಸಭಾ ಸ್ಪೀಕರ್‌ ಆದರೆ ಈ ಹುದ್ದೆಯನ್ನು ಪಡೆದ ಆಂಧ್ರ ಪ್ರದೇಶದ ಎರಡನೇ ಸಂಸದೆ ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ. ಆದರೆ ಇದ್ಯಾವುದೂ ಖಚಿತ ವಾಗಿಲ್ಲ.

ಹಾಗಾಗಿ ಸ್ಪೀಕರ್‌ ಯಾರು ಎಂಬ ಕುತೂಹಲ ಮುಂದುವರಿದಿದೆ. ಟಿಡಿಪಿ ಮತ್ತು ಜೆಡಿಯು ಎರಡೂ ಈ ಹುದ್ದೆಯ ಮೇಲೆ ಕಣ್ಣಿಟ್ಟಿರುವುದರಿಂದ ಹೆಚ್ಚಿನ ಮಹತ್ವ ಬಂದಿದೆ.

ಟಿಡಿಪಿಯ ರಾಮಮೋಹನ್‌ ನಾಯ್ಡು, ಜಿಎಂಸಿ ಬಾಲಯೋಗಿ ಅವರ ಪುತ್ರ ಜಿ.ಎಂ. ಹರೀಶ್‌ ಮಧುರ್‌ ಹೆಸರುಗಳೂ ಸ್ಪೀಕರ್‌ ಸ್ಥಾನಕ್ಕೆ ಕೇಳಿಬರುತ್ತಿವೆ.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.