ಭಾರತ್ ಜೋಡೊ ಯಾತ್ರೆಯಲ್ಲಿ ರಘುರಾಮ್ ರಾಜನ್; ಬಿಜೆಪಿ ಕೆಂಡ
Team Udayavani, Dec 14, 2022, 8:23 PM IST
ಜೈಪುರ: ಆರ್ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಕಾಂಗ್ರೆಸ್ನ ಭಾರತ್ ಜೋಡೊ ಯಾತ್ರೆಯಲ್ಲಿ ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ. ಬುಧವಾರ ರಾಜಸ್ಥಾನದ ಸವಾಯಿ ಮಾದೋಪುರದಿಂದ ಹೊರಟ ಪಾದಯಾತ್ರೆಯಲ್ಲಿ ರಘುರಾಮ್ ರಾಜನ್ ಜತೆಯಾದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಆರಂಭವಾಗಿದೆ.
“ದೇಶವನ್ನು ಒಗ್ಗೂಡಿಸುವ ಯಾತ್ರೆಯ ಪರವಾಗಿ ನಿಲ್ಲುವವರ ಸಂಖ್ಯೆ ಏರಿಕೆಯಾಗುತ್ತಿದೆ. ದ್ವೇಷ ಹರಡುವವರ ವಿರುದ್ಧದ ನಮ್ಮ ಈ ಹೋರಾಟದಲ್ಲಿ ಯಶಸ್ಸು ಗಳಿಸುತ್ತೇವೆ,’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 2013ರ ಸೆ.4ರಿಂದ 2016ರ ಸೆ.4ರವರೆಗೆ ಆರ್ಬಿಐ ಗವರ್ನರ್ ಆಗಿ ರಘುರಾಮ್ ರಾಜನ್ ಕರ್ತವ್ಯ ನಿರ್ವಹಿಸಿದ್ದರು.
ರಾಜನ್ ಮುಂದಿನ ಮನಮೋಹನ್ ಸಿಂಗ್
“ಕಾಂಗ್ರೆಸ್ನಿಂದ ನೇಮಕವಾದ ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರುವ ಬಗ್ಗೆ ಯಾವುದೇ ಅಶ್ಚರ್ಯವಿಲ್ಲ. ಅವರು ತಮ್ಮನ್ನು ತಾವೇ ಮುಂದಿನ ಮನಮೋಹನ್ ಸಿಂಗ್ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಭಾರತದ ಆರ್ಥಿಕತೆಯ ಬಗ್ಗೆ ಅವರ ವ್ಯಾಖ್ಯಾನವನ್ನು ತಿರಸ್ಕರಿಸಬೇಕು. ಇದು ಅವಕಾಶವಾದದಿಂದ ಕೂಡಿದ ತಿರುಚಿದ ಹೇಳಿಕೆಯಾಗಿದೆ,’ ಎಂದು ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.