ನ್ಯಾಶನಲ್ ಹೆರಾಲ್ಡ್ ಪ್ರಕರಣ: ಸತತ ಮೂರನೇ ದಿನವೂ ರಾಹುಲ್ ಗಾಂಧಿ ವಿಚಾರಣೆ
Team Udayavani, Jun 15, 2022, 11:41 PM IST
ಹೊಸದಿಲ್ಲಿ: ನ್ಯಾಶನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ಇ.ಡಿ. ಮೂರನೇ ದಿನವಾದ ಬುಧವಾರವೂ ಮುಂದುವರಿಸಿದೆ.
ಈ ಪ್ರಕರಣದಲ್ಲಿ ವೈಯಕ್ತಿಕವಾಗಿ ರಾಹುಲ್ ಗಾಂಧಿ ಭಾಗಿದಾರಿಕೆ ಏನು ಎಂಬ ಬಗ್ಗೆ ಕೇಂದ್ರ ತನಿಖಾ ಸಂಸ್ಥೆ ಮಾಹಿತಿ ಪಡೆದುಕೊಂಡಿದೆ. ಜತೆಗೆ ಅದರ ಮಾಲಕ ಸಂಸ್ಥೆಯಾಗಿದ್ದ ಯಂಗ್ ಇಂಡಿಯನ್ದ ಬಗ್ಗೆಯೂ ವಿವರಗಳನ್ನು ಕೇಳಿದ್ದು, ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೋ ಚಿತ್ರೀಕರಿಸಿಕೊಳ್ಳಲಾಗಿದೆ.
ಸಹೋದರಿ ಪ್ರಿಯಾಂಕಾ ಜತೆಗೆ ಪೂರ್ವಾಹ್ನ 11.35ಕ್ಕೆ ಆಗಮಿಸಿದ್ದ ರಾಹುಲ್, ಒಂದೇ ಒಂದು ರೂಪಾಯಿಯನ್ನೂ ಯಂಗ್ ಇಂಡಿಯನ್ನಿಂದ ತೆಗೆದುಕೊಂಡಿಲ್ಲ ಎಂದು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ವಿಚಾರಣೆ ವೇಳೆ ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್ಗೆ ಸಂಬಂಧಿಸಿದ 800 ಕೋಟಿ ರೂ. ಮೌಲ್ಯದ ಆಸ್ತಿ ಬಗ್ಗೆ ವಿವರ ನೀಡುವಂತೆ ಹಾಗೂ ಲಾಭ ರಹಿತ ಕಂಪೆನಿಯಾಗಿದ್ದ ಯಂಗ್ ಇಂಡಿಯನ್ ತನ್ನ ವ್ಯಾಪ್ತಿಯಲ್ಲಿದ್ದ ಜಮೀನು, ಕಟ್ಟಡಗಳನ್ನು ಬಾಡಿಗೆಗೆ ನೀಡಿದ್ದ ಬಗ್ಗೆಯೂ ಪ್ರಶ್ನಿಸಲಾಗಿದೆ ಎನ್ನಲಾಗಿದೆ.
ಈ ಮಧ್ಯೆ, ಬುಧವಾರವೂ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿದೆ. ದಿಲ್ಲಿಯಲ್ಲಿ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮನ್ನು ಎಐಸಿಸಿ ಪ್ರಧಾನ ಕಚೇರಿಗೆ ಹೋಗಲೂ ಬಿಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಿಲ್ಲಿ ಪೊಲೀಸರು ಕಾಂಗ್ರೆಸ್ನ ಪ್ರಧಾನ ಕಚೇರಿಗೆ ನುಗ್ಗಿದ್ದಾರೆ ಎಂದಿರುವ ವೀಡಿಯೋವನ್ನು ಸಂಸದ ಕಾರ್ತಿ ಚಿದಂಬರಂ ಅವರು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ
Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್ಲೈನ್ ನೋಂದಣಿ ಕಡ್ಡಾಯ
Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್ ಕಾಲಿಗೆ ಗುಂಡೇಟು
Darshan; ಡಿ ಬಾಸ್ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್ ತೂಗುದೀಪ
ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು
Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ
Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.