Rail; ಹಳಿಯಲ್ಲಿ 9 ಕಬ್ಬಿಣದ ರಾಡ್: ಹಳಿ ತಪ್ಪಿಸುವ 19ನೇ ಯತ್ನ!
Team Udayavani, Sep 24, 2024, 6:18 AM IST
ಚಂಡೀಗಢ: ರೈಲು ಹಳಿ ತಪ್ಪಿಸುವ ದುಷ್ಕರ್ಮಿಗಳ ಮತ್ತೂಂದು ಸಂಚು ವಿಫಲವಾಗಿದೆ. ಪಂಜಾಬ್ನ ಭಟಿಂಡಾ ಜಿಲ್ಲೆಯ ರೈಲ್ವೇ ಹಳಿಯ ಮೇಲೆ ರವಿವಾರ 9 ಕಬ್ಬಿಣದ ರಾಡ್ಗಳು ಪತ್ತೆಯಾಗಿದ್ದು, ಪರಿಣಾಮ ಕೆಲ ವು ಸಮಯದವರೆಗೆ ರೈಲ್ವೇ ಸಂಚಾರಕ್ಕೆ ಅಡಚಣೆಯುಂಟಾಗಿತ್ತು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕಳೆದ 4 ತಿಂಗಳಲ್ಲಿ ರೈಲುಗಳನ್ನು ಹಳಿ ತಪ್ಪಿಸಲು ದುಷ್ಕರ್ಮಿಗಳು ನಡೆಸಿರುವ 19ನೇ ಪ್ರಯತ್ನ ಇದಾಗಿದೆ!
ಭಟಿಂಡಾದಿಂದ ಬಿಡಬ್ಲ್ಯುಎಲ್ ಕೋರಿಗೆ ಸಂಚರಿಸುತ್ತಿದ್ದ ಸರಕು ಸಾಗಣೆ ರೈಲನ್ನು ಹಳಿ ತಪ್ಪಿಸಲು ಈ ಸಂಚು ರೂಪಿಸಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಅದೇ ರೈಲಿನ ಚಾಲಕ ರಾಡ್ಗಳನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅವುಗಳನ್ನು ತೆರವು ಗೊಳಿಸು ವವರೆಗೂ ಅಂದರೆ ಸುಮಾರು 40 ನಿಮಿಷಗಳ ಕಾಲ ರೈಲುಗಳ ಸಂಚಾರಕ್ಕೆ ಅಡೆತಡೆಯಾಗಿದೆ.
ಈ ಘಟನೆ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!
Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ
Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ
Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು
Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.