ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ಮಳೆ: ಪಾಲ್ಘರ್, ನಾಸಿಕ್‌ನಲ್ಲಿ ಭೂಕುಸಿತ, ರೆಡ್‌ ಅಲರ್ಟ್‌

ಗುಜರಾತ್‌, ನವದೆಹಲಿ, ತೆಲಂಗಾಣ, ಹಿ. ಪ್ರದೇಶದಲ್ಲೂ ಭಾರಿ ಮಳೆ

Team Udayavani, Jul 13, 2022, 10:31 PM IST

ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ಮಳೆ: ಪಾಲ್ಗಾರ್‌, ನಾಸಿಕ್‌ನಲ್ಲಿ ಭೂಕುಸಿತ, ರೆಡ್‌ ಅಲರ್ಟ್‌

ನವದೆಹಲಿ/ಮುಂಬೈ: ರಾಷ್ಟ್ರರಾಜಧಾನಿ ನವದೆಹಲಿ, ಮಹಾರಾಷ್ಟ್ರ, ಗುಜರಾತ್‌, ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ.

ಮಂಗಳವಾರ-ಬುಧವಾರ ನಡುವಿನ 24 ಗಂಟೆಗಳಲ್ಲಿ ಈ ರಾಜ್ಯಗಳಲ್ಲಿ 18 ಮಂದಿ ಮಳೆ ಸಂಬಂಧಿತ ಅವಗಢಗಳಲ್ಲಿ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್, ನಾಸಿಕ್‌ಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಅತ್ತ, ಗುಜರಾತ್‌, ನವದೆಹಲಿ, ತೆಲಂಗಾಣ, ಹಿಮಾಚಲ ಪ್ರದೇಶಗಳಲ್ಲೂ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಪಾಲ್ಗಾರ್‌, ನಾಸಿಕ್‌ಗೆ “ರೆಡ್‌ ಅಲರ್ಟ್‌’
ಮಹಾರಾಷ್ಟ್ರದ ಪಾಲ್ಗಾರ್‌, ನಾಸಿಕ್‌ಗಳಲ್ಲಿ ಮತ್ತಷ್ಟು ಮಳೆ ಸುರಿಯುವ ಸಾಧ್ಯತೆಗಳಿವೆ ಎಂದಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ.

ಜೊತೆಗೆ, ಮುಂದಿನ ಮೂರು ನಾಲ್ಕು ದಿನಗಳವರೆಗೆ ಮುಂಬೈ, ಥಾಣೆ ಸೇರಿ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಪಾಲ್ಗಾರ್‌ ಜಿಲ್ಲೆಯ ವಾಸೈ ಎಂಬ ಕಡೆ ಸಂಭವಿಸಿದ ಭೂಕುಸಿತದಲ್ಲಿ ತಂದೆ ಮತ್ತು ಮಗಳು ಮೃತಪಟ್ಟಿದ್ದಾರೆ.

ಪುಣೆಯಲ್ಲಿ ಮುಥಾ ನದಿಯಲ್ಲಿ ನಾಲ್ವರು ಕೊಚ್ಚಿಕೊಂಡು ಹೋಗಿದ್ದಾರೆ. ನಾಸಿಕ್‌ ಜಿಲ್ಲೆಯಲ್ಲಿ ವಿವಿಧ ಘಟನೆಗಳಲ್ಲಿ ಆರು ಜನರು ನದಿ ಅಥವಾ ಮಳೆ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆಗಳು ಜರುಗಿವೆ. ಇದರೊಂದಿಗೆ, ಈ ಬಾರಿಯ ಮಳೆಯಿಂದಾಗಿ ಸಾವನ್ನಪ್ಪಿರುವವರ ಸಂಖ್ಯೆ 89ಕ್ಕೇರಿದೆ.

ಮುಂಬೈ ಹಾಗೂ ಅದರ ಸುತ್ತಲಿನ ಸ್ಥಳಗಳಲ್ಲಿ ಏಕಾಏಕಿ ಸುರಿದ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಭಾರೀ ತೊಂದರೆ ಉಂಟಾಗಿದೆ. ರೈಲು, ಬಸ್ಸುಗಳ ಸಂಚಾರಕ್ಕೂ ಅಡಚಣೆಯಾಗಿದ್ದು ಜನರು ಪರದಾಡುವಂತಾಗಿದೆ. ಗಾಡಿcರೋಲಿಯಲ್ಲಿ 24 ಗಂಟೆಗಳಲ್ಲಿ 97.1 ಮಿ.ಮೀಟರ್‌ ಮಳೆಯಾಗಿದ್ದು, ಸುಮಾರು 2000 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಜು. 16ರವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಿಂಗೋಲಿ ಜಿಲ್ಲೆಯ ಕುರುಂಡಾ ಎಂಬ ಹಳ್ಳಿಯು ಜಲಾವೃತ ವಾಗಿರುವುದರಿಂದ ನಾಲ್ಕು ದಿನಗಳಿಂದ ಊಟವಿಲ್ಲದೆ ಜನರು ಪರದಾಡುವಂಥ ಪರಿಸ್ಥಿತಿ ಬಂದೊದಗಿದೆ.

ಗುಜರಾತ್‌ನ ನವಾÕರಿಯಲ್ಲಿ ಅತಂತ್ರ ಪರಿಸ್ಥಿತಿ
ಗುಜರಾತ್‌ನ ರಂಗೂನ್‌ ನಗರ್‌,  ಭಾರೀ ಮಳೆ ಸುರಿದಿದ್ದು ಅನೇಕ ಸ್ಥಳಗಳು ಜಲಾವೃತವಾಗಿವೆ. ಇದರಿಂದಾಗಿ, ಸಾವಿರಾರು ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಸ್ಥಳಕ್ಕೆ ಧಾವಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ರಾಜ್‌ಕೋಟ್‌ನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ನ್ಯಾರಿ ಅಣೆಕಟ್ಟು ತುಂಬಿ ಹೊರಹರಿಯುತ್ತಿದೆ.

ಹಿ. ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತ
ಹಿಮಾಚಲ ಪ್ರದೇಶದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮನಾಲಿಯ ಪ್ರಮುಖ ಬಸ್‌ಸ್ಟಾಂಡ್‌ ಜಲಾವೃತವಾಗಿದೆ. ಹಲವಾರು ಬಸ್‌ಗಳು ಪ್ರವಾಹದ ನೀರಿನಿಂದಾಗಿ ಕೊಚ್ಚಿ ಹೋಗಿ ಜಖಂಗೊಂಡಿವೆ. ಯಾವುದೇ ಸಾವು-ನೋವು ಸಂಭವಿಸಿದ ವರದಿಯಾಗಿಲ್ಲ.

ದೆಹಲಿಯಲ್ಲೂ ಜನಜೀವನ ತತ್ತರ
ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ಎನ್‌ಸಿಆರ್‌ ಪ್ರಾಂತ್ಯದಲ್ಲಿ ಬುಧವಾರದಂದು ಭಾರೀ ಮಳೆಯಾಗಿದೆ. ಎನ್‌ಸಿಆರ್‌ ಪ್ರಾಂತ್ಯದ ಲೋನಿ ದೆಹಾತ್‌, ಹಿಂಡಾನ್‌ ಎಎಫ್ ಸ್ಟೇಷನ್‌, ಗಾಜಿಯಾಬಾದ್‌, ಇಂದಿರಾಪುರಂ, ಛಪ್ರೌಲಾ, ನೊಯ್ಡಾ, ದಾದ್ರಿ, ಗ್ರೇಟರ್‌ ನೋಯ್ಡಾದಲ್ಲಿ ಭಾರೀ ಮಳೆಯಾಗಿದೆ. ನವದೆಹಲಿಗೆ ಹತ್ತಿರವಾಗಿರುವ ಹರ್ಯಾಣದ ನರ್ವಾಣಾ, ಬರ್ವಾಲಾ, ಚಕ್ರಿ ದಾದ್ರಿ, ಮಟ್ಟನ್‌ಹಾಯ್ಲಿ, ಝಜ್ಜರ್‌, ಫಾರೂಖ್‌ ನಗರ್‌, ಕೊಸಾಲಿ, ಮಹೇಂದರ್‌ ಗಢ (ಹರ್ಯಾಣ), ನಾಜಿಯಾಬಾದ್‌, ಬಿಜಾ°ರ್‌, ಚಂದಾಪುರ, ಅನ್ರೋಹಾ (ಉತ್ತರ ಪ್ರದೇಶ) ಮುಂತಾದೆಡೆ ಭಾರೀ ಮಳೆಯಾಗಿದೆ.

ಅಮರನಾಥ ಯಾತ್ರೆ ಪುನಃ ಸ್ಥಗಿತ
ಇತ್ತೀಚೆಗಷ್ಟೇ ಪುನರಾರಂಭಗೊಂಡಿದ್ದ ಅಮರನಾಥ ಯಾತ್ರೆ ಪುನಃ ಸ್ಥಗಿತಗೊಂಡಿದೆ. ಬೇಸ್‌ಕ್ಯಾಂಪ್‌ಗ್ಳಿರುವ ಪ್ರಾಂತ್ಯಗಳಲ್ಲಿ ಅತೀವ ಮಳೆಯಾಗಿ, ಪ್ರವಾಹದಂಥ ಪರಿಸ್ಥಿತಿ ಉಂಟಾಗಿರುವುದು ಹಾಗೂ ಬೇಸ್‌ಕ್ಯಾಂಪ್‌ಗ್ಳಿಗೂ ನೀರು ನುಗ್ಗಿ ಅಲ್ಲಿದ್ದ ಯಾತ್ರಾರ್ಥಿಗಳಿಗೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬದ್ರಿನಾಥ್‌ ಹೈವೇ ಬಂದ್‌: ಉತ್ತರಾಖಾಂಡದ ಚಮೋಲಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಕಡೆ ಭೂಕುಸಿತ ಉಂಟಾಗಿದೆ. ಬದ್ರಿನಾಥ್‌ ಹೆದ್ದಾರಿಯ ಅಲ್ಲಲ್ಲಿ ಭೂ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಆ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.