![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 16, 2022, 7:00 AM IST
ಜೈಪುರ: ಕುಡಿಯುವ ನೀರಿನ ಮಡಿಕೆಯನ್ನು ಸ್ಪರ್ಶಿಸಿದ ದಲಿತ ಬಾಲಕ ಶಿಕ್ಷಕನ ಥಳಿತದಿಂದ ಸಾವಿಗೀಡಾದ ಘಟನೆಯನ್ನು ಖಂಡಿಸಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ. ಅವರು ರಾಜೀನಾಮೆಯನ್ನು ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಕಳುಹಿಸಿಕೊಟ್ಟಿದ್ದು, ಕೆಲವು ವರ್ಷಗಳಿಂದ ದಲಿತರ ವಿರುದ್ಧ ರಾಜ್ಯದಲ್ಲಿ ದೌರ್ಜನ್ಯಗಳು ಹೆಚ್ಚುತ್ತಿವೆ.
ದಲಿತ ಸಮುದಾಯವನ್ನು ರಕ್ಷಿಸಲು ಸಾಧ್ಯವಾಗದೆ ಇರುವುದರಿಂದ ಶಾಸಕನಾಗಿ ಮುಂದುವರಿ ಯುವ ಹಕ್ಕು ತನಗಿಲ್ಲ ಎಂದವರು ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಪಾನಾ ಚಂದ್ ಮೆಘವಾಲ್ ರಾಜೀನಾಮೆ ನೀಡಿರುವ ಶಾಸಕ. ಅವರು ತನ್ನ ರಾಜೀನಾಮೆ ಪ್ರತಿಯನ್ನು ಸ್ಪೀಕರ್ ಅವರಿಗೂ ಕಳುಹಿಸಿ ಕೊಟ್ಟಿದ್ದಾರೆ. ಮಡಿಕೆಯಿಂದ ನೀರು ಕುಡಿಯುವುದು, ಮೀಸೆ ಇರಿಸಿ ಕೊಂಡಿರುವುದು, ಕತ್ತೆಯ ಮೇಲೆ ಸವಾರಿ ಮಾಡುವುದು ಮುಂತಾದ ಕ್ಷುಲ್ಲಕ ಕಾರಣಗಳಿಗಾಗಿ ರಾಜಸ್ಥಾನದಲ್ಲಿ ದಲಿತರನ್ನು ಕೊಲ್ಲಲಾಗುತ್ತಿದೆ. ಇದರ ಬಗ್ಗೆ ಪೊಲೀಸರ ತನಿಖೆಯೂ ಹಳ್ಳ ಹಿಡಿಯುತ್ತಿದೆ ಎಂದು ಮೇಘವಾಲ್ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.