RSS activities; ಸರಕಾರಿ ನೌಕರರಿಗಿದ್ದ ನಿಷೇಧ ಹಿಂತೆಗೆದುಕೊಂಡ ರಾಜಸ್ಥಾನ ಸರಕಾರ
Team Udayavani, Aug 24, 2024, 5:45 PM IST
ಜೈಪುರ: ಸರಕಾರಿ ನೌಕರರು ಆರ್ ಎಸ್ ಎಸ್(RSS) ಚಟುವಟಿಕೆಗಳಲ್ಲಿ ಭಾಗವಹಿಸುವ ಮೇಲೆ ಹೇರಲಾಗಿದ್ದ ನಿಷೇಧವನ್ನು ರಾಜಸ್ಥಾನದ ಬಿಜೆಪಿ(BJP) ಸರಕಾರ ತೆಗೆದುಹಾಕಿದೆ.
ಹಿಂದಿನ ಆದೇಶಗಳನ್ನು ಉಲ್ಲೇಖಿಸಿ ಸಿಬಂದಿ ಇಲಾಖೆಯ ಜಂಟಿ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಕಾವಿಯಾ ಅವರು 52 ವರ್ಷಗಳ ನಿಷೇಧವನ್ನು ತೆಗೆದುಹಾಕಿರುವ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯ ಪ್ರಕಾರ, 1972 ಮತ್ತು 1981 ರ ಸೂಚನೆಗಳನ್ನು ಪರಿಶೀಲಿಸಿ, ಈ ಹಿಂದೆ ಚಟುವಟಿಕೆಗಳನ್ನು ನಿಷೇಧಿಸಿದ ಸಂಘಟನೆಗಳ ಪಟ್ಟಿಯಿಂದ ಆರ್ಎಸ್ಎಸ್ ಹೆಸರನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ.
ಈ ಹಿಂದೆ ಕೇಂದ್ರ ಸರಕಾರ ಸರಕಾರಿ ನೌಕರರು ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವ ನಿರ್ಬಂಧವನ್ನು ಹಿಂಪಡೆದಿತ್ತು. 1966ರ ನವೆಂಬರ್ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಆಡಳಿತಾವಧಿಯಲ್ಲಿ ಹೇರಲಾಗಿದ್ದ ನಿಷೇಧವನ್ನು ಸಿಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ತೆಗೆದುಹಾಕಿತ್ತು.
ಹರಿಯಾಣ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ಸೇರಿದಂತೆ ಹಲವಾರು ರಾಜ್ಯ ಸರಕಾಗಳು ಈಗಾಗಲೇ ಸರಕಾರಿ ನೌಕರರು ಆರ್ಎಸ್ಎಸ್ಗೆ ಸಂಬಂಧಿಸಿರುವ ನಿರ್ಬಂಧಗಳನ್ನು ತೆಗೆದುಹಾಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.