![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 28, 2024, 1:18 AM IST
ಅಹ್ಮದಾಬಾದ್: ರಾಜ್ಕೋಟ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರಕರಣ ದಾಖಲಿಸಿಕೊಂಡಿರುವ ಗುಜರಾತ್ ಹೈಕೋರ್ಟ್ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇಂತಹ ದುರ್ಘಟನೆ ಬಳಿಕ ನಮಗೆ ರಾಜ್ಯ ಸರಕಾರದ ಮೇಲೆ ಭರವಸೆ ಇಲ್ಲದಂತಾಗಿದೆ ಎಂದು ಹೇಳಿದೆ.
ನ್ಯಾ| ಬೀರೆನ್ ವೈಷ್ಣವ್ ಹಾಗೂ ನ್ಯಾ|ದೇವನ್ ದೇಸಾಯಿ ಅವರಿದ್ದ ವಿಶೇಷ ಪೀಠ, ಇದು ಮಾನವ ಮಾಡಿದ ತಪ್ಪಿನಿಂದ ಉಂಟಾದ ದುರಂತ ಎಂದು ಹೇಳಿದೆ. ಈ ಗೇಮಿಂಗ್ ಸೆಂಟರ್ ಯಾವುದೇ ಅನುಮತಿ ಪಡೆಯದೇ ಸುಮಾರು ಎರಡೂವರೆ ವರ್ಷದಿಂದ ಕಾರ್ಯ ನಿರ್ವಹಿಸುತ್ತಿದೆ. ಕ್ರಮ ಕೈಗೊಳ್ಳದೇ ನೀವು ನಿದ್ದೆಗೆ ಜಾರಿದ್ದಿರಾ ಅಥವಾ ನಿಮ್ಮ ಕಣ್ಣು ಕುರುಡಾಗಿದೆಯೇ ಎಂದು ಕೋರ್ಟ್ ಪ್ರಶ್ನಿಸಿದೆ.
ಬೆಂಕಿ ಅವಘಡಗಳನ್ನು ತಪ್ಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ 4 ವರ್ಷದ ಹಿಂದೆಯೇ ಸೂಚನೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಮಾಯಕರ ಸಾವು ಸಂಭವಿಸಿದ ಮೇಲೆ ನಮಗೆ ರಾಜ್ಯ ಸರಕಾರದ ಮೇಲೆ ಭರವಸೆ ಇಲ್ಲದಂತಾಗಿದೆ ಎಂದು ನ್ಯಾಯಪೀಠ ಹೇಳಿದೆ.
6 ಮಂದಿ ಅಮಾನತು
ದುರಂತಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ರಾಜ್ಯ ಸರಕಾರ ಅಮಾನತು ಮಾಡಿದೆ. ಈ ಅಧಿಕಾರಿಗೆ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ ಎಂದು ಸರಕಾರ ಆರೋಪಿಸಿದೆ. ಅಮಾನತಾಗಿರುವ ಅಧಿಕಾರಿಗಳಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸಹ ಸೇರಿದ್ದಾರೆ. ಇದೇ ವೇಳೆ, ಘಟನೆಗೆ ಸಂಬಂಧಿಸಿದಂತೆ ಮತ್ತೂಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಹೀಗಾಗಿ ಈ ಪ್ರಕರಣದಲ್ಲಿ ಒಟ್ಟು ಮೂವರನ್ನು ಬಂಧಿಸಲಾಗಿದೆ.
ಪೊಲೀಸ್ ಆಯುಕ್ತರ ಎತ್ತಂಗಡಿ
ಗೇಮಿಂಗ್ ಸೆಂಟರ್ನಲ್ಲಿ ಉಂಟಾಗಿರುವ ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಕೋಟ್ ಮಹಾನಗರ ಪಾಲಿಕೆ ಆಯುಕ್ತ ಆನಂದ್ ಪಟೇಲ್ರನ್ನು ಎತ್ತಂಗಡಿ ಮಾಡಲಾಗಿದೆ. ಇದರ ಜತೆಗೆ ನಗರ ಪೊಲೀಸ್ ಆಯುಕ್ತ ರಾಜು ಭಾರ್ಗವ, ಜತೆಗೆ ಇನ್ನಿಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.
ದುರಂತಕ್ಕೆ ವೆಲ್ಡಿಂಗ್ ಕಿಡಿಯೇ ಕಾರಣ?
ಗೇಮಿಂಗ್ ಝೋನ್ ಅಗ್ನಿ ಅವಘಡಕ್ಕೆ ವೆಲ್ಡಿಂಗ್ ಯಂತ್ರದಿಂದ ಉಂಟಾ ದ ಬೆಂಕಿಯ ಕಿಡಿ ಕಾರಣ ಎಂದು ಸಿಸಿಟಿವಿ ದೃಶ್ಯಾವಳಿಯಿಂದ ತಿಳಿದುಬಂದಿದೆ. ಕಟ್ಟಡದ ಮೊದಲ ಮಹಡಿಯಲ್ಲಿ ವೆಲ್ಡಿಂಗ್ ಕೆಲಸ ನಡೆದಿತ್ತು. ವೆಲ್ಡಿಂಗ್ ಯಂತ್ರದಿಂದ ಉಂಟಾದ ಕಿಡಿ ಹತ್ತಿರದಲ್ಲೇ ಇದ್ದ ಪ್ಲಾಸ್ಟಿಕ್ ರಾಶಿಗೆ ತಗಲಿದ್ದು, ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದಾರೆ. ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಸುರಕ್ಷ ಉಪಕ ರಣವಿದ್ದರೂ, ಬೆಂಕಿ ಆರಿಸ ಲಾಗಿಲ್ಲ. ಕೆಲವೇ ಸೆಕೆಂಡುಗಳಲ್ಲಿ ಬೆಂಕಿ ಎಲ್ಲೆಡೆ ವ್ಯಾಪಿಸಿದೆ. ವೆಲ್ಡಿಂಗ್ ನ ಸಣ್ಣ ಕಿಡಿ ಅತೀ ದೊಡ್ಡ ಅವಘಡಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.