ರಾಜ್ಯಸಭೆ ಕಲಾಪ ಗದ್ದಲದಲ್ಲೇ ತೆರೆ


Team Udayavani, Apr 8, 2022, 7:40 AM IST

ರಾಜ್ಯಸಭೆ ಕಲಾಪ ಗದ್ದಲದಲ್ಲೇ ತೆರೆ

ಹೊಸದಿಲ್ಲಿ: ಸಂಸತ್‌ನ ಬಜೆಟ್‌ ಅಧಿವೇಶನ ನಿರೀಕ್ಷೆಯಂತೆಯೇ ಗುರುವಾರವೇ ಮುಕ್ತಾ ಯವಾಗಿದೆ. ಲೋಕಸಭೆ ಮತ್ತು ರಾಜ್ಯ ಸಭೆಗಳಲ್ಲಿ ಕ್ರಮವಾಗಿ ಸ್ಪೀಕರ್‌ ಮತ್ತು ಸಭಾಪತಿ ಕಲಾಪವನ್ನು ಅನಿರ್ಧಿಷ್ಟಾವಧಿಗೆ  ಮುಂದೂಡುವ ಘೋಷಣೆ ಮಾಡಿದ್ದಾರೆ. ಹೀಗಾಗಿ ಜ.31ರಂದು ಶುರುವಾಗಿದ್ದ ಅಧಿವೇಶನ 2 ತಿಂಗಳ ಬಳಿಕ ಮುಕ್ತಾಯವಾಗಿದೆ.

ಲೋಕಸಭೆಯಲ್ಲಿ ಹೆಚ್ಚಾ ಕಡಿಮೆ ಕಲಾಪಗಳು ಸುಗಮವಾಗಿ ನಡೆದಿದ್ದರೂ, ರಾಜ್ಯಸಭೆಯಲ್ಲಿ ಮಾತ್ರ ತೈಲೋತ್ಪನ್ನಗಳ ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸರಕಾರ ಮತ್ತು ವಿಪಕ್ಷಗಳ ನಡುವೆ ಕೋಲಾಹಲ ಉಂಟಾಗಿ ಕಲಾಪಕ್ಕೆ ಅಡ್ಡಿ ಉಂಟಾಗಿತ್ತು.

ಕೊನೆಯ ದಿನದ ಕಲಾಪದ ವೇಳೆ ಬಿಜೆಪಿಯ ಕಿರಿಟ್‌ ಸೋಮಯ್ಯ ಮತ್ತು ಅವರ ಪುತ್ರನ ವಿರುದ್ಧ ಕೇಸು ದಾಖಲಾ ಗಿರುವ ವಿಚಾರ ರಾಜ್ಯಸಭೆಯಲ್ಲಿ ಪ್ರಸ್ತಾವವಾಯಿತು. ವಿಪಕ್ಷ ನಾಯಕ ಮಲ್ಲಿ ಕಾರ್ಜುನ ಖರ್ಗೆ, ಟಿಎಂಸಿಯ ಡೆರಿಕ್‌ ಒಬ್ರಿಯಾನ್‌ ಮತ್ತಿತರರು ಆಕ್ರೋಶ ವ್ಯಕ್ತಪಡಿ ಸಿ ದರು. ಈ ಸಂದರ್ಭದಲ್ಲಿ ಸಭಾಪತಿ ಎಂ.ವೆಂಕಯ್ಯ ನಾಯ್ಡು ಮತ್ತು ವಿಪಕ್ಷಗಳ ಮುಖಂಡರ ನಡುವೆ ವಾಗ್ವಾದ ನಡೆಯಿತು. ತೈಲೋತ್ಪನ್ನಗಳು ಮತ್ತು ಅಗತ್ಯ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಯಬೇಕು ಎಂದು ಒತ್ತಾಯಿಸಿ, ಸದನದ ಮುಂಗಟ್ಟೆಗೆ ಧಾವಿಸಿ ವಿಪಕ್ಷಗಳ ಸದಸ್ಯರು ಆಗಮಿಸಿ ದರು. ಈ ಸಂದರ್ಭದಲ್ಲಿ ಸಭಾಪತಿ ವೆಂಕಯ್ಯ ನಾಯ್ಡು ಕಲಾಪವನ್ನು ಅನಿಧಿ ì ಷ್ಟಾವಧಿಗೆ ಮುಂದೂಡಿದರು.

ಲೋಕಸಭೆಯಲ್ಲಿ:  ಲೋಕಸಭೆಯಲ್ಲಿ ಕಲಾಪ ಶುರುವಾಗುತ್ತಲೇ ಸ್ಪೀಕರ್‌ ಓಂ ಬಿರ್ಲಾ ಅವರು ಅನಿರ್ಧಿಷ್ಟಾವಧಿಗೆ ಕಲಾಪ ಮುಂದೂಡುವುದಾಗಿ ಪ್ರಕಟಿಸಿದರು. ಅನಂತರ ಮಾತನಾಡಿದ ಲೋಕಸಭೆ ಸ್ಪೀಕರ್‌ ಓಂಬಿರ್ಲಾ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಲೋಕಸಭೆಯಲ್ಲಿ 27 ಸಿಟ್ಟಿಂಗ್‌ಗಳ ಮೂಲಕ ಶೇ.129ರಷ್ಟು ಉತ್ಪಾದಕತೆ ಸಾಧಿ ಸಿದೆ. ರಾಜ್ಯಸಭೆಯ ಲ್ಲಿಯೂ 27 ಸಿಟ್ಟಿಂಗ್‌ಗಳು ನಡೆದಿವೆ. ಮೇಲ್ಮನೆಯಲ್ಲಿ ಪ್ರತಿಭಟನೆ ಕೋಲಾಹಲಗಳಿಂದ 9.30 ಗಂಟೆ ನಷ್ಟವಾಗಿ, ಶೇ.98ರಷ್ಟು ಉತ್ಪಾದಕತೆ (ಪ್ರೊಡಕ್ಟಿವಿಟಿ) ಸಾಧಿಸಲಾಗಿದೆ ಎಂದರು. ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡಿಸಿದ್ದರು.

13:  ಸಂಸತ್‌ನಲ್ಲಿ ಮಂಡಿಸಲು ಉದ್ದೇಶಿಸಿದ್ದ ಮಸೂದೆಗಳು

13 : ಲೋಕಸಭೆಯಲ್ಲಿ ಅಂಗೀಕಾರಗೊಂಡ ಮಸೂದೆಗಳು

11:  ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಮಸೂದೆಗಳು

129% : ಲೋಕಸಭೆ ಉತ್ಪಾದಕತೆ

98% : ರಾಜ್ಯಸಭೆ ಉತ್ಪಾದಕತೆ

ಅಂಗೀಕಾರಗೊಂಡ ಪ್ರಮುಖ ಮಸೂದೆ :

  1. ವಿತ್ತೀಯ ಮಸೂದೆಗಳು
  2. ಅಪರಾಧ ಪ್ರಕ್ರಿಯೆ (ಗುರುತಿಸುವಿಕೆ) ಮಸೂದೆ
  3. ಸಮೂಹ ವಿನಾಶಕ ಶಸ್ತ್ರಾಸ್ತ್ರ ಮತ್ತು ವಿತರಣೆ ವ್ಯವಸ್ಥೆ (ನಿಷೇಧಿತ ಚಟುವಟಿಕೆಗಳ ತಡೆ) ಮಸೂದೆ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.