ಲೋಕಸಭೆಯಲ್ಲಿ ಹೈಡ್ರಾಮಾ:ಕಾಂಗ್ರೆಸ್‌- AIADMK ಸದಸ್ಯರ ನಡುವೆ ವಾಗ್ವಾದ


Team Udayavani, Mar 28, 2018, 9:05 AM IST

Kharge-27-3.jpg

ನವದೆಹಲಿ: ಲೋಕಸಭೆ, ರಾಜ್ಯಸಭೆಯಲ್ಲಿ ಸತತ 16ನೇ ದಿನವಾದ ಮಂಗಳವಾರ ಕೂಡ ಎಐಎಡಿಎಂಕೆ, ವೈಎಸ್ಸಾರ್‌ ಕಾಂಗ್ರೆಸ್‌ನ ಗದ್ದಲದಿಂದಾಗಿ ಕಲಾಪ ಕೊಚ್ಚಿಹೋಯಿತು. ಇದರ ನಡುವೆಯೇ ಲೋಕಸಭೆಯು ಹೈಡ್ರಾಮಾಗೆ ಸಾಕ್ಷಿಯಾಯಿತು. ಕಲಾಪ ಮುಂದೂಡಿಕೆಯಾದ ಬಳಿಕ ಕಾಂಗ್ರೆಸ್‌ ಮತ್ತು ಎಐಎಡಿಎಂಕೆ ಸಂಸದರ ನಡುವೆ ಭಾರೀ ಮಾತಿನ ಚಕಮಕಿ ನಡೆಯಿತು. ಲೋಕಸಭೆಯಲ್ಲಿ ಕೇಂದ್ರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಚರ್ಚೆ ಮತ್ತು ಕಲಾಪ ನಡೆಯದಂತೆ ಮಾಡಲು ಎಐಎಡಿಎಂಕೆ ಬಿಜೆಪಿ ಜತೆಗೆ ಮ್ಯಾಚ್‌ಫಿಕ್ಸಿಂಗ್‌ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್‌ ಹೇಳಿದ್ದು, ತಮಿಳುನಾಡಿನ ಪಕ್ಷದ ಕೋಪಕ್ಕೆ ಕಾರಣವಾಯಿತು. ಕೋಪೋದ್ರಿಕ್ತಗೊಂಡ ಸಂಸದರು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ವೇಣುಗೋಪಾಲ್‌ರತ್ತ ಧಾವಿಸಿ ಬಂದರು. ಮೊದಲ ಸಾಲಿನಲ್ಲಿ ಖರ್ಗೆ ಜತೆಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಇದ್ದರು. ಎಐಎಡಿಎಂಕೆ ಸದಸ್ಯರು ಖರ್ಗೆಯವರನ್ನು ಎಳೆದಾಡಲು ಮುಂದಾದರಾದರೂ, ಕೂಡಲೇ ಆರ್‌ಜೆಡಿ, ಟಿಎಂಸಿ, ಎಡಪಕ್ಷಗಳು ಮತ್ತು ಕಾಂಗ್ರೆಸ್‌ನ ಕೆಲ ಸಂಸದರು ಅಡ್ಡ ನಿಂತು, ತಡೆಯುವಲ್ಲಿ ಯಶಸ್ವಿಯಾದರು. ಈ ಹಂತದಲ್ಲಿ ಕಾಂಗ್ರೆಸ್‌ ಮತ್ತು ಎಐಎಡಿಎಂಕೆ ಸದಸ್ಯರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಅದೇ ವೇಳೆ ಸೋನಿಯಾ ಮಧ್ಯಪ್ರವೇಶಿಸಿ ವೇಣುಗೋಪಾಲ್‌ ಜತೆ ಮಾತನಾಡಿದರು. 

ಲೋಕಸಭೆಯಿಂದ ಹೊರಗೆ ಬಂದು ಮಾತನಾಡಿದ ಖರ್ಗೆ, ಇದೊಂದು ಕೇಂದ್ರ ಸರ್ಕಾರವೇ ಪ್ರಾಯೋಜಿಸಿದ ಪ್ರತಿಭಟನೆಯಂತಿದೆ. ಎಐಎಡಿಎಂಕೆ ಸದಸ್ಯರನ್ನು ಪ್ರತಿಭಟಿಸಲು ಪ್ರೇರೇಪಣೆ ಮಾಡಿದಂತಿದೆ ಎಂದಿದ್ದಾರೆ. ಇದೇ ವೇಳೆ ಬಿಕ್ಕಟ್ಟು ಪರಿಹರಿಸಲು ಸ್ಪೀಕರ್‌ ಸುಮಿತ್ರಾ ಮಹಾಜನ್‌ ಸರ್ವಪಕ್ಷಗಳ ಸಭೆ ಕರೆಯಲು ಮುಂದಾಗಿದ್ದಾರೆ.

ಏ.6ಕ್ಕೆ ಮುಕ್ತಾಯ: ಬಜೆಟ್‌ ಅಧಿವೇಶನದ ಎರಡನೇ ಭಾಗ ಏ.6ರಂದು ಪೂರ್ಣಗೊಳ್ಳಲಿದೆ. ಈ ಹಂತದಲ್ಲಿ ಒಟ್ಟು 22 ಸಿಟ್ಟಿಂಗ್‌ಗಳು ನಡೆಯಬೇಕಾಗಿತ್ತು. 

ಮುಂದೂಡಿಕೆ ಬಳಿಕವೂ ಧರಣಿ: ರಾಜ್ಯಸಭೆಯಲ್ಲಿ ಕೇವಲ 20  ನಿಮಿಷಗಳಷ್ಟು ಕಾಲ ಮಾತ್ರ ಸದನ ಸಮಾವೇಶಗೊಂಡಿತ್ತು. ಗದ್ದಲದ ಹಿನ್ನೆಲೆ ಕಲಾಪ ಮುಂದೂಡಲ್ಪಟ್ಟಿತು. ನಂತರವೂ ಪ್ರತಿಪಕ್ಷಗಳ ಸದಸ್ಯರು ಸುಮಾರು ಮುಂಭಾಗದಲ್ಲಿ ಸೇರಿ ಘೋಷಣೆ ಕೂಗುತ್ತಿದ್ದರು. ಸದಸ್ಯತ್ವದ ಅವಧಿ ಪೂರ್ಣಗೊಂಡಿರುವ 40 ಮಂದಿಗೆ ಬೀಳ್ಕೊಡುಗೆಯೂ‌ ಸಾಧ್ಯವಾಗಲಿಲ್ಲ. 

ಪ್ರತಿಪಕ್ಷಗಳ ಹೊಸ ಐಡಿಯಾ: ಕಲಾಪ ನಡೆಯದ ಕಾರಣ ಪ್ರತಿಪಕ್ಷಗಳ ಸದಸ್ಯರು ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಇದೆ ಎಂದು ಪ್ರಕಟಿಸಲು 1ರಿಂದ 80ರ ವರೆಗೆ ಸಂಖ್ಯೆಗಳಿರುವ ಫ‌ಲಕಗಳನ್ನು ಪ್ರದರ್ಶಿಸಿದರು. ಇದರ ಜತೆಗೆ ‘ಅವಿಶ್ವಾಸ ಗೊತ್ತುವಳಿಗಾಗಿ’ ಎಂದೂ ಬರೆದುಕೊಂಡಿದ್ದರು.

ಸರ್ಕಾರ ಚರ್ಚೆಗೆ ಸಿದ್ಧವಿದೆ ಎಂದು ಎಲ್ಲರಲ್ಲಿಯೂ ಮನವಿ ಮಾಡುತ್ತಿದ್ದೇನೆ. ಸಂಸತ್‌ನ ಹೊರಗೆ ಮತ್ತು ಒಳಗೆ ನಮಗೆ ಬಹುಮತವಿದೆ. ಕಾಂಗ್ರೆಸ್‌ ಈಗ ಸಣ್ಣ ಪಕ್ಷವಾಗಿ ಮಾರ್ಪಾಡಾಗಿದೆ. ಇತರ ಪಕ್ಷಗಳ ಜತೆಗೆ ಮೈತ್ರಿಗಾಗಿ ನೋಡುತ್ತಿದೆ. ಅವಿಶ್ವಾಸ ಗೊತ್ತುವಳಿಯಲ್ಲಿಯೂ ಅದು ಮೈತ್ರಿಗೆ ಮುಂದಾಗಿದೆ. ಈ ಬಗ್ಗೆ ಖರ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು.
– ಅನಂತಕುಮಾರ್‌, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.