![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 10, 2020, 12:25 AM IST
ಇದೇ 14ರಿಂದ ಶುರುವಾಗಲಿರುವ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಬುಧವಾರ, ರಾಜ್ಯ ಸಭಾ ಸ್ಪೀಕರ್ ವೆಂಕಯ್ಯ ನಾಯ್ಡು ಅಣಕು ಕಲಾಪ ನಡೆಸಿದರು.
ನವದೆಹಲಿ: ರಾಜ್ಯಸಭೆಯಲ್ಲಿ ಉಪ ಸಭಾಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಜೆಡಿಯು ರಾಜ್ಯಸಭಾ ಸದಸ್ಯ ಹರಿವಂಶ ನಾರಾಯಣ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ಮೇಲ್ಮನೆಯಲ್ಲಿನ ಸಂಖ್ಯಾಬಲದ ಲೆಕ್ಕಾಚಾರ ಗಮನಿಸಿ ದಾಗ ಅವರೇ ಹುದ್ದೆಗೆ ಆಯ್ಕೆಯಾಗುವ ಸಾಧ್ಯತೆ ಅಧಿಕವಾಗಿದೆ.
245 ಸದಸ್ಯ ಬಲದ ರಾಜ್ಯಸಭೆ ಯಲ್ಲಿ ಸರ್ಕಾರದ ಪರವಾಗಿ 116 ಸದಸ್ಯರು ಇದ್ದಾರೆ. ಇದಲ್ಲದೆ, ಬಿಜು ಜನತಾ ದಳ, ವೈ.ಎಸ್.ಆರ್.ಕಾಂಗ್ರೆಸ್, ತೆಲಂಗಾಣ ರಾಷ್ಟ್ರ ಸಮಿತಿ ಸದಸ್ಯರು ಸರ್ಕಾರದ ಅಭ್ಯರ್ಥಿ ಪರವಾಗಿ ಬೆಂಬಲ ಸೂಚಿಸಲಿವೆ. ಕಾಂಗ್ರೆಸ್ ಇತರ ಪ್ರತಿಪಕ್ಷಗಳ ಜತೆಗೆ ಸೇರಿಕೊಂಡು ಉಪಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನು ಇಳಿಸುವ ಬಗ್ಗೆ ಯೋಚಿಸುತ್ತಿದ್ದಂತೆಯೇ ಎನ್ಡಿಎ ವತಿಯಿಂದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.
ಇದೇ ವೇಳೆ, ಲೋಕಸಭೆಯಲ್ಲಿನ ಉಪ ಸಭಾ ಧ್ಯಕ್ಷ ಹುದ್ದೆಯನ್ನು ಸಂಸತ್ನ ಮುಂಗಾರು ಅಧಿವೇಶನದಲ್ಲಿಯೇ ಭರ್ತಿ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಅಧಿರ್ ರಂಜನ್ ಚೌಧರಿ ಒತ್ತಾಯಿ ಸಿದ್ದಾರೆ. ಜತೆಗೆ ಪ್ರತಿಪಕ್ಷಗಳಿಗೆ ಆ ಹುದ್ದೆಯನ್ನು ನೀಡಬೇಕು. ಇಂಥ ಒಂದು ಸಂಪ್ರದಾಯ ಹಿಂದಿನಿಂದಲೂ ಇದೆ ಎಂದೂ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.