Ram Mandir Ceremony: ಜ.22ರಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಣೆ
Team Udayavani, Jan 18, 2024, 3:59 PM IST
ಹೊಸದಿಲ್ಲಿ: ಇದೇ ಬರುವ ಜ.22 (ಸೋಮವಾರ) ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದೆ. ಹೀಗಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಅಂದು ಅರ್ಧ ದಿನ ರಜೆ ಘೋಷಿಸಲಾಗಿದೆ.
ಕೇಂದ್ರ ಸರ್ಕಾರ ಇಂದು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರಿ ನೌಕರರು ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರವನ್ನು ನೋಡುವ ಸಲುವಾಗಿ ಸೋಮವಾರ ಅರ್ಧ ದಿನ ರಜೆ ನೀಡಲಾಗಿದೆ.
ಜನವರಿ 22ರಂದು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ಇರಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಖಚಿತಪಡಿಸಿದ್ದು, ಸರ್ಕಾರ ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಅದ್ಧೂರಿ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಸಚಿವರಿಂದ ಪ್ರತಿಕ್ರಿಯೆಯನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಭಗವಾನ್ ರಾಮನ ಜನ್ಮಸ್ಥಳವೆಂದು ನಂಬಲಾದ ಉತ್ತರ ಪ್ರದೇಶದ ಅಯೋಧ್ಯೆ ಪಟ್ಟಣವು ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ಸಿದ್ದವಾಗಿದೆ. ಈ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ನಟರು ಮತ್ತು ಕ್ರಿಕೆಟಿಗರು ಸೇರಿದಂತೆ ಹಲವಾರು ಗಣ್ಯ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
ಜ.22ರಂದು ಕೆಲವು ರಾಜ್ಯಗಳಲ್ಲಿ ಈಗಾಗಲೇ ರಜೆ ಘೋಷಿಸಲಾಗಿದೆ. ಉತ್ತರ ಪ್ರದೇಶ, ಗೋವಾ ರಾಜ್ಯಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಛತ್ತೀಸ್ ಗಢ ಮತ್ತು ಹರ್ಯಾಣದಲ್ಲಿ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.