Loksabha election: ಕಣಕ್ಕಿಳಿದಿದ್ದ ಸಿನಿ ತಾರೆಯರ ಕಥೆ ಏನಾಯ್ತು?


Team Udayavani, Jun 4, 2024, 8:44 PM IST

result of movie stars who contested in lok sabha election 2024

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹಲವು ಸಿನಿ ತಾರೆಗಳಿಗೂ ವಿವಿಧ ಪಕ್ಷಗಳು ಟಿಕೆಟ್‌ ನೀಡಿದ್ದವು. ಕಂಗನಾ ರಣಾವತ್‌, ಹೇಮಾ ಮಾಲಿನಿ, ಅರುಣ್‌ ಗೋವಿಲ್‌ ಸೇರಿ ಹಲವು ತಾರೆಗಳು ಜಯಗಳಿಸಿದರೆ, ಇನ್ನೂ ಕೆಲ ತಾರೆಗಳು ಪರಾಭವಗೊಂಡಿದ್ದಾರೆ. ಆ ಕುರಿತ ವಿವರ ಹೀಗಿದೆ.

1 : ಕಂಗನಾ ರಣೌತ್‌: ಬಾಲಿವುಡ್‌ನ‌ ಖ್ಯಾತ ನಟಿ ಕಂಗನಾ ರಣೌತ್‌ ತಮ್ಮ ತವರೂರಾದ ಹಿಮಾಚಲ ಪ್ರದೇಶದ ಮಂಡಿಯಿಂದ ಇದೇ ಮೊದಲ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್‌ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

2 : ಮನೋಜ್‌ ತಿವಾರಿ: ಈಶಾನ್ಯ ದೆಹಲಿಯ ಬಿಜೆಪಿ ಅಭ್ಯರ್ಥಿಯಾಗಿ ಭೋಜಪುರಿ ನಟ ಮನೋಜ್‌ ತಿವಾರಿ ಕಣಕ್ಕಿಳಿದಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಅವರನ್ನು 1 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ.

3 : ಶತ್ರುಘ್ನ ಸಿನ್ಹಾ: ಬಾಲಿವುಡ್‌ ನಟ ಹಾಗೂ ತೃಣಮೂಲ ಕಾಂಗ್ರೆಸ್‌ ಸಂಸದ ಶತ್ರುಘ್ನ ಸಿನ್ಹಾ ಪಶ್ಚಿಮ ಬಂಗಾಳದ ಅನ್ಸೋಲ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಿಜೆಪಿ ಅಭ್ಯರ್ಥಿ ಸುರೇಂದ್ರ ಜೀತ್‌ ಸಿಂಗ್‌ ವಿರುದ್ಧ 59 ಸಾವಿರ ಮತ ಅಂತರದಲ್ಲಿ ಗೆದ್ದಿದ್ದಾರೆ.

4 : ಹೇಮಾ ಮಾಲಿನಿ: ಹಾಲಿ ಸಂಸದೆ ಹಾಗೂ ಖ್ಯಾತ ನಟಿ ಹೇಮಾ ಮಾಲಿನಿ ಅವರು ಉತ್ತರ ಪ್ರದೇಶದ ಮಥುರಾದಿಂದ ಬಿಜೆಪಿ ಟಿಕೆಟ್‌ನಲ್ಲಿ ಕಣಕ್ಕಿಳಿದಿದ್ದರು. ಕಳೆದ 2 ಬಾರಿಯೂ ಇದೇ ಕ್ಷೇತ್ರದಲ್ಲಿ ಜಯಗಳಿಸಿದ್ದ ಅವರು ಈ ಬಾರಿ ಕಾಂಗ್ರೆಸ್‌ನ ಮುಕೇಶ್‌ ದಂಗರ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ.

5 : ಅರುಣ್‌ ಗೋವಿಲ್‌: ರಾಮಾಯಣ ಧಾರವಾಹಿ ಮೂಲಕ ರಾಮನ ಪಾತ್ರದಲ್ಲಿ ಪ್ರಸಿದ್ಧಿ ಹೊಂದಿದ್ದ ನಟ ಅರುಣ್‌ ಗೋವಿಲ್‌ ಅವರಿಗೆ ಉತ್ತರ ಪ್ರದೇಶದ ಮೀರತ್‌ನಿಂದ ಬಿಜೆಪಿ ಟಿಕೆಟ್‌ ನೀಡಲಾಗಿತ್ತು. ಪ್ರಥಮ ಬಾರಿಗೆ ಲೋಕಸಭೆ ಕಣಕ್ಕಿಳಿದಿದ್ದ ಗೋವಿಲ್‌ ಬಿಎಸ್‌ಪಿಯ ಸ್ಪರ್ಧಿ ದೇವ್ರತ್‌ ಕುಮಾರ್‌ ತ್ಯಾಗಿ ಹಾಗೂ ಎಸ್‌ಪಿ ಅಭ್ಯರ್ಥಿ ಸಿನಿತಾ ವರ್ಮಾ ಅವರನ್ನು ಹಿಮ್ಮೆಟ್ಟಿಸಿ ಗೆದಿದ್ದಾರೆ.

6 : ಪವನ್‌ ಸಿಂಗ್‌: ಭೋಜ್‌ಪುರಿ ಸಿನಿಮಾಗಳಲ್ಲಿ ಪ್ರಖ್ಯಾತಿ ಗಳಿಸಿದ್ದ ನಟ ಹಾಗೂ ಹಿನ್ನೆಲೆ ಗಾಯಕ ಪವನ್‌ ಸಿಂಗ್‌ ಬಿಹಾರದ ಕರಾಕತ್‌ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದಾರೆ.

7 : ರವಿ ಕಿಶನ್‌: ನಟ ಹಾಗೂ ಹಾಲಿ ಸಂಸದ ರವಿ ಕಿಶನ್‌ ಅವರು ಉತ್ತರ ಪ್ರದೇಶದ ಗೋರಖ್‌ಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಎಸ್‌ಪಿ ಮತ್ತು ಬಿಎಸ್‌ಪಿ ಅಭ್ಯರ್ಥಿಗಳನ್ನು ಮಣಿಸಿ 10 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

8 : ಸುರೇಶ್‌ ಗೋಪಿ: ಖ್ಯಾತ ಮಲಯಾಳಂ ನಟ ಸುರೇಶ್‌ ಗೋಪಿ ಕೇರಳದ ತ್ರಿಶೂರ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಸಿಪಿಐ ಅಭ್ಯರ್ಥಿ ವಿ.ಎಸ್‌.ಸುನಿಲ್‌ ಕುಮಾರ್‌ ವಿರುದ್ಧ 74,000 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

9 : ಮಾಧವಿ ಲತಾ: ತೆಲುಗು, ತಮಿಳು ಸಿನಿಮಾಗಳಲ್ಲಿ ಪ್ರಖ್ಯಾತರಾಗಿದ್ದ ನಟಿ ಮಾಧವಿ ಲತಾ ಅವರು ಹೈದರಾಬಾದ್‌ನಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ, ಕ್ಷೇತ್ರದಲ್ಲಿ ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಒವೈಸಿ ವಿರುದ್ಧ ಸೋತಿದ್ದಾರೆ.

ಟಾಪ್ ನ್ಯೂಸ್

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

1-sadsd

T20 WC; ಭಾರತ-ದಕ್ಷಿಣ ಆಫ್ರಿಕಾ: ಸೋಲಿಲ್ಲದ ಸರದಾರರ ಫೈನಲ್‌ ಸಮರ

1-police

New Criminal ಕಾನೂನು ಜಾರಿ: ಪೊಲೀಸ್‌ ಠಾಣೆಗಳಲ್ಲಿ ಜು.1ಕ್ಕೆ ವಿಶೇಷ ಕಾರ್ಯಕ್ರಮ

1-neet

NEET ಗದ್ದಲಕ್ಕೆ ಸಂಸತ್‌ ಕಲಾಪ ಬಲಿ; ಉಭಯ ಸದನದಲ್ಲಿ ಕೋಲಾಹಲ

CT Ravi; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

CT Ravi; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-police

New Criminal ಕಾನೂನು ಜಾರಿ: ಪೊಲೀಸ್‌ ಠಾಣೆಗಳಲ್ಲಿ ಜು.1ಕ್ಕೆ ವಿಶೇಷ ಕಾರ್ಯಕ್ರಮ

1-neet

NEET ಗದ್ದಲಕ್ಕೆ ಸಂಸತ್‌ ಕಲಾಪ ಬಲಿ; ಉಭಯ ಸದನದಲ್ಲಿ ಕೋಲಾಹಲ

Exam

NTA ಸುಧಾರಣೆಗೆ ಪೋಷಕರು, ವಿದ್ಯಾರ್ಥಿಗಳಿಂದ ಸಲಹೆ ಆಹ್ವಾನ

1—dsadssad

Maharashtra; ಕರ್ನಾಟಕದಂತೆ ಸ್ತ್ರೀಯರಿಗೆ ಮಾಸಿಕ ನೆರವು

1-weddding

Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

Terror 2

FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ

1-sadsd

T20 WC; ಭಾರತ-ದಕ್ಷಿಣ ಆಫ್ರಿಕಾ: ಸೋಲಿಲ್ಲದ ಸರದಾರರ ಫೈನಲ್‌ ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.