![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 16, 2020, 12:24 AM IST
ಲಕ್ನೋ: ಉತ್ತರಪ್ರದೇಶದ ಅಜಂಗಢದ ತರ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ದಲಿತ ನಾಯಕರೊಬ್ಬರ ಹತ್ಯೆ ನಡೆದಿದ್ದು, ತದನಂತರ ಭಾರೀ ಹಿಂಸಾಚಾರ ಭುಗಿಲೆದ್ದಿದೆ. ಶನಿವಾರ ಬೆಳಗ್ಗೆ ನಡೆದ ಗಲಭೆ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾಲು¤ಳಿತಕ್ಕೆ ಬಲಿಯಾಗಿದ್ದಾನೆ. ಇದರಿಂದ ಬನ್ಸ್ಗ್ರಾಮ್ ಪ್ರದೇಶ ಉದ್ವಿಗ್ನಗೊಂಡಿದೆ.
ಶುಕ್ರವಾರ ರಾತ್ರಿ ದಲಿತ ನಾಯಕ ಸತ್ಯಮೇವ ಜಯತೇ ಪಪ್ಪು ಎಂಬವರನ್ನು ಕೊಲೆ ಮಾಡಲಾಗಿತ್ತು. ಇದರಿಂದ ಕೆರಳಿದ ಅವರ ಅಪಾರ ಅಭಿಮಾನಿಗಳು ಹಿಂಸಾತ್ಮಕ ಪ್ರತಿಭಟನೆ ಆರಂಭಿಸಿದ್ದರು. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾಲು¤ಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಈ ಘಟನೆಯಿಂದಾಗಿ ಇನ್ನಷ್ಟು ಕೆರಳಿದ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ಘಟನೆಯ ಬಗ್ಗೆ ಬಿಎಸ್ಪಿ ನಾಯಕಿ ಮಾಯಾವತಿ ಆಕ್ರೋಶ ವ್ಯಕ್ತ ಪಡಿಸಿದ್ದು, ಉತ್ತರ ಪ್ರದೇಶದ ಬಿಜೆಪಿ ಸರಕಾರ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿ ಸಿದ್ದಾರೆ. ಇದೇ ವೇಳೆ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಹಿಂಸಾಚಾರ ನಡೆಸಿದವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕೇಸು ದಾಖಲಿಸಿ, ಆಸ್ತಿಪಾಸ್ತಿಯನ್ನು ವಶಪಡಿಸಿಕೊಳ್ಳಿ ಎಂದು ಆದೇಶಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.