Gujarat: ಅಪಾಯದ ಮಟ್ಟ ಮೀರಿದ ನದಿಗಳು
Team Udayavani, Aug 27, 2024, 11:19 PM IST
ಗಾಂಧಿನಗರ: ಗುಜರಾತ್ನಲ್ಲಿ ಸತತ 3ನೇ ದಿನವೂ ಭಾರೀ ಮಳೆ ಆಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಕಳೆದ 2 ದಿನದಲ್ಲಿ 15,000 ಮಂದಿಯನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದ್ದು, 300 ಮಂದಿಯನ್ನು ರಕ್ಷಿಸಲಾ ಗಿದೆ. ರಕ್ಷಣೆಗಾಗಿ ಸೇನೆಯ 6 ತುಕಡಿಯನ್ನೂ ನಿಯೋಜಿಸಲಾಗಿದೆ.
ವಿಶ್ವಾಮಿತ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸಮೀಪದ ಪ್ರದೇಶಗಳು ಜಲಾವೃತವಾಗಿವೆ. ವಡೋದರದಲ್ಲಿ 8361 ಮಂದಿ, ಪಂಚ ಕಮಲ್ ಜಿಲ್ಲೆಯಲ್ಲಿ 4000 ಮಂದಿ ಯನ್ನು ಸ್ಥಳಾಂತರಿಸಲಾಗಿದೆ. ವಾಯು ಪಡೆ ಮತ್ತು ಕರಾವಳಿ ಭದ್ರತಾ ಪಡೆ ಸಹಾಯದಿಂದ 300 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ 75 ಮಂದಿ ತುಂಬು ಗರ್ಭಿಣಿಯರಿದ್ದಾರೆ ಎಂದು ಹೇಳಿದ್ದಾರೆ.
ಒಟ್ಟಾರೆ ಮಳೆ ಪೀಡಿತ ಪ್ರದೇಶಗಳಿಂದ ಈ ವರೆಗೆ 23,870 ಮಂದಿಯನ್ನು ಸ್ಥಳಾಂತರಿಸಲಾಗಿದೆ. ರಾಜಸ್ಥಾನದ ಜೈಪುರ, ಉದಯಪುರ, ಬನಸ್ವಾರ, ದುಂಗಾರ್ಪುರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿದೆ. ಕಾಶ್ಮೀರದಲ್ಲಿ ಮೇಘ ಸ್ಫೋಟದಲ್ಲಿ ನಾಪತ್ತೆಯಾಗಿ ದ್ದವರ ಪೈಕಿ 2 ಶವ ಮಂಗಳವಾರ ಪತ್ತೆಯಾಗಿದೆ. ಇದರಲ್ಲಿ 12 ವರ್ಷದ ಬಾಲಕನ ಶವವೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.