ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Team Udayavani, Oct 3, 2024, 1:52 PM IST
ಬಿಹಾರ: ವಾಕಿಂಗ್ ಹೊರಟಿದ್ದ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಕಜ್ ಯಾದವ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಗುಂಡಿನ ದಾಳಿ ನಡೆಸಿರುವ ಘಟನೆ ಬಿಹಾರದ ಮುಂಗೇರ್ನಲ್ಲಿ ಗುರುವಾರ (ಅ.3) ರಂದು ಮುಂಜಾನೆ ಸಂಭವಿಸಿದೆ.
ಘಟನೆಯಿಂದ ಪಂಕಜ್ ಯಾದವ್ ಅವರ ಸ್ಥಿತಿ ಗಂಭೀರವಾಗಿದ್ದು ಕೂಡಲೇ ಅಲ್ಲಿನ ಸ್ಥಳೀಯರು ಪಂಕಜ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಆರ್ಜೆಡಿ ಮಾಜಿ ಶಾಸಕ ವಿಜಯ್ ಕುಮಾರ್, ಯಾದವ್ ಅವರು ಪ್ರತಿದಿನ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದರು. ಈ ನಡುವೆ ಬೈಕ್ ನಲ್ಲಿ ಬಂದ ಇಬ್ಬರು ಯಾದವ್ ಅವರನ್ನು ಸುಮಾರು ಒಂದು ಕಿಲೋಮೀಟರ್ ದೂರದ ವರೆಗೆ ಹಿಂಬಾಲಿಸಿ ಬಳಿಕ ಹಲವು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ ಆದರೆ ಈ ವೇಳೆ ಯಾದವ್ ಅವರು ದಾಳಿಕೋರರಿಂದ ತಪ್ಪಿಸ್ಕೊಳ್ಳಲು ಯತ್ನಿಸಿದ್ದಾರೆ ಈ ನಡುವೆ ಒಂದು ಗುಂಡು ಅವರ ಎದೆಗೆ ಹೊಕ್ಕಿದೆ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಅಲ್ಲಿನ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಘಟನೆ ನಡೆದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಸದ್ಯ ಯಾದವ್ ಅರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಆರೋಪಿಗಳಲ್ಲಿ ಒಬ್ಬ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಆತನ ಸಂಪರ್ಕದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: Isha Foundation: ಈಶ ಫೌಂಡೇಶನ್ ವಿರುದ್ಧ ತನಿಖೆ-ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi:5,600 ಕೋಟಿ ರೂಪಾಯಿ ಡ್ರಗ್ ಸ್ಮಗ್ಲಿಂಗ್ ಕಿಂಗ್ ಪಿನ್ ಕಾಂಗ್ರೆಸ್ ಮುಖಂಡ? BJP
Isha Foundation: ಈಶ ಫೌಂಡೇಶನ್ ವಿರುದ್ಧ ತನಿಖೆ-ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಗೆ ಇ.ಡಿ ಸಮನ್ಸ್
Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…
Contract Carriage: ಬೈಕ್ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss Kannada 11: ಚೈತ್ರಾ ಕುಂದಾಪುರರನ್ನು ಹೊರಗಿಡಿ; ಭೋಜರಾಜ್ ಆಗ್ರಹ
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್ಯಾಲಿ
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.