![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Feb 9, 2021, 9:05 PM IST
ಉತ್ತರ ಪ್ರದೇಶ: ಅಂತ್ಯಕ್ರಿಯೆಗೆಂದು ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಜೀಪ್ ಒಂದಕ್ಕೆ ಟ್ರಕ್ ವಾಹನ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲಿಯೇ ಮೃತ ಪಟ್ಟು 11 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ- ಜೌನ್ ಪುರ ಹೆದ್ದಾರಿಯ ಜಲಾಲ್ ಪುರ ಬಳಿ ನಡೆದಿದೆ.
ಸಾವಿಗೀಡಾದವರನ್ನು ಅಮರ್ ಬಹದ್ದೂರ್ ಯಾದವ್(58), ರಾಮ್ ಸಿಂಗಾರ್ ಯಾದವ್ (38) ಕಮಲಾ ಪ್ರಸಾದ್ ಯಾದವ್ (60) ರಾಜ್ ಕುಮಾರ್(65), ಮುನ್ನಿಲಾಲ್ (38) ಹಾಗೂ ಇಂದ್ರಜಿತ್ ಯಾದವ್(48) ಎಂದು ಗುರುತಿಸಲಾಗಿದೆ. . ಇನ್ನು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಕೂಡಾ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಮದ್ಯ ಖಜಾನೆ ಧಣಿ,ಮನೆಯನ್ನೇ ಕಚೇರಿ ಮಾಡಿದ್ದ BBMP ಅಧಿಕಾರಿ ದೇವೇಂದ್ರಪ್ಪ ಸೇವೆಯಿಂದ ಅಮಾನತು!
ಏನಿದು ಘಟನೆ?
ಜಲಾಲ್ ಪುರ ನಿವಾಸಿಯಾದ ದಾಂಡೇ ದೇವಿ (112) ಅವರು ಮೃತಪಟ್ಟಿದ್ದರು. ಇವರ ಅಂತ್ಯ ಕ್ರಿಯೆಯನ್ನು ನೆರವೇರಿಸಲು ಅಳಿಯ ಲಕ್ಷ್ಮೀ ಶಂಕರ್ ಯಾದವ್ ರನ್ನು ಒಳಗೊಂಡಂತೆ 17 ಜನರು ವಾರಣಾಸಿಯ ಮಣಿಕರ್ಣಿಕಾ ಘಾಟ್ ಗೆ ತೆರಳಿದ್ದರು. ಅಲ್ಲಿಂದ ವಾಪಾಸ್ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಆದರೆ ಅಷ್ಟರಲ್ಲೇ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.