![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 15, 2020, 1:49 PM IST
ಹೈದರಾಬಾದ್:ರಾಜ್ಯದ ಮೆದ್ ಚಾಲ್ -ಮಲ್ಕಾಜ್ ಗಿರಿ ಜಿಲ್ಲೆಯ ಸ್ಥಳೀಯ ಕಂದಾಯ ಅಧಿಕಾರಿ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಸುಮಾರು 1.1 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಪಟ್ಟಣದ ಎಎಸ್ ರಾವ್ ನಗರದ ಬಾಡಿಗೆ ಮನೆಯಲ್ಲಿ ಲಂಚ ಪಡೆಯುತ್ತಿದ್ದಾಗ ಕಂದಾಯ ಅಧಿಕಾರಿ ಎರ್ವಾ ಬಾಲರಾಜು ನಾಗರಾಜು ಭ್ರಷ್ಟಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿರುವುದಾಗಿ ವರದಿ ತಿಳಿಸಿದೆ.
ಈ ದಾಳಿಯಲ್ಲಿ ಗ್ರಾಮಾಧಿಕಾರಿ ಮತ್ತು ಇಬ್ಬರು ರಿಯಲ್ ಎಸ್ಟೇಟ್ ಏಜೆಂಟರುಗಳನ್ನು ಬಂಧಿಸಲಾಗಿದೆ. ಬಂಧಿತರ ನಿವಾಸ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ದೃಶ್ಯಗಳಲ್ಲಿ, ಭ್ರಷ್ಟಾಚಾರ (ಎಸಿಬಿ) ನಿಗ್ರಹ ದಳದ ಅಧಿಕಾರಿಗಳಲ್ಲಿ ಕೆಲವರು ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಫೇಸ್ ಮಾಸ್ಕ್ ಹಾಕಿಕೊಂಡು ಸೋಫಾದಲ್ಲಿ ಕುಳಿತು ನೋಟುಗಳ ಹಲವಾರು ಬಂಡಲ್ ಗಳಲ್ಲಿರುವ ಹಣವನ್ನು ಎಣಿಸುತ್ತಿರುವುದು ವರದಿಯಾಗಿದೆ.
100 ರೂಪಾಯಿ ಹಾಗೂ 500 ರೂಪಾಯಿ ನೋಟುಗಳ ಕಂತೆ ಇದಾಗಿದೆ ಎಂದು ವರದಿ ವಿವರಿಸಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ತನ್ನ ಕಾರ್ಯವ್ಯಾಪ್ತಿಯಲ್ಲಿ ಬರುವ 28 ಎಕರೆ ಜಾಗದ ವಿವಾದವನ್ನು ಬಗೆಹರಿಸಿಕೊಡಲು ನಾಗರಾಜು ಎರಡು ಕೋಟಿ ರೂಪಾಯಿ ಲಂಚ ಕೇಳಿರುವುದಾಗಿ ಆರೋಪಿಸಿದ್ದಾರೆ.
ಮನೆಯ ಮೇಲೆ ದಾಳಿ ನಡೆಸಿದಾಗ 1.1 ಕೋಟಿ ರೂಪಾಯಿ ನಗದು ಹೊರತುಪಡಿಸಿ, ಚಿನ್ನ ಮತ್ತು 28 ಲಕ್ಷ ರೂಪಾಯಿ ಹೆಚ್ಚುವರಿ ನಗದು ಪತ್ತೆಯಾಗಿದ್ದು, ಹಲವಾರು ಜಾಗಗಳ ದಾಖಲೆಗಳು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
ರಾಜ್ಯ ಕಂದಾಯ ಇಲಾಖೆಯಲ್ಲಿ ನೂರಾರು ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರುವುದಾಗಿ ಹೇಳಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.