![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 24, 2019, 5:40 PM IST
ಪುಣೆ: ಈರುಳ್ಳಿ ಬೆಲೆ ಗಗನ ಮುಖೀಯಾಗಿರುವಂತೆಯೇ ಪಾಟ್ನಾದ ರೈತರೊಬ್ಬರ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ಈರುಳ್ಳಿ ಹಾಗೂ ಮಹಾರಾಷ್ಟ್ರದ ನಾಸಿಕ್ನಲ್ಲಿ ರೈತರೊಬ್ಬರ ಗೋದಾಮಿನಿಂದ 1 ಲಕ್ಷ ರೂ. ಮೌಲ್ಯದ ಈರುಳ್ಳಿ ಕಳವು ಮಾಡಿರುವ ಘಟನೆ ವರದಿಯಾಗಿದೆ.
ಅಪರಿಚಿತ ವ್ಯಕ್ತಿಗಳು ಈ ಕೃತ್ಯ ನಡೆಸಿರುವುದಾಗಿ ರೈತ ರಾಹುಲ್ ಬಾಜಿರಾವ್ ಪಗಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಬೇಸಗೆ ಈರುಳ್ಳಿ ದಾಸ್ತಾನನ್ನು ತಮ್ಮ ಗೋದಾಮಿನಲ್ಲಿ ಇಟ್ಟಿದ್ದಾಗಿ ಅವರು ಹೇಳಿದ್ದಾರೆ.
ಗೋದಾಮಿಲ್ಲಿ 117 ಚೀಲಗಳಲ್ಲಿ 25 ಟನ್ ಈರುಳ್ಳಿ ಇಡಲಾಗಿತ್ತು.
ರವಿವಾರ ಸಂಜೆ ಹೊತ್ತಿಗೆ ಗೋದಾಮಿನಿಂದ ಈರುಳ್ಳಿ ಕಳವಾಗಿರುವುದು ಬೆಳಕಿಗೆ ಬಂದಿದೆ ಎಂದು ರಾಹುಲ್ ಹೇಳಿದ್ದಾರೆ. ಸದ್ಯದ ಸಂದರ್ಭದಲ್ಲಿ ಈರುಳ್ಳಿಯನ್ನು ಇಲ್ಲಿನ ಎಪಿಎಂಸಿಯಲ್ಲಿ ಹರಾಜು ಹಾಕಲಾಗುತ್ತದೆ. ಇದರ ಬೆಲೆ ಕೆ.ಜಿ.ಗೆ 100 ರೂ.ಗಳಿಷ್ಟಿದೆ.
ಏತನ್ಮಧ್ಯೆ ದಿಲ್ಲಿಯಲ್ಲಿ ಈರುಳ್ಳಿ ಬೆಲೆ 70-80 ರೂ.ಗಳಿಗೆ ಏರಿಕೆಯಾಗಿದೆ. ದೇಶಾದ್ಯಂತ ವಿವಿಧ ಮೆಟ್ರೋಗಳಲ್ಲೂ ಈರುಳ್ಳಿ ಬೆಲೆ ಏರಿಕೆಯಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.