ಬಿಜೆಪಿಯ 2ನೇ ಹಂತದ ಹೋರಾಟ ಶುರು


Team Udayavani, Dec 4, 2018, 11:42 AM IST

sabarimala-temple-800.jpg

ತಿರುವನಂತಪುರ: ಶಬರಿಮಲೆ ದೇಗುಲ ವಿಚಾರದಲ್ಲಿ ಕೇರಳದಲ್ಲಿನ ಎಲ್‌.ಡಿ.ಎಫ್. ಸರಕಾರಜನರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, 2ನೇ ಹಂತದ ಹೋರಾಟವಾಗಿ ಕೇರಳ ವಿಧಾನಸಭೆ ಎದುರು ಸರಣಿ ಉಪವಾಸ ಮತ್ತು ಪ್ರತಿಭಟನೆಯನ್ನು ಆರಂಭಿಸಿದೆ. ಸೋಮವಾರ ಪಕ್ಷದ ನಾಯಕಿ ಸರೋಜ್‌ ಪಾಂಡೆ ಇದಕ್ಕೆ ಚಾಲನೆ ನೀಡಿದ್ದು, ಬಿಜೆಪಿ ನಾಯಕ ಎ.ಎನ್‌.ರಾಧಾಕೃಷ್ಣನ್‌ ನೇತೃತ್ವದಲ್ಲಿ ನಿರಶನ ಶುರುವಾಗಿದೆ. 14 ಜಿಲ್ಲೆಗಳ ನಾಯಕರು ಮತ್ತು ಕಾರ್ಯಕರ್ತರೂ ಇದರಲ್ಲಿ ಭಾಗಿಯಾಗಿದ್ದಾರೆ.

ತಿರುವನಂತಪುರದಲ್ಲಿ ನಿರಶನಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ಸಂಸದೆ ಸರೋಜ್‌ ಪಾಂಡೆ, ಶಬರಿಮಲೆ ವಿಚಾರವನ್ನು ಸಂಸತ್‌ನಲ್ಲಿ ಪ್ರಸ್ತಾವಿಸುತ್ತೇವೆ. ಚರ್ಚೆಗೆ ದಾರಿ ಯಾವತ್ತೂ ಮುಕ್ತವಾಗಿರಬೇಕು ಎಂದಿದ್ದಾರೆ. ಕೇರಳ ಸರಕಾರ ಶಬರಿಮಲೆ ವಿಚಾರವನ್ನು ಸಮರ್ಥವಾಗಿ ನಿಭಾಯಿಸಲಿಲ್ಲ ಎಂದೂ ದೂರಿದ್ದಾರೆ.

ಕೇರಳ ಬಿಜೆಪಿ ಅಧ್ಯಕ್ಷ ಪಿ.ಎಸ್‌.ಶ್ರೀಧರನ್‌ ಪಿಳ್ಳೆ ಮಾತನಾಡಿ ‘ಕೇರಳದಲ್ಲೀಗ ಅರಣ್ಯ ನ್ಯಾಯ ಪಾಲನೆಯಾಗುತ್ತಿದೆ. ಸಿಪಿಎಂನ ಸಂವಿಧಾನ ಪರಮೋಚ್ಚವಾದದ್ದಲ್ಲ. ಸಾರ್ವಕಾಲಿಕವಾಗಿ ಒಪ್ಪಿಕೊಂಡ ಭಾರತದ ಸಂವಿಧಾನವೇ ಶ್ರೇಷ್ಠವಾದದ್ದು’ ಎಂದರು. ಕೇರಳ ವಿಧಾನಸಭೆಯಲ್ಲಿಯೂ ಶಬರಿ ಮಲೆ ವಿವಾದ ಕೋಲಾಹಲಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನಡುವೆ ವಾಗ್ವಾದ ನಡೆದಿದೆ. ಕಲಾಪ ಆರಂಭವಾಗುತ್ತಲೇ ಯುಡಿಎಫ್ನ ಮೂವರು ಶಾಸಕರು ಸದನದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ  ಆರಂಭಿಸಿದರು.

ಶಾ ನಾಯಕರೇ?: ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಚೆನ್ನಿತ್ತಲ ವಿರುದ್ಧ ಹರಿಹಾಯ್ದು “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೂಚನೆಯಂತೆ ಕಾಂಗ್ರೆಸ್‌ ನಾಯಕರು ವರ್ತಿಸುತ್ತಿದ್ದಾರೆ. ಅವರ ನಾಯಕ ರಾಹುಲ್‌ ಗಾಂಧಿಯೋ, ಅಮಿತ್‌ ಶಾ ಅವರೋ? ವಿಧಾನ ಸಭೆಯ ಹೊರಗೆ ಬಿಜೆಪಿ ನಾಯಕರು ಸತ್ಯಾಗ್ರಹ ನಡೆಸುವ ಘೋಷಣೆ ಮಾಡಿದಾಗಲೇ ಪ್ರತಿಪಕ್ಷ ಯುಡಿಎಫ್ ಶಾಸಕರು ಸದನದಲ್ಲಿ ನಿರಶನ ಘೋಷಿಸುತ್ತಾರೆ ಎಂದು ತಾವು ತಿಳಿದದ್ದು ಸರಿ ಎಂದಿದ್ದಾರೆ ಸಿಎಂ ಪಿಣರಾಯಿ. ಈ ಮಾತುಗಳಿಗೆ ವಿಪಕ್ಷ ಸದಸ್ಯರು ಕ್ರುದ್ಧಗೊಂಡು ಧರಣಿ ನಡೆಸಿ, ಬಳಿಕ ಸಭಾತ್ಯಾಗ ಮಾಡಿದರು.

ಬಂಗಾಲ ಕೊಲ್ಲಿಗೆ ಎಸೆಯುತ್ತೇವೆ: ಪ್ರಹ್ಲಾದ ಜೋಶಿ
ಧಾರವಾಡ ಕ್ಷೇತ್ರದ ಸಂಸದ ಪ್ರಹ್ಲಾದ್‌ ಜೋಶಿ, ಕೇರಳದಲ್ಲಿನ ಎಲ್‌ಡಿಎಫ್ ಸರಕಾರ‌ದಿಂದ ಶಬರಿಮಲೆಯ ಸಂಪ್ರದಾಯ ನಾಶವಾಗುತ್ತಿದೆ. ರಾಜ್ಯದ ಪರಿಸ್ಥಿತಿ ಅಧ್ಯಯನ ಮಾಡಿ, ಪಕ್ಷದ ಅಧ್ಯಕ್ಷ ಅಮಿತ್‌ ಶಾಗೆ ವರದಿ ಸಲ್ಲಿಸಲಿದ್ದೇವೆ ಎಂದಿದ್ದಾರೆ. ಬ್ರಿಟಿಷರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತೇ ಹೊರತು, ವಿವಿಧ ನಂಬಿಕೆಗಳನ್ನು ಹೊಂದಿದ ಭಕ್ತರ ವಿರುದ್ಧವಲ್ಲ ಎಂದಿದ್ದಾರೆ. ಜತೆಗೆ ಕೇಂದ್ರ ಸಚಿವ ಪೊನ್‌ ರಾಧಾಕೃಷ್ಣನ್‌ ಜತೆಗೆ ಐಪಿಎಸ್‌ ಅಧಿಕಾರಿ ಯತೀಶ್‌ ಚಂದ್ರ ಅನುಚಿತವಾಗಿ ವರ್ತಿಸಿದ್ದು ಖಂಡನೀಯ. ಅವರ ವಿರುದ್ಧ ಸಂಸತ್‌ನಲ್ಲಿ ಹಕ್ಕುಚ್ಯುತಿ ಮಂಡಿಸಲು ಸಚಿವರಿಗೆ ಮನವಿ ಮಾಡುವುದಾಗಿಯೂ ಹೇಳಿದ್ದಾರೆ. ಕೇರಳ ರಾಜ್ಯ ಸರಕಾರಇದೇ ರೀತಿಯ ಧೋರಣೆ ಅನುಸರಿಸುತ್ತಿದ್ದರೆ, ಅದನ್ನು ಕಿತ್ತು ಬಂಗಾಲ ಕೊಲ್ಲಿಗೆ ಎಸೆಯುತ್ತೇವೆ ಎಂದೂ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.