![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 20, 2020, 5:32 PM IST
ಜೈಪುರ್: ಭಾರತೀಯ ಜನತಾ ಪಕ್ಷ ಸೇರುವಂತೆ ಆಹ್ವಾನಿಸಿದ್ದ ಮಾಜಿ ಡಿಸಿಎಂ ಸಚಿನ್ ಪೈಲಟ್ 30ರಿಂದ 35 ಕೋಟಿ ರೂಪಾಯಿ ಹಣದ ಆಮಿಷವೊಡ್ಡಿರುವುದಾಗಿ ರಾಜಸ್ಥಾನ್ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಗಂಭೀರವಾಗಿ ಆರೋಪಿಸಿದ್ದಾರೆ.
ಈ ಮಾತುಕತೆ ಪೈಲಟ್ ನಿವಾಸದಲ್ಲಿ ನಡೆದಿತ್ತು. ಕೂಡಲೇ ಸಿಂಗ್ ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ ಸಂಚು ನಡೆಯುತ್ತಿರುವುದಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಸಂದೇಶವನ್ನು ರವಾನಿಸಿದ್ದೆ ಎಂದು ತಿಳಿಸಿದ್ದಾರೆ.
ನಾನು ಸಚಿನ್ ಜೀ ಜತೆ ಮಾತನಾಡಿದ್ದೆ, ಈ ಸಂದರ್ಭದಲ್ಲಿ 30 ಕೋಟಿ ಕೊಡುತ್ತೇವೆ ಬಿಜೆಪಿ ಸೇರುವಂತೆ ಆಹ್ವಾನಿಸಿದ್ದರು. ಆದರೆ ನಾನು ಅದನ್ನು ನಿರಾಕರಿಸಿದ್ದೆ. ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದು ತಿಳಿಸಿರುವುದಾಗಿ ಮಾಲಿಂಗ ಸುದ್ದಿಗಾರರ ಜತೆ ಮಾತನಾಡುತ್ತ ವಿವರಿಸಿದ್ದಾರೆ.
ಭಾರತೀಯ ಜನತಾ ಪಕ್ಷ ಸೇರಲು ನಿರ್ದಿಷ್ಟವಾಗಿ ಎಷ್ಟು ಮೊತ್ತದ ಆಫರ್ ಕೊಟ್ಟಿದ್ದರು ಎಂಬುದನ್ನು ಬಹಿರಂಗಗೊಳಿಸಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ, 30ರಿಂದ 35 ಕೋಟಿ ರೂಪಾಯಿ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ. ನಾನು ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದರೆ ನನ್ನ ಕ್ಷೇತ್ರದ ಜನರಿಗೆ ಹೇಗೆ ಮುಖ ತೋರಿಸಲಿ ಎಂದು ಮಾಲಿಂಗ ಪ್ರಶ್ನಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.