
“ಸೈಕಲ್’ಗಾಗಿ 1.5 ಲಕ್ಷ ಪುಟಗಳ ದಾಖಲೆ ಸಲ್ಲಿಕೆ!
Team Udayavani, Jan 8, 2017, 3:45 AM IST

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷಗಳ ಬಣಗಳಲ್ಲಿ ಸೈಕಲ್ ಚಿಹ್ನೆ ಪಡೆಯುವ ಪ್ರಬಲ ಕಸರತ್ತು ಮುಂದುವರಿದಿದೆ.
ಅಖೀಲೇಶ್ ಯಾದವ್ ಅವರ ಬಣವು ನಿಜವಾದ ಸಮಾಜವಾದಿ ಪಕ್ಷವಾಗಿದೆ. ಈ ಬಣದಲ್ಲಿ 205 ಶಾಸಕರು, 15 ಸಂಸದರು ಹಾಗೂ ಹಲವು ವಿಧಾನ ಪರಿಷತ್ ಸದಸ್ಯರು, ಶೇ.90 ಮುಖಂಡರ ಬೆಂಬಲವಿದೆ ಎಂದು ಅಖೀಲೇಶ್ ಬಣದಲ್ಲಿ ತಂತ್ರಗಾರಿಕೆ ರೂಪಿಸುತ್ತಿರುವ ರಾಮ್ಗೊಪಾಲ್ ಯಾದವ್, ಚುನಾವಣಾ ಆಯೋಗಕ್ಕೆ ದಾಖಲೆಗಳು ಮತ್ತು ಶಾಸಕರ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ.
ಚಿಹ್ನೆ ಪಡೆಯುವ ಸಂಬಂಧ ದಾಖಲೆಗಳನ್ನು ಸಲ್ಲಿಸಲು ಚುನಾವಣಾ ಆಯೋಗವು ಸೋಮವಾರವರೆಗೆ ಕಾಲಾವಕಾಶ ನೀಡಿತ್ತು. ಆದರೆ 1.5 ಲಕ್ಷ ಕ್ಕೂ ಅಧಿಕ ಪುಟಗಳ ದಾಖಲೆಗಳನ್ನು ಸಲ್ಲಿಸಲಾಗಿದೆ. ಈ ದಾಖಲೆಗಳನ್ನು ಏಳು ದೊಡ್ಡ ರಟ್ಟಿನ ಬಾಕ್ಸ್ ಗಳಲ್ಲಿ ತುಂಬಿಕೊಡಲಾಗಿದೆ ಎಂದು ರಾಮಗೋಪಾಲ್ ಹೇಳಿದ್ದಾರೆ.
ಅಖೀಲೇಶ್ರಿಂದ ಜ. 11ರಂದು ಎಸ್ಪಿ ಪ್ರಣಾಳಿಕೆ?: ಸಮಾಜವಾದಿ ಪಕ್ಷದಲ್ಲಿ ಉಂಟಾಗಿರುವ ಎರಡು ಬಣಗಳ ನಡುವೆ ಸಮನ್ವಯತೆ ಮೂಡುವ ಸಾಧ್ಯತೆ ಕಡಿಮೆ ಇದೆ. ಹಾಗಾಗಿ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಜ. 11ರ ನಂತರ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಪಕ್ಷದ ಮುಖಂಡ, ಘಟಕ ಅಧ್ಯಕ್ಷ ನರೇಶ್ ಉತ್ತಮ್ ತಿಳಿಸಿದ್ದಾರೆ.
ಈ ನಡುವೆ, ಲಕ್ನೋದ ನಿವಾಸದಲ್ಲಿದ್ದ ಮುಲಾಯಂ ಶನಿವಾರ ಶಿವಪಾಲ್ ಯಾದವ್, ಆಜಂ ಖಾನ್, ಮತ್ತಿರರರ ಜತೆ ಮಾತುಕತೆ ನಡೆಸಿದರು. ಆದರೆ ಸಂಧಾನ ಯತ್ನ ಈ ದಿನವೂ ಮುಂದಡಿ ಇಡಲಿಲ್ಲ.
ನಾಳೆ ಸಿಧು ಕಾಂಗ್ರೆಸ್ ಸೇರ್ಪಡೆ?
ಹೊಸದಿಲ್ಲಿ: ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದಿರುವ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ. ಕಳೆದ 10 ವರ್ಷಗಳಿಂದ ಬಿಜೆಪಿಯಿಂದ ಪ್ರತಿನಿಧಿಸುತ್ತಿರುವ ಅವರು ಅಮೃತಸರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದು ಬಂದಿದೆ. ಪಂಜಾಬ್ ವಿಧಾನಸಭೆಗೆ ಫೆ.4ರಂದು ಮತದಾನ ನಡೆಯಲಿದೆ. ಆಮ್ ಆದ್ಮಿ ಪಕ್ಷ ಸೇರಲು ಸಿಧು ವಿಫಲ ಯತ್ನ ನಡೆಸಿ, ಕೊನೆಗೆ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.