ಆರೋಗ್ಯದಲ್ಲಿ ಏರುಪೇರು: ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಆಸ್ಪತ್ರೆಗೆ ದಾಖಲು
Team Udayavani, Apr 8, 2024, 11:04 AM IST
ಉತ್ತರಪ್ರದೇಶ: ಚುನಾವಣೆ ತಯಾರಿ ನಡೆಸುವ ನಡುವೆಯೇ ಸಮಾಜವಾದಿ ಪಕ್ಷಕ್ಕೆ (ಎಸ್ಪಿ) ಶಾಕ್ ಎದುರಾಗಿದೆ. ಯುಪಿಯ ಗೋರಖ್ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ತೀವ್ರ ಅಸ್ವಸ್ಥರಾಗಿದ್ದಾರೆ.
ಕುಟುಂಬಸ್ಥರು ಕಾಜಲ್ ಅವರನ್ನು ಲಕ್ನೋದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ. ನಿಶಾದ್ ಅವರು ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಆಕೆಯ ಪತಿ ಸಂಜಯ್ ನಿಶಾದ್ ಬಹಿರಂಗಪಡಿಸಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದ ಕಾಜಲ್ ನಿಶಾದ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಕ್ರಮದಲ್ಲಿ ಆರೋಗ್ಯ ಹದಗೆಟ್ಟಿದೆಯಂತೆ. ಹಾಲಿ ಬಿಜೆಪಿ ಸಂಸದ ರವಿ ಕಿಶನ್ ಶುಕ್ಲಾ ವಿರುದ್ಧ ಕಾಜಲ್ ನಿಶಾದ್ ಸ್ಪರ್ಧಿಸುತ್ತಿದ್ದಾರೆ.
ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ನಟಿ ಕಾಜಲ್ ನಿಶಾದ್ ಅವರು 2021 ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿದರು. ಅಂದಿನಿಂದ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ಅವರು ಕಪಿಯರ್ಗಂಜ್ ವಿಧಾನಸಭಾ ಕ್ಷೇತ್ರದಿಂದ ಎಸ್ಪಿ ಪರವಾಗಿ ಸ್ಪರ್ಧಿಸಿದ್ದರು. ಆದರೆ ಈ ವೇಳೆ ಅವರು ಸೋಲನುಭವಿಸಿದರು. ನಂತರ ಕಳೆದ ವರ್ಷ, ಅವರು ಗೋರಖ್ಪುರದ ಮೇಯರ್ ಹುದ್ದೆಗೆ ಸ್ಪರ್ಧಿಸಿ ಸೋತಿದ್ದರು. ಇತ್ತೀಚೆಗಷ್ಟೇ ಗೋರಖ್ಪುರ ಲೋಕಸಭಾ ಕ್ಷೇತ್ರದಿಂದ ಎಸ್ಪಿ ಎಂಪಿ ಟಿಕೆಟ್ ಹಂಚಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.
ಇದನ್ನೂ ಓದಿ: Bangkok; ಮೋದಿ ಗೆಲುವಿಗಾಗಿ 13 ಸಾವಿರ ಅಡಿ ಮೇಲಿಂದ ಸ್ಕೈ ಡೈವಿಂಗ್ ಪ್ರಚಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
MUST WATCH
ಹೊಸ ಸೇರ್ಪಡೆ
ಟಿಕೆಟ್ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
INDvsNZ: ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ವಿರಾಟ್ ಕೊಹ್ಲಿ
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.