Nawab Singh Yadav: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಸಮಾಜವಾದಿ ಪಕ್ಷದ ಮುಖಂಡ ಬಂಧನ
Team Udayavani, Aug 13, 2024, 1:47 PM IST
ಲಕ್ನೋ: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ (Samajwadi Party) ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ (ಆ.12ರಂದು) ಮಧ್ಯರಾತ್ರಿ 1:30ರ ಸುಮಾರಿಗೆ ಪೊಲೀಸರ 112 ಸಹಾಯವಾಣಿ ಸಂಖ್ಯೆಗೆ ಕರೆಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ನವಾಬ್ ಸಿಂಗ್ ಯಾದವ್ (Nawab Singh Yadav) ಎನ್ನುವ ಸಮಾಜವಾದಿ ಪಕ್ಷದ ಮುಖಂಡನನ್ನು ಬಂಧಿಸಿದ್ದಾರೆ.
ಪೊಲೀಸ್ ಸಹಾಯವಾಣಿಗೆ ಅಪ್ರಾಪ್ತೆ ಕರೆ ಮಾಡಿ, ಆಕೆಯನ್ನು ವಿವಸ್ತ್ರಗೊಳಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ಹೇಳಿದ್ದಾಳೆ. ಕೂಡಲೇ ಪೊಲೀಸರು ವಿಳಾಸವನ್ನು ಪತ್ತೆ ಹಚ್ಚಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಕನೌಜ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಮಿತ್ ಕುಮಾರ್ ಆನಂದ್ ಹೇಳಿದ್ದಾರೆ.
ಪೊಲೀಸರು ಭೇಟಿ ನೀಡಿದಾಗ ನವಾಬ್ ಸಿಂಗ್ ಯುವತಿ ಜತೆ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಉದ್ಯೋಗಾವಕಾಶ ನೆಪದಲ್ಲಿ ನನ್ನ ಚಿಕ್ಕಮ್ಮ ಇವರ ನಿವಾಸಕ್ಕೆ ಕರೆದುಕೊಂಡು ಬಂದಿದ್ದರು ಎಂದು ಬಾಲಕಿ ಪೊಲೀಸರ ಬಳಿ ಹೇಳಿದ್ದಾಳೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನ್ಯಾಯಾಲಯವು ಎಸ್ಪಿ ನಾಯಕನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬಂಧನದ ವೇಳೆ ನವಾಬ್ ಸಿಂಗ್ ಇದೊಂದು ಷಡ್ಯಂತ್ರ ಎಂದು ಆರೋಪಿಸಿದ್ದಾರೆ.
ನವಾಬ್ ಸಿಂಗ್ ಬಂಧನದ ಸುದ್ದಿ ಹೊರಬೀಳುವಂತೆ, ಪಕ್ಷ ಅವರಿಂದ ಅಂತರ ಕಾಯ್ದುಕೊಂಡಿದೆ. ಅವರಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲವೆಂದು ಎಸ್ಪಿ ಕನೌಜ್ ಜಿಲ್ಲಾಧ್ಯಕ್ಷ ಕಲೀಂ ಖಾನ್ ಹೇಳಿದ್ದಾರೆ.
ಚಂದನ್ ಸಿಂಗ್ ಯಾದವ್ ಅವರ ಪುತ್ರ ನವಾಬ್ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸದಸ್ಯರಲ್ಲ. ಅವರನ್ನು ಪಕ್ಷದೊಂದಿಗೆ ಜೋಡಿಸುವ ಪ್ರಯತ್ನಗಳ ಹೊರತಾಗಿಯೂ, ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅವರೊಂದಿಗೆ ನಮಗೆ ಯಾವುದೇ ಸಂಪರ್ಕವಿಲ್ಲವೆಂದು ಕಲೀಂ ಹೇಳಿದ್ದಾರೆ.
ನವಾಬ್ ಸಿಂಗ್ ವಿರುದ್ಧ ಕನೌಜ್ ನಗರ ಪೊಲೀಸ್ ಠಾಣೆ ಮತ್ತು ತಿರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಮತ್ತು ಗೂಂಡಾ ಕಾಯ್ದೆಯಡಿ ಇತರ ಮೂರು ಪ್ರಕರಣಗಳು ಸೇರಿದಂತೆ ಒಟ್ಟು 16 ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.