![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-415x235.jpg)
Panaji: ನರಕಾಸುರ ಸ್ಪರ್ಧೆಯಿಂದ ಸನಾತನ ಧರ್ಮದ ಭಾವನೆಗಳಿಗೆ ಧಕ್ಕೆ
Team Udayavani, Nov 18, 2023, 3:40 PM IST
![8-panaji](https://www.udayavani.com/wp-content/uploads/2023/11/8-panaji-1-620x372.jpg)
ಪಣಜಿ: ಗೋವಾ ರಾಜ್ಯ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರ್ವರಿನಲ್ಲಿರುವ ಹೌಸಿಂಗ್ ಬೋರ್ಡ್ ಜಮೀನಿನಲ್ಲಿ ಆಯೋಜಿಸಿದ್ದ ನರಕಾಸುರ ಸ್ಪರ್ಧೆಯಿಂದ ಸನಾತನ ಧರ್ಮದ ಭಾವನೆಗಳಿಗೆ ಧಕ್ಕೆಯಾಗಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪ ಮಾಡಿದ್ದ ಸಚಿವ ಸುದಿನ್ ಧವಳಿಕರ್ ಈಗ ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಬಿಜೆಪಿ ಸರಕಾರವನ್ನು ಖಂಡಿಸುವ ಧೈರ್ಯ ಮಾಡಬೇಕು ಎಂದು ಕಾಂಗ್ರೆಸ್ ಮೀಡಿಯಾ ಸೆಲ್ ಅಧ್ಯಕ್ಷ ಅಮರನಾಥ ಪಣಜಿಕರ್ ಆಗ್ರಹಿಸಿದರು.
ಪಣಜಿಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮರನಾಥ ಪಣಜಿಕರ್ ಮಾತನಾಡಿ, ದೀಪಾವಳಿಯಂದು ಬೆಳಗ್ಗೆ 8 ಗಂಟೆಯವರೆಗೆ ಪರ್ವರಿಯಲ್ಲಿ ನರಕಾಸುರನ ಪ್ರತಿಕೃತಿ ದಹಿಸುವ ಸಂಪ್ರದಾಯವನ್ನು ಪ್ರವಾಸೋದ್ಯಮ ಇಲಾಖೆ ಮುರಿದಿದೆ ಎಂದು ಆರೋಪಿಸಿದರು.
ನವೆಂಬರ್ 13 ರಂದು ಪರ್ವರಿಯಲ್ಲಿ ನಡೆದ ಬಹುಮಾನ ವಿತರಣಾ ಸಮಾರಂಭಕ್ಕೆ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ ಏಕೆ ಗೈರುಹಾಜರಾಗಿದ್ದರು ಎಂಬುದನ್ನು ವಿವರಿಸಬೇಕು. ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್, ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ಮತ್ತು ರೋಹನ್ ಖಂವಟೆ ಅವರು ಪ್ರಶ್ನೆ ಕೇಳಲು ಬಂದ ಕಾಂಗ್ರೆಸ್ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಧೈರ್ಯವಿಲ್ಲದ ಕಾರಣ ಕಾರ್ಯಕ್ರಮದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
ನರಕಾಸುರ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆ ಕೋಟ್ಯಂತರ ಸಾರ್ವಜನಿಕ ಹಣವನ್ನು ಖರ್ಚು ಮಾಡಿದ್ದು, ಸ್ಥಳೀಯ ಶಾಸಕ ಹಾಗೂ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ ಅವರು ದೂರ ಉಳಿದು ಫ್ಲಾಪ್ ಶೋ ಆಗಿ ಪರಿಣಮಿಸಿದೆ ಎಂದು ತಿಳಿಸಿದರು.
ಸನಾತನ ಧರ್ಮದ ಸಂಪ್ರದಾಯಗಳನ್ನು ಗೌರವಿಸದ ಬಿಜೆಪಿ ಸರಕಾರದ ನಾಚಿಕೆಗೇಡಿನ ಕೃತ್ಯ ಇದಾಗಿದೆ. ಬೇಜವಾಬ್ದಾರಿ ಪ್ರವಾಸೋದ್ಯಮ ಇಲಾಖೆಯಿಂದ ಸ್ಪರ್ಧೆಯಲ್ಲಿ ಪಾಶ್ಚಿಮಾತ್ಯ ಸಂಗೀತವನ್ನು ನುಡಿಸಲಾಯಿತು. ಗೋವಾದ ನಿಜವಾದ ಸಂಸ್ಕøತಿಯನ್ನು ಪ್ರವಾಸಿಗರಿಗೆ ತೋರಿಸುವ ಹೊಣೆ ಹೊತ್ತಿರುವ ಪ್ರವಾಸೋದ್ಯಮ ಇಲಾಖೆ ಇದು ಮೂರ್ಖತನ ಎಂದು ಹೇಳಿದರು.
ಉತ್ತರ ಗೋವಾ ಕಾಂಗ್ರೇಸ್ ಜಿಲ್ಲಾ ಕಾರ್ಯದರ್ಶಿ ಪ್ರಣಬ್ ಪರಬ್, ಕುಂಬಾರ್ಜುವಾ ಗ್ರೂಪ್ ಕಾಂಗ್ರೆಸ್ ಅಧ್ಯಕ್ಷ ವಿಶಾಲ್ ವಾಲ್ವೈಕರ್ ಮತ್ತು ಸಾಂತಾಕ್ರೂಜ್ ಗ್ರೂಪ್ ಕಾಂಗ್ರೆಸ್ ಅಧ್ಯಕ್ಷ ಜಾನ್ ನಜರೆತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-415x235.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-150x85.jpg)
Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!
![Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ](https://www.udayavani.com/wp-content/uploads/2024/07/re-150x96.jpg)
Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ
![Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/MANVi-150x91.jpg)
Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-150x90.jpg)
Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್ಡಿಕೆ
![1-ree](https://www.udayavani.com/wp-content/uploads/2024/07/1-ree-150x85.jpg)
Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್ಪಾಲ್, ರಶೀದ್ ಸಂಸದರಾಗಿ ಪ್ರಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.